ನೆಮ್ಮದಿ ಜೀವನಕ್ಕೆ ಸತ್ಸಂಗ ಅಗತ್ಯ

ಉತ್ತಮ ಬದುಕು ಕಟ್ಟಿಕೊಳ್ಳಲು ಸುಸಂಸ್ಕಾರ ಅಗತ್ಯ

Team Udayavani, Mar 12, 2020, 5:33 PM IST

12-March-35

ಶಹಾಪುರ: ಪ್ರಸ್ತುತ ಒತ್ತಡದ ಜೀವನದಲ್ಲಿ ಸಂಸಾರ ಎಂಬುದು ಜಡವಾಗಿ ಮನಸ್ಸು ಹತೋಟಿ ತಪ್ಪಿ ಮಾನಸಿಕವಾಗಿ ಕುಗ್ಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆಗಳು ಜಾಸ್ತಿ ಇವೆ. ಮಾನಸಿಕ ಒತ್ತಡ ಜೀವನದಿಂದ ಪಾರಾಗಲು ಸತ್ಸಂಗ ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕು ಎಂದು ಫಕ್ಕೀರೇಶ್ವರ ಮಠದ ಶ್ರೀ ಗುರುಪಾದ ಸ್ವಾಮೀಜಿ ಹೇಳಿದರು.

ನಗರದ ಫಕ್ಕೀರೇಶ್ವರ ಮಠದಲ್ಲಿ ಜ್ಞಾನ ಯೋಗ ಆಧ್ಯಾತ್ಮಿಕ ಸೇವಾ ಸಮಿತಿಯಿಂದ ಹುಣ್ಣಿಮೆ ಹೊಳಪು ಸತ್ಸಂಗ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.

ಸತ್ಸಂಗದಲ್ಲಿ ಭಕ್ತಿಯಿಂದ ಭಾಗವಹಿಸಿ ಒಂದಿಷ್ಟು ದೇವರ ಸ್ಮರಣೆಯಲ್ಲಿ ಭಜನೆ, ಕೀರ್ತನ ಗೀತೆಗಳಲ್ಲಿ ತಲ್ಲೀನನಾಗುವ ಮೂಲಕ ಮಾನಸಿಕವಾಗಿ ಸಮತೋಲನಕ್ಕೆ ಬಂದು ಒತ್ತಡ ಬದುಕಿನಿಂದ ಪಾರಾಗಿ ನೆಮ್ಮದಿ ಕಾಣಬಹುದು ಎಂದು ಹೇಳಿದರು.

ಅದ್ವೈತ ಸಿದ್ಧಾಂತದ ಸಾರ್ವಭೌಮ ಚಕ್ರವರ್ತಿಯಾಗಿರುವ ಶಂಕರಾಚಾರ್ಯರು ಹೇಳಿರುವ ಹಾಗೆ ಸತ್ಸಂಗದಿಂದ ಬದುಕಿಗೆ ಮುಕ್ತಿ ಸಿಗುವುದರ ಜತೆಗೆ ನಮ್ಮ ಜೀವನ ಪರಮ ಪಾವನವಾಗಲಿದೆ ಎಂದು ಹೇಳಿದರು.

ಹಣ, ಸಂಪತ್ತು ಗಳಿಸುವ ಭರಾಟೆಯಲ್ಲಿ ನಾವು ಕುಟುಂಬದ ನೆಮ್ಮದಿ, ಸಂತೋಷ, ಸಂತೃಪ್ತಿ ಕಳೆದುಕೊಂಡು ದ್ವೇಷ, ರೋಷ ವ್ಯಾಮೋಹ ಎಂಬ ಭ್ರಾಂತಿಯಲ್ಲಿ ಮುಳುಗುತ್ತಿದ್ದೇವೆ. ಇದರಿಂದ ಅರ್ಥ ಬದ್ಧ ಜೀವನ ವ್ಯರ್ಥವಾಗಿಸುತ್ತಿದ್ದೇವೆ. ಇದರಿಂದ ಹೊರಬರಲು ಉತ್ತಮ ಬದುಕು ಕಟ್ಟಿಕೊಳ್ಳಲು ಸುಸಂಸ್ಕಾರ ಅಗತ್ಯವಿದೆ. ಗುರುವಿನ ಸಮ್ಮುಖದಲ್ಲಿ ಸತ್ಸಂಗದಲ್ಲಿ ಭಾಗವಹಿಸುವ ಮೂಲಕ ಉತ್ತಮ ಬದುಕು ರೂಢಿಸಿಕೊಳ್ಳಲು ಸಾಧ್ಯವಿದೆ. ಕಾರಣ ನಿತ್ಯ ಒಂದಿಷ್ಟು ಸಮಯ ಯೋಗ, ಧ್ಯಾನ ಆಧ್ಯಾತ್ಮಿಕತೆಗೆ ಸಮಯ ತೆಗೆದಲ್ಲಿ ನಿಜವಾದ ಸುಖ, ನೆಮ್ಮದಿ ಕಂಡುಕೊಳ್ಳಬಹುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನೂರಾರು ಜನ ಭಕ್ತರು ಭಾಗವಹಿಸಿ ಶ್ರೀಗಳ ಸಂದೇಶ ಕೇಳಿದರು. ಭಜನೆ, ಕೀರ್ತನೆಯಲ್ಲಿ ಭಾಗವಹಿಸಿದರು. ನಂತರ ಧ್ಯಾನ ಮಾಡಿದರು.

ಇದೇ ಸಂದರ್ಭದಲ್ಲಿ ಶ್ರೀಮಠದ ಗುರುಪಾದ ಶ್ರೀಗಳು, ಚುಟುಕು ಸಾಹಿತ್ಯ ಪರಿಚತ್‌ನ ನೂತನ ತಾಲೂಕು ಅಧ್ಯಕ್ಷ ಮಹೇಶ ಪತ್ತಾರ ಅವರನ್ನು ಸನ್ಮಾನಿಸಿ ಆಶೀರ್ವದಿಸಿದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.