ಜೋಡು ಪಲ್ಲಕ್ಕಿ ಉತ್ಸವ: ಶಹಾಪುರ ಸಿಂಗಾರ


Team Udayavani, Jan 15, 2020, 12:24 PM IST

15-January-8

ಶಹಾಪುರ: ಸಂಕ್ರಾಂತಿ ಸಂಭ್ರಮ ಜೋಡು ಪಲ್ಲಕ್ಕಿ ಉತ್ಸವಕ್ಕೆ ನಗರದಲ್ಲಿ ಭಾರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭೀಮರಾಯನ ಗುಡಿ ಬಲಭೀಮೇಶ್ವರ ಮತ್ತು ದಿಗ್ಗಿ ಸಂಗಮೇಶ್ವರ ಪಲ್ಲಕ್ಕಿಗಳ ಅದ್ಧೂರಿ ಮೆರವಣಿಗೆಗೆ ನಗರದೆಲ್ಲಡೆ ಸ್ವಾಗತ ಕಮಾನ ಸೇರಿದಂತೆ ಹನುಮಾನ್‌ ಕಟೌಟ್‌ ಕಟ್ಟಲಾಗಿದೆ.

ಪಲ್ಲಕ್ಕಿ ಸಾಗುವ ಮೆರವಣಿಗೆ ಮಾರ್ಗ ಉದ್ದಕ್ಕೂ ಭಗವಾ ಧ್ವಜಗಳು ಸೇರಿದಂತೆ ವಿದ್ಯುತ್‌ ದೀಪಗಳ ಅಲಂಕಾರ ಮಾಡಲಾಗಿದೆ. ಎಲ್ಲಡೆ ಮಕರ ಸಂಕ್ರಾಂತಿ ಶುಭಾಶಯಗಳು ಬ್ಯಾನರ್‌ ರಾರಾಜಿಸುತ್ತಿವೆ. ಈ ಬಾರಿಯೂ ಗಂಗಾ ನಗರದ ಯುವಕರ ತಂಡ ಬಸವೇಶ್ವರ ವೃತ್ತದಲ್ಲಿ ಬಂಗಾರ ಬಣ್ಣದ ಸ್ವಾಗತ ಕಮಾನ್‌ ನಿರ್ಮಿಸಿದೆ. ಅದು ನಗರದ ಸೌಂದರ್ಯ ಇನ್ನಷ್ಟು ಹೆಚ್ಚಿಸಿದೆ. ಅಲ್ಲದೆ ಹಬ್ಬದ ಕಳೆ ಹೆಚ್ಚುವಂತೆ ಮಾಡಿದೆ. ನಗರದಲ್ಲಿ ಕೇಸರಿ ಧ್ವಜಗಳು, ಹಬ್ಬದ ಶುಭಾಶಯಗಳು ತಿಳಿಸುವ ಬ್ಯಾನರ್‌ ರಾರಾಜಿಸುತ್ತಿವೆ.

ಪಲ್ಲಕ್ಕಿ ಮೆರವಣಿಗೆ ಪ್ರತಿ ವರ್ಷ ಜ. 14ರಂದು ನಡೆಯುತ್ತಿತ್ತು. ಆದರೆ ಈ ಬಾರಿ
ಜ. 15 ನಡೆಯಲಿದೆ. ಬುಧವಾರ ಬೆಳಗ್ಗೆ ಪುರ ಪ್ರವೇಶಿಸುವ ದಿಗ್ಗಿ ಸಂಗಮನಾಥ ಮತ್ತು ಭೀಮರಾಯನಗುಡಿ ಬಲಭೀಮೇಶ್ವರರ ಉತ್ಸವ ಮೂರ್ತಿ ಹೊತ್ತ ಪಲ್ಲಕ್ಕಿಗಳು ನಗರದ ದಿಗ್ಗಿ ಅಗಸಿ ಮಾರ್ಗದ ಮೂಲಕ ಗಾಂಧಿಚೌಕ್‌, ಮೋಚಿಗಡ್ಡಾದಿಂದ ಹಳಿಸಗರ, ಮಡ್ನಾಳ ಮಾರ್ಗ ಹುರಸಗುಂಡಿಗಿ ಭೀಮಾ ನದಿ ತಲುಪಲಿವೆ.

ಭೀಮಾನದಿ ತಲುಪಿದ ನಂತರ ಅಲ್ಲಿ ಗಂಗಾ ಸ್ನಾನ ನೆರವೇರಲಿದೆ. ನಂತರ ಧಾರ್ಮಿಕ ವಿಧಿ  ವಿಧಾನದಂತೆ ಪೂಜೆ ಪುನಸ್ಕಾರ ನಡೆಯಲಿದೆ. ಮತ್ತೆ ಮರಳಿ ಮೂಲ ಸ್ಥಾನಗಳಿಗೆ ತೆರಳುವಾಗ ನಗರದ ಪ್ರಮುಖ ಬೀದಿಗಳ ಮೂಲಕ ಅದ್ಧೂರಿ ಮೆರವಣಿಗೆ ನಡೆಯಲಿದೆ.

ಆ ಕಾರಣಕ್ಕೆ ನಗರದ ಭಕ್ತರು ಗಂಗಾ ನಗರ, ದಿಗ್ಗಿ ಬೇಸ್‌ ಮತ್ತು ಹಳಿಸಗರ ಭಾಗದಲ್ಲಿ ಸ್ವಾಗತ ಕಮಾನಗಳು ಬ್ಯಾನರ್‌, ಸೇರಿದಂತೆ ಕೇಸರಿ ಧ್ವಜಗಳು, ಪರಾರಿಗಳನ್ನು ಕಟ್ಟಿದ್ದು, ಎರಡು ಪಲ್ಲಕ್ಕಿಗಳನ್ನು ಭಕ್ತಿ ಭಾವದಿಂದ ಬರಮಾಡಿಕೊಳ್ಳುತ್ತಾರೆ.

ಮಲ್ಲಿಕಾರ್ಜುನ ಮುದ್ನೂರ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.