ಬಲಭೀಮೇಶ್ವರ ದೇಗುಲಕ್ಕೆ ಮೊದಲ ಬಾರಿಗೆ ಬೀಗ
Team Udayavani, Mar 25, 2020, 12:44 PM IST
ಶಹಾಪುರ: ಸಗರ ನಾಡಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ತಾಲೂಕಿನ ಬಲಭೀಮೇಶ್ವರ ದೇವಸ್ಥಾನ ಸೇರಿದಂತೆ ದಿಗ್ಗಿ ಸಂಗಮೇಶ್ವರ ಮತ್ತು ನಗರದ ಚರಬಸವೇಶ್ವರ ದೇವಸ್ಥಾನಗಳಲ್ಲಿ ಇದೇ ಮೊದಲ ಬಾರಿಗೆ ಧಾರ್ಮಿಕ ಕಾರ್ಯಕ್ರಮ, ಪಲ್ಲಕ್ಕಿ ಉತ್ಸವಗಳನ್ನು ರದ್ದುಗೊಳಿಸಲಾಗಿದೆ.
ಕೊರೊನಾ ಭೀತಿ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ನೀಡಿದ ಸೂಚನೆ ಮೇರೆಗೆ ದೇವಾಲಯಗಳಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಬಲಭೀಮೇಶ್ವರ ದೇವಾಲಯದಲ್ಲಿ ಮಂಗಳವಾರ ಪಲ್ಲಕ್ಕಿ ಉತ್ಸವ ನಡೆಯಬೇಕಿತ್ತು.
ಇದೇ ಮೊದಲ ಬಾರಿಗೆ ದೇವಾಲಯದ ಬಾಗಿಲಿಗೆ ಬೀಗ ಹಾಕಲಾಗಿದೆ. ಕೊರೊನಾ ಭೀತಿ ನಡುವೆಯೂ ಭಕ್ತರು ಬಲಭೀಮೇಶ್ವರರ ಬಾಗಿಲ ಬಳಿಯೇ ಕಾಯಿ ಹೊಡೆದು ಭಕ್ತಿ ಸಮರ್ಪಣೆ ಮಾಡಿದರು.
ಉಳಿದಂತೆ ಯುಗಾದಿ ಹಬ್ಬದ ನೈವೇದ್ಯ, ಹೂ ಹಣ್ಣು ಕಾಯಿ ಸಮರ್ಪಣೆಗೆ ಕೊರೊನಾ ಕರಿ ನೆರಳು ಆವರಿಸಿದೆ. ಈ ಬಾರಿ ಯುಗಾದಿ ಬೇವು ಕುಡಿಯುವ ಹಬ್ಬ ಸಮರ್ಪಕವಾಗಿ ಯಾರೊಬ್ಬರು ಆಚರಿದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ