ರಾಷ್ಟ್ರ ಪ್ರಜ್ಞೆ ಮೂಡಿಸಲಿದೆ ಎಸ್‌ಪಿಸಿ

ಪಾದರಸದಂತಿರುವ ಮಕ್ಕಳು ಮುಂದಿನ ಸಮಾಜದ ಹೊಣೆ ಹೊರುವ ನಾಗರಿಕರು

Team Udayavani, Feb 17, 2020, 4:43 PM IST

17-February-26

ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು ಎಂದು ತಹಶೀಲ್ದಾರ್‌ ಜಗನ್ನಾಥರಡ್ಡಿ ಹೇಳಿದರು.

ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ಟೂಡೆಂಟ್‌ ಪೊಲೀಸ್‌ ಕೆಡೆಟ್‌ ಸಮಾರೋಪ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಇನ್ನು ಸಣ್ಣ ಸಸಿಯಾಗಿರುವಾಗಲೇ ಗಿಡವನ್ನು ನಮಗೆ ಬೇಕಾದ ರೀತಿಯಲ್ಲಿ ಬೆಳೆಸಬಹುದು. ದೊಡ್ಡದಾದ ಮೇಲೆ ಅದನ್ನು ಹೇಗೆ ಬೇಕೋ ಹಾಗೆ ಬೆಳೆಸಲು ಸಾಧ್ಯವಿಲ್ಲ. ಸಣ್ಣವರಿದ್ದಾಗಲೇ ಮಕ್ಕಳು ಶಿಸ್ತು, ಸಂಯವ ಕಲಿಯಬೇಕು ಎಂದು ಕಿವಿಮಾತು ಹೇಳಿದರು.

ಬಿಇಒ ರುದ್ರಗೌಡ ಪಾಟೀಲ ಮಾತನಾಡಿ, ಮಕ್ಕಳು ಪಾದರಸದಂತೆ ಚಟುವಟಿಕೆ ಉಳ್ಳವರು. ಮುಂದಿನ ಸಮಾಜದ ಹೊಣೆ ಹೊರುವ ನಾಗರಿಕರು. ಮೋಸ ವಂಚನೆ ಕಳ್ಳತನ ಮಾಡದಂತೆ ಎಸ್‌ಪಿಸಿ ಅವರನ್ನು ತರಬೇತುಗೊಳಿಸುತ್ತದೆ. ಕೆಟ್ಟಚಟಗಳನ್ನು ಕಲಿಯದಂತೆ ಕೆಟ್ಟದ್ದನ್ನು ಮಾಡದಂತೆ ತಿಳಿವಳಿಕೆ ಮೂಡಿಸುತ್ತದೆ. ಇದರಲ್ಲಿ ಭಾಗವಹಿಸುವ ಮಕ್ಕಳಲ್ಲಿ ಶಿಸ್ತು, ಸಂತಸ ಕಾಣಬಹುದು. ಇದಿರಂದ ಮುಂದಿನ ಅವರ ಬದುಕು ಉತ್ತಮವಾಗಿ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಸಿಪಿಐ ಹನುಮರಡ್ಡೆಪ್ಪ ಮಾತನಾಡಿ, ಪೊಲೀಸ್‌ ಇಲಾಖೆಗೆ ಸೇರಲು ಉತ್ತೇಜಿಸುವ ಎಸ್‌ಪಿಸಿಯನ್ನು ಮಕ್ಕಳು ತುಂಬಾ ಅಚ್ಚು ಕಟ್ಟಾಗಿ ವರ್ಷದುದ್ದಕ್ಕೂ ಮಾಡಿಕೊಂಡು ಬಂದಿದ್ದಾರೆ. ಶಿಸ್ತು ಸಂಯಮ ಹಾಗೂ ಕ್ರಮಬದ್ಧತೆ ರೂಢಿಸಿಕೊಂಡ ಹುಡುಗರು ಮುಂದೆ ಸಮಾಜಕ್ಕೆ ಮಾದರಿಯಾಗಲಿದ್ದಾರೆ ಎಂದು ಹೇಳಿದರು.

ಉಪನ್ಯಾಸಕರಾಗಿ ಆಗಮಿಸಿದ್ದ ಚಿಂತಕ, ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಮಾತನಾಡಿ, ಹಣ, ಬಂಗಾರ, ಭೂಮಿ ಆಸ್ತಿ ಅಲ್ಲವೇ ಅಲ್ಲ. ನಮ್ಮಲ್ಲಿರುವ ಜ್ಞಾನವೇ ಬಹುದೊಡ್ಡ ಆಸ್ತಿ. ಸ್ವತಂತ್ರವಾಗಿ ಆಲೋಚಿಸಿ, ಮುಕ್ತವಾಗಿ ವರ್ತಿಸಿ, ಸಮಾಜದ ಕಟ್ಟುಪಾಡುಗಳು, ಮಹಾತ್ಮರನ್ನು ಸೃಷ್ಟಿಸುವುದಿಲ್ಲ. ಅವು ಕೇವಲ ನಾಗರಿಕರನ್ನು ತಯಾರಿಸುತ್ತವೆ. ನಿಮಗೆ ನೀವೇ ಮಾರ್ಗದರ್ಶಕರಾಗಬೇಕು. ಯಾವ ಕೆಟ್ಟ ಹವ್ಯಾಸಗಳ ರೂಢಿಸಿಕೊಳ್ಳಬಾರದು. ಉತ್ತಮರ ಸಂಗ ಮಾಡಿ ನಿಮ್ಮ ಬದುಕು ಬಂಗಾರವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾಜಿ ಸೈನಿಕರಾದ ಎಸ್‌.ಎಂ. ಜಾನಿ ಮತ್ತು ಮರೆಪ್ಪ ಚಂಡು ಅವರನ್ನು ಸನ್ಮಾನಿಸಲಾಯಿತು. ಸುಧಾಕರ ಗುಡಿ ಹಳಿಸಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ತಿಪ್ಪಣ್ಣ ಧೋತ್ರೆ ಅಧ್ಯಕ್ಷತೆ ವಹಿಸಿದ್ದರು. ಸ.ಶಿ. ಸಿದ್ದಪ್ಪ ಪ್ರಾರ್ಥಿಸಿದರು. ಶರಶ್ಚಂದ್ರ ಅಂಬಲಗಿ ನಿರೂಪಿಸಿದರು. ಎಸ್‌ಪಿಸಿಯ ಮೋಹಿನಖಾನ್‌, ಶಿಕ್ಷಕರು ಹಾಗೂ ಮಕ್ಕಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.