ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ


Team Udayavani, Mar 3, 2021, 8:19 PM IST

Darshanapura

ಯಾದಗಿರಿ : ರಾಜ್ಯದಲ್ಲಿಂದು ಶರಣಬಸಪ್ಪಗೌಡ ದರ್ಶನಾಪುರ ಅವರ ಹೆಸರು ಅಜರಾಮರವಾಗಿ ಉಳಿಯುವಂತಾಗಲು ಶಹಾಪುರ ಮತಕ್ಷೇತ್ರದಲ್ಲಿ ಅವರು ಮಾಡಿದ ಅನೇಕ ಅಭಿವೃದ್ಧಿ ಕಾರ್ಯಗಳೇ ಕಾರಣವಾಗಿವೆ.

ಶಹಾಪುರ ಕ್ಷೇತ್ರಕ್ಕೆ ಶರಣಬಸಪ್ಪಗೌಡ ಅವರ ಕೊಡುಗೆ ಅಪಾರವಾಗಿದ್ದು, ಜನಮೆಚ್ಚಿದ ಶಾಸಕರಾಗಿ  ಅವರು ಗುರುತಿಸಿಕೊಂಡಿದ್ದಾರೆ. ಗಿರಿ ಜಿಲ್ಲೆ ಎಂದೇ ಹೆಸರುವಾಸಿಯಾದ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದರ್ಶನಾಪುರ ಎಂಬ ಗ್ರಾಮದಲ್ಲಿ ಬಾಪುಗೌಡ ದರ್ಶನಾಪುರ ಅವರ ಮಗನಾಗಿ 1961 ಮಾ.03ರಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಜನಿಸಿದರು.

ಬಿಇ ಪದವಿ ಪಡೆದು ಅನೇಕ ವರ್ಷಗಳ ಕಾಲ ಸಿವಿಲ್‌ ಇಂಜಿನಿಯರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶರಣಬಸಪ್ಪಗೌಡರು, ರಾಜಕೀಯದಲ್ಲಿ ಅಪಾರ ಹೆಸರು ಮಾಡಿದ ತಂದೆ ಬಾಪುಗೌಡರ ಉತ್ತಮ ಸಂಸ್ಕಾರ ಮತ್ತು ಅವರ ಮಾರ್ಗದರ್ಶನದಲ್ಲಿ ಬೆಳೆದರು. ತಂದೆಯ ನಿಧನದ ನಂತರ ಇಂಜಿನಿಯರ್‌ ವೃತ್ತಿ ಬಿಟ್ಟು ಜನರ ಕಷ್ಟದಲ್ಲಿ ಭಾಗಿಯಾಗುವ ಮೂಲಕ “ಜನಸೇವೆಯೇ ಜನಾರ್ದನನ ಸೇವೆ’ ಎಂಬುದನ್ನು ತಿಳಿದು ರಾಜಕೀಯ ಕ್ಷೇತ್ರಕ್ಕೆ ಧುಮುಕಿದರು.

ಶಹಾಪುರ ಕ್ಷೇತ್ರದಲ್ಲಿ ಉತ್ತಮ ಕಾರ್ಯಗಳನ್ನು ಮಾಡುತ್ತ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ರಂಗದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಅವರು, 1994ರಲ್ಲಿ ಪ್ರಪ್ರಥಮ ಬಾರಿಗೆ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದರು. ಅನೇಕ ಕಷ್ಟಗಳ ಮಧ್ಯೆಯೂ ತಮ್ಮನ್ನು ಆರಿಸಿ ಕಳುಹಿಸಿದ ಜನರ ವಿಶ್ವಾಸ ಉಳಿಸಿಕೊಂಡರು. ಅಂದಿನಿಂದ ಇಂದಿನವರೆಗೂ ಜನರ ನೋವು-ನಲಿವು, ಕಷ್ಟ-ಕಾರ್ಪಣ್ಯಗಳಿಗೆ ಸ್ಪಂದಿಸಿದ್ದರ ಪರಿಣಾಮ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದರು. ಮಾನ್ಯ ಜೆ.ಎಚ್‌. ಪಟೇಲರ ಸರ್ಕಾರದಲ್ಲಿ ಇಂಧನ ಸಚಿವರಾಗಿ, ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಕೃಷಿ ಮಾರುಕಟ್ಟೆ ಸಚಿವರಾಗಿ ಅನೇಕ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಕೇವಲ ಶಹಾಪುರ ಕ್ಷೇತ್ರವಲ್ಲ ರಾಜ್ಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದರಿಂದ ರಾಜಕೀಯ ಕ್ಷೇತ್ರದಲ್ಲಿ ಛಾಪು ಮೂಡಿಸಿಕೊಂಡ  ಧೀಮಂತ ನಾಯಕರೆನಿಸಿದ್ದಾರೆ.

ವಿಶೇಷವಾಗಿ ತವರು ಕ್ಷೇತ್ರ ಶಹಾಪುರ ಕ್ಷೇತ್ರಕ್ಕೆ ದರ್ಶನಾಪುರ ಅವರ ಕೊಡುಗೆ ಅಪಾರವಾಗಿದೆ. ಶಹಾಪುರ ನೂತನ ಬಸ್‌ ನಿಲ್ದಾಣ, ಶಹಾಪುರ ಪಟ್ಟಣಕ್ಕೆ ಶಾಶ್ವತ ಕುಡಿವ ನೀರಿನ ಯೋಜನೆಗಾಗಿ ಭೀಮಾ ನದಿಯಿಂದ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡಲು ಸುಮಾರು 60 ಕೋಟಿ ರೂ. ಯೋಜನೆ, ಭೀಮರಾಯನ ಗುಡಿಯಲ್ಲಿ ಕೃಷಿ ವಿಶ್ವವಿದ್ಯಾಲಯದ ಮಹಾವಿದ್ಯಾಲಯ ಸ್ಥಾಪನೆ, ಹತ್ತಿಗೂಡುರದಲ್ಲಿ 220 ಕೆ.ವಿ ವಿದ್ಯುತ್‌ ಪರಿವರ್ತಕ ಘಟಕ ಸ್ಥಾಪನೆ, ಶಹಾಪುರದಲ್ಲಿ ಆಧುನಿಕ ಪದವಿ ಮಹಾವಿದ್ಯಾಲಯದ ಕಟ್ಟಡ ಮಂಜೂರಾತಿ, ಶಹಾಪುರ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣ, ಶಹಾಪುರ ಕ್ಷೇತ್ರದ ಕೆಂಭಾವಿ ಪುರಸಭೆಗೆ ಶಾಶ್ವತ ಕುಡಿವ ನೀರಿಗಾಗಿ ಕೆರೆ ನಿರ್ಮಾಣ ಮಾಡಲು ಸುಮಾರು 43 ಎಕರೆ ಸರ್ಕಾರಿ ಜಮೀನು ಮಂಜೂರಾತಿ, 10 ಕೋಟಿ ರೂ. ವೆಚ್ಚದಲ್ಲಿ ಕೆಂಭಾವಿಯಲ್ಲಿ μಲ್ಟರ್‌ಬೆಡ್‌ ನಿರ್ಮಾಣ, ಕೆಂಭಾವಿಯ ಉಕನಾಳ-ಶಹಾಪುರದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು, ಕೆಂಭಾವಿ- ನಾರಾಯಣಪುರ ರಸ್ತೆ ಅಭಿವೃದ್ಧಿ ಮೇಲ್ದರ್ಜೆಗೆ, ಶೈಕ್ಷಣಿಕವಾಗಿ ಕ್ಷೇತ್ರದ ಅನೇಕ ಶಾಲಾ-ಕಾಲೇಜುಗಳ ಮಂಜೂರಾತಿ, ನೂತನ ಹೆಚ್ಚುವರಿ ಕೋಣೆಗಳ ನಿರ್ಮಾಣ, ಕೆಂಭಾವಿಯ ನೂತನ ಬಾಲಕರ ಪ್ರೌಢಶಾಲೆ ನಿರ್ಮಾಣಕ್ಕೆ 2  ಕೋಟಿ ರೂ.ಮಂಜೂರು ಅಲ್ಲದೇ ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿ ಮಾಡಿದ್ದಾರೆ.

620 ಕೋಟಿ ರೂ. ಗಳಲ್ಲಿ ಬೂದಿಹಾಳ-ಪೀರಾಪುರ ಏತ ನೀರಾವರಿ ಯೋಜನೆ ಮಂಜೂರಾತಿ ಆಗಿದ್ದು ಈಗಾಗಲೇ ಟೆಂಡರ್‌ ಕೂಡ ಕರೆಯಲಾಗಿದೆ. ಇದರಿಂದ ಶಹಾಪುರ  ಮತಕ್ಷೇತ್ರದ 13 ಹಳ್ಳಗಳು ನೀರಾವರಿಗೆ ಒಳಪಡುತ್ತವೆ. ಕ್ಷೇತ್ರದಲ್ಲಿ ಅನೇಕ ನೂತನ ಗ್ರಾಪಂಗಳ ಕಟ್ಟಡಕ್ಕೆ ಮಂಜೂರಾತಿ ಮಾಡಿಸಿದ್ದು, ವಿವಿಧ ವಸತಿ ಯೋಜನೆಗಳಡಿಯಲ್ಲಿ ಬಡವರಿಗೆ ಮನೆಗಳ ಮಂಜೂರಾತಿ ಮಾಡಿದ್ದಾರೆ. ಕ್ಷೇತ್ರದ ಪ್ರತಿ ಗ್ರಾಮಗಳಲ್ಲಿ ಸಮುದಾಯ ಭವನ, ಅನೇಕ ಕಡೆಗಳಲ್ಲಿ ಶಾದಿ ಮಹಲ್‌, ಕೆರೆಗಳ ನಿರ್ಮಾಣ, ಕ್ಷೇತ್ರದ ಅನೇಕ ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ, ವೈದ್ಯಾಧಿ ಕಾರಿಗಳ ನೇಮಕ ಹೀಗೆ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತ ಕ್ಷೇತ್ರದ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಇತ್ತೀಚೆಗೆ ಕೋವಿಡ್‌ ಸಮಯದಲ್ಲಿ ಬೀದಿ ಪಾಲಾದ ಅದೆಷ್ಟೋ ಕುಟುಂಬಗಳಿಗೆ ಧೈರ್ಯ ತುಂಬಿದ್ದಾರಲ್ಲದೇ ಅನೇಕ ಕುಟುಂಬಗಳಿಗೆ ಹೆಗಲು ಕೊಟ್ಟಿದ್ದಾರೆ .

ಗುಂಡುಭಟ್ಟ ಜೋಶಿ 

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.