ಪುಟ್ಟರಾಜ ಗವಾಯಿ ಸೇವೆ ಅನನ್ಯ
ಸಂಗೀತ-ಕಲೆ-ಸಾಹಿತ್ಯ ಕ್ಷೇತ್ರಗಳಿಗೆ ಪುಟ್ಟರಾಜರ ಕೊಡುಗೆ ಅಪಾರ: ಕ್ಷೀರಲಿಂಗಯ್ಯ
Team Udayavani, Mar 1, 2020, 4:37 PM IST
ಶಹಾಪುರ: ನಾಡಿನಲ್ಲಿ ಸಂಗೀತ, ಕಲೆ, ಸಾಹಿತ್ಯ ಕ್ಷೇತ್ರಗಳಿಗೆ ಡಾ| ಪಂಡಿತ ಪುಟ್ಟರಾಜ ಗವಾಯಿ ಸೇವೆ ಅನನ್ಯವಾಗಿದೆ. ಅವರು ಅಂಧರ ಬಾಳಿನ ಬೆಳಕಾಗಿ ವಿಶೇಷಚೇತನರಲ್ಲಿ ಬದುಕಿನ ಚಿಲುಮೆ ಹೊರ ಹೊಮ್ಮಿಸಿದವರಾಗಿದ್ದಾರೆ ಎಂದು ಉಪನ್ಯಾಸಕ ಕ್ಷೀರಲಿಂಗಯ್ಯ ಬೋನ್ಹಾಳ ಹಿರೇಮಠ ತಿಳಿಸಿದರು.
ನಗರದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ ಜ್ಞಾನ ಗಂಗೋತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಗುರು ಪುಟ್ಟರಾಜ ಜನಕಲ್ಯಾಣ ಸೇವಾ ಸಮಿತಿ ಸುರಪುರ ವತಿಯಿಂದ ಹಮ್ಮಿಕೊಂಡಿದ್ದ ಪುಟ್ಟರಾಜ ಗವಾಯಿಗಳ ಜನ್ಮದಿನ ನಿಮಿತ್ತ ವಿದ್ಯಾರ್ಥಿಗಳಿಗೆ ಫೈಲ್ಗಳನ್ನು ವಿತರಿಸಿ ಅವರು ಮಾತನಾಡಿದರು.
ಸಂಗೀತ ಕ್ಷೇತ್ರದಲ್ಲಿ ಪಂ. ಪುಟ್ಟರಾಜ ಗವಾಯಿಗಳವರದು ಮೇರು ವ್ಯಕ್ತಿತ್ವ, ಅಪ್ರತಿಮ ಚೇತನಾಶೀಲರಾಗಿದ್ದರು. ಅನಾಥ ಮತ್ತು ಅಂಧ ಮಕ್ಕಳಿಗೆ ಸಂಗೀತ ವಿದ್ಯಾಭ್ಯಾಸ ಮಾಡಿಸುವ ಮೂಲಕ ಅವರ ಬಾಳಲ್ಲಿ ಅಧಮ್ಯ ಚೈತನ್ಯ ತುಂಬಿದ್ದರು. ಇಂದಿಗೂ ಸಹಿತ ಸಾವಿರಾರು ಅಂಧರ ಬಾಳು ಅವರ ಆಶ್ರಮದಲ್ಲಿ ವಿಕಸಿತಗೊಳ್ಳುತ್ತಿರುವುದು ವಿಶೇಷವಾಗಿದೆ ಎಂದು ತಿಳಿಸಿದರು.
ಡಾ| ಬಸವಲಿಂಗಯ್ಯ ಹಿರೇಮಠ, ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಕಾರ್ಯದರ್ಶಿ ನಾರಾಯಣಾಚಾರ್ಯ ಸಗರ, ಮುಖ್ಯ ಗುರು ಉಷಾ ಸಗರ, ಶಿಕ್ಷಕರಾದ ದೀಪಕ ಘಾಳಿ, ಗಿರೀಶ ಪೋದ್ದಾರ, ಶಿವಪುತ್ರಪ್ಪ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!