ಹೋಬಳಿವಾರು ಸೆಕ್ಟರ್ ಮ್ಯಾಜಿಸ್ಟ್ರೇಟ್ ನೇಮಕ
Team Udayavani, Apr 12, 2020, 4:05 PM IST
ಶಹಾಬಾದ: ತಹಶೀಲ್ದಾರ್ ಸುರೇಶ ವರ್ಮಾ ನೇತೃತ್ವದಲ್ಲಿ ಲಾಕ್ಡೌನ್ ಸಂಪೂರ್ಣ ಅನುಷ್ಠಾನಗೊಳಿಸಲು ಹೋಬಳಿವಾರು ಸೆಕ್ಟರ್ ಮ್ಯಾಜಿಸ್ಟ್ರೇಟ್ ನೇಮಕ ಮಾಡುವ ಸಭೆ ನಡೆಯಿತು
ಶಹಾಬಾದ: ನಗರದಲ್ಲಿ ತಹಶೀಲ್ದಾರ್ ಸುರೇಶ ವರ್ಮಾ ನೇತೃತ್ವದಲ್ಲಿ ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು ಮತ್ತು ಲಾಕ್ಡೌನ್ ಸಂಪೂರ್ಣ ಅನುಷ್ಠಾನಗೊಳಿಸಲು ಹೋಬಳಿವಾರು ಸೆಕ್ಟರ್ ಮ್ಯಾಜಿಸ್ಟ್ರೇಟ್ ನೇಮಕ ಮಾಡುವ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ತಹಶೀಲ್ದಾರ್ ಸುರೇಶ ವರ್ಮಾ, ನಗರ ಸೆಕ್ಟರ್ ಮ್ಯಾಜಿಸ್ಟ್ರೇಟ್ ಅಧಿ ಕಾರಿಯಾಗಿ ನಗರಸಭೆ ಪೌರಾಯುಕ್ತ ವೆಂಕಟೇಶ ಅವರನ್ನು ನೇಮಕ ಮಾಡಿದ್ದು, ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಬಸಪ್ಪ, ಸಿಡಿಪಿಒ ಇಲಾಖೆಯ ಜಗನ್ನಾಥರೆಡ್ಡಿ, ನಗರಸಭೆ ಸಿಬ್ಬಂದಿ ರಾಜೇಶ ಇರಲಿದ್ದಾರೆ ಎಂದು ತಿಳಿಸಿದರು.
ಶಹಾಬಾದ ಗ್ರಾಮೀಣ ವಲಯದ ಸೆಕ್ಟರ್ ಮ್ಯಾಜಿಸ್ಟ್ರೇಟ್ ಅಧಿಕಾರಿಯಾಗಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತೆ ನೀಲಗಂಗಾ ಅವರನ್ನು ನೇಮಕ ಮಾಡಲಾಗಿದೆ. ಇವರ ತಂಡದಲ್ಲಿ ಪೊಲೀಸ್ ಸಿಬ್ಬಂದಿ ಶಂಕರಗೌಡ, ಸಿಡಿಪಿಒ ಇಲಾಖೆಯ ಸಾಯಬಣ್ಣ, ಪಶು ಆರೋಗ್ಯ ಕೇಂದ್ರದ ಸಿಬ್ಬಂದಿ ಭೀಮರಾವ್ ಇರಲಿದ್ದಾರೆ. ಈ ಇಬ್ಬರ ತಂಡ ಕೋವಿಡ್-19 ವೈರಸ್ ಹರಡುವುದನ್ನು ತಡೆಗಟ್ಟುವಿಕೆಗಾಗಿ ಮತ್ತು ಲಾಕ್ಡೌನ್ ಸಂಪೂರ್ಣ ಅನುಷ್ಠಾನಗೊಳಿಸಲು ಶ್ರಮವಹಿಸಬೇಕು ಎಂದರು.
ಕಲಬುರಗಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತೆ ನೀಲಗಂಗಾ ಎಸ್. ಬಬಲಾದ, ನಗರಸಭೆ ಪೌರಾಯುಕ್ತ ವೆಂಕಟೇಶ, ತಾಪಂ ಇಒ ಲಕ್ಷ್ಮಣ ಶೃಂಗೇರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ