ಕೊತ್ತಲ ಬಸವೇಶ್ವರ ದೇಗುಲ ಸೀಲ್ಡೌನ್
Team Udayavani, Apr 20, 2020, 1:37 PM IST
ಸೇಡಂ: ಪಟ್ಟಣದ ಶ್ರೀ ಕೊತ್ತಲ ಬಸವೇಶ್ವರ ದೇವಾಲಯ ಪ್ರದೇಶವನ್ನು ಸೀಲ್ಡೌನ್ ಮಾಡಿದ್ದು, ಸಹಾಯಕ ಆಯುಕ್ತ ರಮೇಶ ಕೋಲಾರ ಪರಿಶೀಲಿಸಿದರು.
ಸೇಡಂ: ಪಟ್ಟಣದ ಸುಪ್ರಸಿದ್ಧ ಐತಿಹಾಸಿಕ ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ರವಿವಾರ ದೇವಾಲಯವನ್ನು ಸೀಲ್ಡೌನ್ ಮಾಡಲಾಗಿದ್ದು, ಸ್ವಾಮೀಜಿ ಮೇಲೂ ನಿಗಾ ವಹಿಸಲಾಗಿದೆ.
ಇತ್ತೀಚೆಗೆ ವಾಡಿ ಸಮೀಪದ ರಾವೂರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಜಾತ್ರೆಗಳು ನಡೆದ ಪರಿಣಾಮ ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ. ರವಿವಾರ ಕೊತ್ತಲ ಬಸವೇಶ್ವರ ಜಾತ್ರೆ ಇದ್ದ ನಿಮಿತ್ತ, ದೇವಾಲಯ ಸಮಿತಿ ಜಾತ್ರೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ ಮುಂಜಾಗ್ರತಾ ಕ್ರಮವಾಗಿ ದೇವಾಲಯಕ್ಕೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.
ದೇವಾಲಯದ ಪ್ರಮುಖ ದ್ವಾರಗಳಿಗೆ ಕಟ್ಟಿಗೆಗಳ ಬೇಲಿ ನಿರ್ಮಿಸಿದ್ದಲ್ಲದೆ, ಪರದೆ ಹಾಕಿ ದೇವಾಲಯವನ್ನು ಭಕ್ತರಿಗೆ ಕಾಣದಂತೆ ಮರೆಮಾಚಲಾಗಿದೆ. ಪ್ರತಿ ವರ್ಷ ಜಾತ್ರೆ ದಿನ ಸಾವಿರಾರು ಜನರಿಂದ ಕಂಗೊಳಿಸುತ್ತಿದ್ದ ರಥ ಬೀದಿ ರವಿವಾರ ಬಿಕೋ ಎನ್ನುತ್ತಿತ್ತು. ಎಲ್ಲೆ ನೋಡಿದರಲ್ಲಿ ಪೊಲೀಸರ ಬೂಟು, ಲಾಠಿ ಸಪ್ಪಳ ಕೇಳಿಬರುತ್ತಿತ್ತು. ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ, ಸಿಪಿಐ ರಾಜಶೇಖರ ಹಳಗೋದಿ, ಪಿಎಸ್ಐ ಸುಶೀಲಕುಮಾರ, ವಿದ್ಯಾಶ್ರೀ ದೇವಾಲಯಕ್ಕೆ ಪದೇ ಪದೇ ಭೇಟಿ ನೀಡಿ ಆಗುಹೋಗುಗಳ ಮೇಲೆ ನಿಗಾ ಇಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ