ಮಹಾಂತೇಶ್ವರ ಜಾತ್ರೆ: ಎತ್ತುಗಳ ಬೆಲೆ ಗಗನಕ್ಕೆ

ಕಿಲಾರಿ ತಳಿ ಜೋಡೆತ್ತುಗಳಿಗೆ 2 ಲಕ್ಷ ರೂ.-ದಾವಣಿಗೆ 1.50 ಲಕ್ಷ ರೂ. ಕೃಷಿ ಪರಿಕರ ಖರೀದಿ ಜೋರು

Team Udayavani, Feb 27, 2020, 4:13 PM IST

27-Feburary-18

ಶಹಾಪುರ: ಕಳೆದ ಎರಡು ದಿನಗಳಿಂದ ತಾಲೂಕಿನ ದೋರನಹಳ್ಳಿ ಬೆಟ್ಟದ ಮಹಾಂತೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಜಾನುವಾರು ಜಾತ್ರೆ ನಡೆಯುತ್ತಿದೆ.

ಜಾನುವಾರು ಜಾತ್ರೆಯಲ್ಲಿ ವಿವಿಧ ತಳಿಗಳ ಎತ್ತುಗಳು ಮಾರಾಟಕ್ಕೆ ಬಂದಿವೆ. ಖರೀದಿದಾರರು ಯಾವ ತಳಿ ಎತ್ತುಗಳನ್ನು ಖರೀದಿಸಬೇಕು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಯಾವ ತಳಿ ನೋಡಿದರೂ ತೆಗೆದುಕೊಳ್ಳಬೇಕು ಎಂನಿಸುತ್ತಿದೆ. ಆದರೆ ಕೃಷಿಗೆ ಯಾವ ಜಾತಿ ಎತ್ತುಗಳು ಚೆನ್ನಾಗಿವೆ ಎಂಬುದನ್ನು ಲೆಕ್ಕಾಚಾರ ಹಾಕಿ ರೈತರು ಖರೀದಿಗೆ ಮುಂದಾಗುತ್ತಿದ್ದಾರೆ. ಹತ್ತಾರು ತಳಿ ಎತ್ತುಗಳು ಜಾತ್ರೆಯಲ್ಲಿ ದೊರೆಯುತ್ತಿವೆ. ನಿಮಗಿಷ್ಟದ ತಳಿ ಎತ್ತುಗಳು ಇಲ್ಲಿವೆ. ಆಯಾ ತಳಿ ಎತ್ತುಗಳ ಬಲಿಷ್ಠತೆಗೆ ತಕ್ಕಂತೆ ದರಗಳು ಕಾಣಬಹುದು. ಕಿಲಾರಿ, ದಾವಣಿ, ಜವಾರಿ ಮತ್ತು ಕುಂಬಿ ಸೇರಿದಂತೆ ಇತರೆ ತಳಿಗಳ ಎತ್ತುಗಳು ಮಾರಾಟಕ್ಕೆ ಲಭ್ಯವಿದ್ದು, ರೈತರು ತಮ್ಮ ಕೃಷಿ ಆಧಾರಿತ ಅನುಕೂಲಕ್ಕೆ ತಕ್ಕಂತೆ ಎತ್ತುಗಳನ್ನು ಖರೀದಿಸುತ್ತಿದ್ದಾರೆ. ಕಿಲಾರಿ ತಳಿ ಜೋಡೆತ್ತುಗಳಿಗೆ 2 ಲಕ್ಷ ರೂ.
ದಾವಣಿ ಜೋಡೆತ್ತಿಗೆ 1.50 ಲಕ್ಷ ರೂ. ಮತ್ತು ಮೈಸೂರು ಭಾಗದ ಜೋಡೆತ್ತಿಗೆ 1.50 ಲಕ್ಷ ರೂ. ದರ ಹೇಳುತ್ತಿದ್ದಾರೆ. ಇನ್ನೂ ಐದು ದಿನಗಳ ವರೆಗೆ ಜಾತ್ರೆಯಲ್ಲಿ ಜಾನುವಾರು ವಹಿವಾಟು ನಡೆಯಲಿದ್ದು, ದರ ಏರುಪೇರಾಗುವ ನಿರೀಕ್ಷೆಯಲ್ಲಿದ್ದಾರೆ. ಕೃಷಿಗೆ ಯಾವುದೇ ಯಂತ್ರೋಪಕರಣ ಬಳಸಿದರೂ ಎತ್ತುಗಳು ಬೇಕಾಗುತ್ತವೆ. ಎತ್ತುಗಳು ರೈತನ ಮಿತ್ರರಿದ್ದಂತೆ ಎನ್ನುತ್ತಾರೆ ರೈತ ಬಸಪ್ಪ.

ಕೃಷಿ ಪರಿಕರ ಭರ್ಜರಿ ವ್ಯಾಪಾರ: ಕೃಷಿಗೆ ಬೇಕಾಗುವ ಪರಿಕರಗಳ ಮಾರಾಟವು ಭರ್ಜರಿಯಾಗಿ ನಡೆದಿದೆ. ರೈತರು ಕೃಷಿಗೆ ಬೇಕಾದ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ರೈತರ ಕೃಷಿಗೆ ಬೇಕಾಗುವ ಹಗ್ಗ, ಎತ್ತುಗಳಿಗೆ ಕಟ್ಟುವ ಬಣ್ಣ ಬಣ್ಣದ ಗೊಂಡೆಗಳು, ಬಾರಕೋಲು ಸೇರಿದಂತೆ ಬಿದಿರು ಬುಟ್ಟಿಗಳು, ಸದೆ ತೆಗೆಯುವ ಕಬ್ಬಿಣದ ಪರಿಕರಗಳು ಇತರೆ ವಸ್ತುಗಳು ಜಾತ್ರೆಯಲ್ಲಿ ದೊರೆಯುತ್ತಿವೆ.

ಸುಮಾರು 35 ವರ್ಷದಿಂದ ಜಾನುವಾರು ಜಾತ್ರೆ ನಡೆಯುತ್ತಿದೆ. ರೈತರಿಗೆ ಅನುಕೂಲಕರ ಜಾತ್ರೆ ಇದಾಗಿದೆ. ಸುತ್ತಲಿನ ಗ್ರಾಮಗಳ ರೈತರು ಜಾತ್ರೆಗೆ ಆಗಮಿಸುತ್ತಾರೆ. ಕೃಷಿ ಪ್ರಧಾನ ಈ ಪ್ರದೇಶದಲ್ಲಿ ರೈತರ ಅನುಕೂಲಕ್ಕಾಗಿ ಜಾನುವಾರು ಜಾತ್ರೆ ನಡೆಸುತ್ತ ಬರಲಾಗಿದೆ. ಜಾತ್ರೆಯಲ್ಲಿ ಕುಡಿಯುವ ನೀರು ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಲಾಗಿದೆ.
ವೀರಮಹಾಂತ ಶಿವಾಚಾರ್ಯರು,
ಮಹಾಂತೇಶ್ವರ ದೇವಸ್ಥಾನ ಹಿರೇಮಠ

ಜಾನುವಾರು ವಹಿವಾಟು ಚೆನ್ನಾಗಿದೆ. ಜಾತ್ರೆಯಲ್ಲಿ ವಿವಿಧ ತಳಿ ಎತ್ತುಗಳು ಬಂದಿವೆ. ಈ ಬಾರಿ ಜೋಡು ಎತ್ತುಗಳ ಖರೀದಿಗೆ ಲಕ್ಷಾಂತರ ರೂ. ಹಾಕಬೇಕಿದೆ. ಕೃಷಿ ಕಾಯಕಕ್ಕೂ ಬಂಡವಾಳ ಹಾಕಲೇಬೇಕಾದ ಸ್ಥಿತಿ ಬಂದಿದೆ. ಬಂಡವಾಳ ಹಾಕುವುದು ಅನಿವಾರ್ಯವಾಗಿದೆ.
 ಬಸವರಾಜ ಚೌದ್ರಿ,
 ಯುವ ರೈತ

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.