ಮಳೆ ಅಬ್ಬರ: ಸೈದಾಪುರ ಜನ ತತ್ತರ


Team Udayavani, Aug 28, 2017, 2:39 PM IST

yad 2.jpg

„ಭೀಮಣ್ಣ ಬಿ. ವಡವಟ್‌
ಸೈದಾಪುರ: ಧಾರಕಾರ ಸುರಿದ ಮಳೆಗೆ ಸೈದಾಪುರ ಪಟ್ಟಣ ಕೆರೆಯಾಗಿ ಪರಿವರ್ತನೆಯಾಗಿದ್ದರೂ ಜನಪ್ರತಿನಿಧಿಗಳು ಮತ್ತು ಗ್ರಾಪಂ ಆಡಳಿತ ಜಾಣ ಕುರಡರಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರವಿವಾರ ಮಧ್ಯಾಹ್ನ ಏಕಾಏಕಿ ಸುರಿದ ಮಳೆಗೆ ಪಟ್ಟಣದ ತಗ್ಗು ಪ್ರದೇಶದ ಜನವಸತಿ ಕೇಂದ್ರಗಳಾದ ತಾಯಿ ಕಾಲೋನಿ, ಗಂಗಾನಗರ, ಲಕ್ಷ್ಮೀನಗರ ಸೇರಿದಂತೆ ಹಲವು ಪ್ರದೇಶದ ಮನೆಗಳಿಗೆ ಚರಂಡಿ ನೀರು ಸೇರಿದಂತೆ ಮಳೆ ನೀರು ನುಗ್ಗಿದೆ. ಇದರಿಂದ ಇಲ್ಲಿನ ನಾಗರಿಕರು ಮಳೆಯಲ್ಲಿಯೇ ಮನೆಗಳಿಗೆ ನುಗ್ಗುವ ನೀರನ್ನು ತಡೆಯಲು ಹರಸಾಹಸ ಪಟ್ಟರು. ನಡುಗಡ್ಡೆಯಾದ ಸೈದಾಪುರ ನೆಮ್ಮದಿ ಕೇಂದ್ರ: ನಿತ್ಯ ಸಾಕಷ್ಟು ಸಂಖ್ಯೆಯಿಂದ ಕೂಡಿರುತ್ತಿದ್ದ
ನೆಮ್ಮದಿ ಕೇಂದ್ರ ಕಚೇರಿ ಮಳೆಯಿಂದ ನೀರು ಆವರಿಸಿ ನಡುಗಡ್ಡೆಯಂತಾಗಿದೆ. ಕಚೇರಿಯಲ್ಲಿನ ದಾಖಲೆಗಳು ಹಾಳಾಗುವ ಸಂಭವ ಇದೆ. ಕೊಳಚೆ ನೀರು ತುಂಬಿದ ತಾಯಿ ಕಾಲೋನಿ: ಪಟ್ಟಣದ ತಾಯಿ ಕಾಲೋನಿಯಲ್ಲಿ ಒಳಚರಂಡಿ ಸಂಪೂರ್ಣ ಅವೈಜ್ಞಾನಿಕದಿಂದ ಕೂಡಿದೆ. ಮಳೆ ನೀರಿನ ಜೊತೆ ಚಂರಡಿ ನೀರು ಸಂಗ್ರಹವಾಗಿ ಸಂಪೂರ್ಣವಾಗಿ ಕೊಳಚೆ ನೀರಿನ ಕೆರೆಯಾಗಿದೆ. ಆತಂಕದಲ್ಲಿ ರೈತರು: ಅತಿಯಾದ ಮಳೆಯಿಂದ ಜಮೀನಿನಲ್ಲಿ ನೀರು ಆವರಿಸಿ ತೊಗರಿ, ಹತ್ತಿ ಬೆಳೆಗಾರರು ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲ ಮನೆಗಳ ಛಾವಣಿ ಕುಸಿದು ತೊಂದರೆ ಅನುಭಸುವಂತಾಗಿದೆ. 

ಶಾಸಕರು-ಜಿಲ್ಲಾಧಿಕಾರಿ ಗಮನಕ್ಕೆ
ಪಟ್ಟಣದ ಬಹುತೇಕ ಒಳ ಚರಂಡಿಗಳು ಅವೈಜ್ಞಾನಿಕವಾಗಿವೆ. ಅದರಲ್ಲಿ ಪಟ್ಟಣದ ಪ್ರಮುಖ ರಸ್ತೆಯಾದ ಅಂಬಿಗರ ಚೌಡಯ್ಯ ವೃತ್ತದಿಂದ ರೈಲ್ವೆ ಗೇಟ್‌ವರೆಗೆ ಸಿಸಿ ರಸ್ತೆ ನಿರ್ಮಿಸಲು ರಸ್ತೆ ಅಗೆದ ಮಣ್ಣು, ಅಲ್ಪ ಸ್ವಲ್ಪ ಚರಂಡಿ ನೀರು ಸಾಗುವ ದಾರಿಗಳನ್ನು ಮುಚ್ಚಿವೆ. ಈ ಕುರಿತು ಶಾಸಕರಿಗೆ, ಜಿಲ್ಲಾಧಿಕಾರಿ ಗಮನಕ್ಕೆ ತರಲಾಗಿದೆ. 

ಶಶಿಕಲಾ ಬಿ. ಪಾಟೀಲ ಕ್ಯಾತ್ನಾಳ,ಜಿಪಂ ಸದಸ್ಯೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.