ಕೆಕೆಆರ್‌ಡಿಬಿ ಪಟ್ಟ ಯಾರಿಗೆ?

ಅಧ್ಯಕ್ಷ್ಯ ಸ್ಥಾನಕ್ಕೆ ನಡೆದಿದೆ ಪೈಪೋಟಿ ಮಠಾಧೀಶರಿಂದ ನಡೆದಿದೆ ಲಾಬಿ

Team Udayavani, Feb 9, 2020, 12:17 PM IST

09-February-08

ಸೇಡಂ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಸರ್ಕಸ್‌ ಪೂರ್ಣಗೊಂಡ ಬೆನ್ನಲ್ಲೇ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮದ ಅಧ್ಯಕ್ಷರು ಯಾರಾಗಬಲ್ಲರು ಎನ್ನುವ ಕುರಿತು ಚರ್ಚೆ ನಡೆದಿದೆ.

ಈ ಹಿಂದೆ ಕೆಕೆಆರ್‌ಡಿಬಿ ಪಟ್ಟ ಸೇಡಂ ಶಾಸಕ ರಾಜಕುಮಾರ ಪಾಟೀಲ ಅವರಿಗೆ ದೊರೆಯಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಈಗ ಪಟ್ಟ ಕೈತಪ್ಪುವುದೇ ಎನ್ನುವ ಆತಂಕ ಅವರ ಅಭಿಮಾನಿ ವಲಯದಲ್ಲಿ ಸೃಷ್ಟಿಯಾಗಿದೆ. ಇದಕ್ಕೆ ಕಾರಣ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಸಹಕಾರಿಯಾಗಿ ಮಾನವ ಸಂಪನ್ಮೂಲ ಕೃಷಿ ಮತ್ತು ಸಾಂಸ್ಕೃತಿಕ ಸಂಘ ರಚಿಸಿರುವುದು. ಈ ನೂತನ ಸಂಘಕ್ಕೆ ಮಾಜಿ ರಾಜ್ಯಸಭಾ ಸದಸ್ಯ, ಕಲ್ಯಾಣ ಕರ್ನಾಟಕದ ಹರಿಕಾರ ಡಾ| ಬಸವರಾಜ ಪಾಟೀಲ್‌ ಸೇಡಂ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಬಸವರಾಜ ಪಾಟೀಲ ಸೇಡಂ ಅವರು ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರ ರಾಜಕೀಯ ಗುರು. ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದಲ್ಲಿ, ಇದರ ಮೇಲಿನ ಸ್ಥಾನವಾದ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನವನ್ನು ಶಾಸಕ ತೇಲ್ಕೂರ ಒಪ್ಪುವರೇ ಎನ್ನುವುದು ಹಲವರ ಪ್ರಶ್ನೆಯಾಗಿದೆ. ಅಲ್ಲದೆ ಕೆಕೆಆರ್‌ಡಿಬಿ ಪಟ್ಟಕ್ಕಾಗಿ ಕಲಬುರಗಿ, ರಾಯಚೂರು, ಯಾದಗಿರಿಯ ಕೆಲ ಮಾಜಿ ಶಾಸಕರು, ಹಾಲಿ ಶಾಸಕರು ತೆರೆಮರೆಯಲ್ಲಿ ಪೈಪೋಟಿ ನಡೆಸುತ್ತಿರುವುದರಿಂದ ಬಿಜೆಪಿಗೆ ಮತ್ತಷ್ಟು ಇಕ್ಕಟ್ಟು ಎದುರಾದಂತಾಗಿದೆ. ಒಟ್ಟಾರೆಯಾಗಿ ಖಾಲಿ ಇರುವ ಕೆಕೆಆರ್‌ಡಿಬಿ ಅಧ್ಯಕ್ಷ ಸ್ಥಾನ ಯಾರ ಪಾಲಾಗುತ್ತದೆ ಎಂದು ಕಾಯ್ದು ನೋಡಬೇಕಿದೆ.

ಮಠಾಧಿಧೀಶರಿಂದ ಲಾಬಿ: ಕೆಕೆಆರ್‌ಡಿಬಿ ಪಟ್ಟ ತೇಲ್ಕೂರಗೆ ನೀಡುವಂತೆ ರಾಜ್ಯದ ಪ್ರತಿಷ್ಠಿತ ಮಠಾಧಿಧೀಶರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ. ತೇಲ್ಕೂರಗೆ ಅಧ್ಯಕ್ಷ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುದಾನ ತಂದು, ಅಭಿವೃದ್ಧಿಗೆ ಮುಂದಾಗಬಹುದು ಎನ್ನುವ ಒತ್ತಾಸೆಯನ್ನು ಸಿಎಂ ಮುಂದಿಡಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಕೆಕೆಆರ್‌ಡಿಬಿ ಪಟ್ಟಕ್ಕಾಗಿ ನಾನು ಲಾಬಿ ನಡೆಸಿಲ್ಲ. ಜನ ಮಾತಾಡಿ
ಕೊಳ್ಳುತ್ತಿದ್ದಾರೆ ಅಷ್ಟೆ. ಪಕ್ಷಕ್ಕಾಗಲಿ, ಮುಖ್ಯಮಂತ್ರಿಗಾಗಲಿ
ನಾನು ಯಾವುದೇ ಒತ್ತಡ ಹೇರಿಲ್ಲ, ಹೇರಲ್ಲ. ಯಾರಿಗೆ ಯಾವ ಸ್ಥಾನ ನೀಡಬೇಕು ಎನ್ನುವುದನ್ನು ಪಕ್ಷವೇ ತೀರ್ಮಾನಿಸುತ್ತದೆ. ರಾಜಕುಮಾರ ಪಾಟೀಲ ತೇಲ್ಕೂರ,
ಶಾಸಕ, ಸೇಡಂ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಆಗಬೇಕಾದರೆ ಕೆಕೆಆರ್‌ಡಿಬಿ ಅಧ್ಯಕ್ಷರನ್ನಾಗಿ ಶಾಸಕ ರಾಜಕುಮಾರ ಪಾಟೀಲ ಅವರನ್ನು ಆಯ್ಕೆ ಮಾಡಬೇಕು. ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಅವರ ಕಾರ್ಯಕ್ಕೆ ಗೌರವ ನೀಡಬೇಕು.
ಶ್ರೀಮಂತ ಅವಂಟಿ,
ಬಿಜೆಪಿ ಮುಖಂಡ

„ಶಿವಕುಮಾರ ಬಿ. ನಿಡಗುಂದಾ

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.