ಸ್ಕಾಡಾ ಕಾಮಗಾರಿ ಪರಿಶೀಲನೆ


Team Udayavani, Aug 9, 2017, 5:53 PM IST

channel.JPEG

ನಾರಾಯಣಪುರ: ಕೇಂದ್ರಿಯ ಜಲ ಆಯೋಗದಿಂದ ನಿಯೋಜಿತ ನಿರ್ದೇಶಕರ ತಂಡದ ಸದಸ್ಯರು ಕೃಷ್ಣಾ ಭಾಗ್ಯ ಜಲ ನಿಗಮದ ಅಡಿ ಪ್ರಗತಿಯಲ್ಲಿರುವ ಸ್ಕಾಡಾ ಕಾಮಗಾರಿ ಪರಿಶೀಲಿಸಿದರು. ಸ್ಕಾಡಾದ ಮಾಸ್ಟರ್‌ ಕಂಟ್ರೋಲ್‌ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಸದಸ್ಯರು ಕಾಮಗಾರಿ ಕುರಿತು ಸಂಬಂಧಿಸಿದ ಗುತ್ತಿಗೆ ಕಂಪನಿ ಎಂಡಿ ಹಾಗೂ ಕೆಬಿಜೆಎನ್‌ಎಲ್‌ ಮುಖ್ಯ ಇಂಜಿನಿಯರಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ದೇಶದಲ್ಲೆ ಮೊದಲು ಪ್ರಾಯೋಗಿಕವಾಗಿ ಕೃಷ್ಣಾ ಅಚ್ಚು ಕಟ್ಟು ಭಾಗದ ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆ ಅಡಿಯಲ್ಲಿ ಬರುವ ಹುಣಸಗಿ ಶಾಖಾ ಕಾಲುವೆ ಅದರ ಉಪ ಕಾಲುವೆಗಳಿಗೆ ಅಳವಡಿಸಲಾದ ಅಟೋಮೇಶನ್‌ ಗೇಟ್‌ಗಳ ಕಾರ್ಯನಿರ್ವಹಣೆ ಕುರಿತು ಕೇಂದ್ರಿಯ ಜಲ ಆಯೋಗದ ನಿರ್ದೇಶಕ ಎನ್‌.ವಿ. ಸತೀಶ ಹಾಗೂ ಸಹಾಯಕ ನಿರ್ದೇಶಕಿ
ಉಮಾ ಡಿ. ಒಳಗೊಂಡ ತಂಡವು ಮಾಹಿತಿ ಪಡೆದು ಕೆಲ ಸಲಹೆ ಸೂಚನೆ ನೀಡಿತು. ಅಚ್ಚುಕಟ್ಟು ಭಾಗದ ರೈತರು ಇಂತಹ ವಿಶಿಷ್ಠ
ಯೋಜನೆ ಲಾಭ ಪಡೆಯಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಲಾಶಯದ ನೀರಿನ ಮಟ್ಟ, ಕಾಲುವೆಯಲ್ಲಿ ಹರಿಯುತ್ತಿರುವ
ನೀರಿನ ಪ್ರಮಾಣ, ಎಪಿಎಂಸಿ ಧಾರಣಿ, ಹವಾಮಾನ, ಜಮೀನಿಗೆ ಬೇಕಾದ ನೀರಿನ ಬೇಡಿಕೆ ಸೇರಿದಂತೆ ಇತರೆ ಅಗತ್ಯ ಮಾಹಿತಿ
ಒದಗಿಸುವ ಕಿಯೋಸ್ಕ್ ಯಂತ್ರದ ಕಾರ್ಯವೈಖರಿ ಬಗ್ಗೆ ಅ ಧಿಕಾರಿಗಳಿಂದ ಮಾಹಿತಿ ಪಡೆದ ರೈತರು, ಇದರ ಬಳಕೆ ಕುರಿತು ಜಾಗೃತಿ ಮೂಡಿಸಿ ಅಗತ್ಯ ಜ್ಞಾನ ಒದಗಿಸುವಂತೆ ಕೋರಿದರು. ನಿರ್ದೇಶಕರ ತಂಡ ಬುಧವಾರ ಜೇವರ್ಗಿ ಶಾಖಾ ಕಾಲುವೆ ಕಾಮಗಾರಿ ವೀಕ್ಷಣೆ
ಮಾಡಲಿದೆ ಎಂದು ಕೆಬಿಜೆಎನ್‌ಎಲ್‌ ಮೂಲಗಳಿಂದ ತಿಳಿದು ಬಂದಿದೆ. ಕೆಬಿಜೆಎನ್‌ಎಲ್‌ ವಲಯದ ಮುಖ್ಯ ಇಂಜಿನಿಯರ್‌ ಎಚ್‌.ಕೆ. ಕೃಷ್ಣೇಗೌಡ, ಅಧೀಕ್ಷಕ ಅಭಿಯಂತರ ವೀರಣ್ಣ ನಗರೂರು, ಕಾರ್ಯನಿರ್ವಾಹಕ ಇಂಜಿನಿಯರ್‌ ಎಂ. ತಂಬಿದೊರೈ, ಗೇಟ್ಸ್‌ ಉಪ ವಿಭಾಗದ ಎಇಇ ಆರ್‌.ಎಲ್‌. ಹಳ್ಳೂರ, ಗುತ್ತಿಗೆ ವಹಿಸಿಕೊಂಡಿರುವ ಮೆಕಾಟ್ರಾನಿಕ್ಸ್‌ ಎಂಡಿ ಅಶೋಕ ಕರ್ವಾ, ಎಇಗಳಾದ ರಾಘವೇಂದ್ರ, ಜೀವನ, ಕೆಬಿಜೆಎನ್‌ಎಲ್‌ ಅಧಿ ಕಾರಿಗಳು, ಮೆಕಾಟ್ರಾನಿಕ್ಸ್‌ ಸಿಬ್ಬಂದಿ ಇದ್ದರು. 

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.