ನಾಟಕ ಕಲೆ ಉಳಿಸಿ-ಬೆಳೆಸಿ: ಶಂಕರಗೌಡ


Team Udayavani, Mar 10, 2022, 2:50 PM IST

21art

ಯಾದಗಿರಿ: ಇತ್ತೀಚಿನ ದಿನಮಾನಗಳಲ್ಲಿ ನಾಟಕಗಳು ನೋಡುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಾಟಕ ಕಲೆ ಉಳಿಸಿ, ಬೆಳೆಸಬೇಕಾದ ಅಗತ್ಯವಿದೆ ಎಂದು ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಹೇಳಿದರು.

ಅಬ್ಬೆತುಮಕೂರಿನಲ್ಲಿ ಶ್ರೀ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ನಾಟಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಸಿನೆಮಾ, ಧಾರವಾಹಿಗಳ ಭರಾಟೆಯಲ್ಲಿ ನಾಟಕಗಳು ಅಳಿವಿನ ಅಂಚಿನಲ್ಲಿವೆ. ಇದು ಜೀವಂತ ಕಲೆಯಾಗಿದ್ದು, ಅದನ್ನು ಪೋಷಿಸಿಕೊಂಡು ಬಂದರೆ ಕಲಾವಿದರ ಬದುಕಿಗೆ ಆಸರೆಯಾಗಿ ನಿಂತಂತಾಗುತ್ತದೆ ಎಂದು ಹೇಳಿದರು.

ಡಾ| ವೀರೇಶ ಜಾಕಾ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್‌ ಮಹಾಮಾರಿ ಇಡಿ ಜಗತ್ತನ್ನು ತಲ್ಲಣಗೊಳಿಸಿತು. ಮೊದಲ ಮತ್ತು ಎರಡನೇ ಅಲೆಯಲ್ಲಿ ಅನೇಕ ಜನರು ಜೀವವನ್ನು ಕಳೆದುಕೊಂಡರು. ವಿಶ್ವಾರಾಧ್ಯರ ಕೃಪೆಯಿಂದ ಮೂರನೇ ಅಲೆಯಲ್ಲಿ ಯಾವುದೇ ಹಾನಿಯಾಗದಿರುವುದು ಒಳ್ಳೆಯ ಲಕ್ಷಣವೆಂದು ಹೇಳಿದರು.

ಪೀಠಾಧಿಪತಿಗಳಾದ ಡಾ| ಗಂಗಾಧರ ಸ್ವಾಮಿಗಳು ಮಾತನಾಡಿ, ನಾಟಕಗಳು ಜನತೆಗೆ ಉತ್ತಮ ಸಂದೇಶವನ್ನು ನೀಡಬಲ್ಲ ಪ್ರಬಲ ಮಾಧ್ಯಮವಾಗಿದೆ. ಅದರಲ್ಲಿಯೂ ಪೌರಾಣಿಕ ನಾಟಕಗಳು ಜನತೆಗೆ ಸನ್ಮಾರ್ಗದಲ್ಲಿ ನಡೆಯುವಂತೆ ಪ್ರೇರಣೆ ನೀಡುತ್ತದೆ ಎಂದರು.

ಹಿರಿಯ ನ್ಯಾಯವಾದಿಗಳಾದ ಎಸ್‌.ಬಿ. ಪಾಟೀಲ, ಗಂಗಾಧರ ಆವಂಟಿ, ನೋಟರಿ ಎಸ್‌.ಬಿ.ನಾಯಕ, ವೈದ್ಯರಾದ ಡಾ| ಸಿ.ಎಂ. ಪಾಟೀಲ, ಡಾ| ಮಹಾದೇವರೆಡ್ಡಿ ಗೌಡರೆಡ್ಡಿ ಬಿಳ್ಹಾರ, ಡಾ| ಸುಭಾಶ್ಚಂದ್ರ ಕೌಲಗಿ ಇತರರಿದ್ದರು. ಸದ್ಗುರು ಸಮರ್ಥ ಪರಮಾನಂದ ಶಿವಯೋಗಿಗಳ ಮಹಾತ್ಮೆ ನಾಟಕ ಜನಮನ ಸೂರೆಗೊಂಡಿತು.

ಪ್ರತಿಯೊಬ್ಬರೂ ಬದುಕಿನಲ್ಲಿ ಸದಾಚಾರ ಸಂಪನ್ನರಾಗಿ ಬಾಳಬೇಕು. ಯಾವುದೇ ರಾಗ ದ್ವೇಷಗಳಿಗೆ ಈಡಾದರೆ ಬಾಳು ಹಸನಾಗುವುದಿಲ್ಲ. ಸಾತ್ವಿಕತೆಯನ್ನು ಮೈಗೂಡಿಸಿಕೊಳ್ಳಬೇಕಾದರೆ ಒಳ್ಳೆಯ ಆಚಾರಗಳನ್ನು ಅನುಸರಿಸಬೇಕು. ಒಳ್ಳೆಯ ವಿಚಾರಗಳನ್ನು ಅರಿತು ಆಚರಿಸಿದಾಗ ಬಾಳು ಹಸನಾಗುತ್ತದೆ. -ಡಾ| ಗಂಗಾಧರ ಸ್ವಾಮೀಜಿ, ಪೀಠಾಧಿಪತಿ ಶ್ರೀ ವಿಶ್ವರಾಧ್ಯಮಠ ಅಬ್ಬೆತುಮಕೂರು

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.