ಕುರಿ-ಮೇಕೆಗೆ ರೋಗ ನಿಯಂತ್ರಕ ಲಸಿಕ


Team Udayavani, Jul 8, 2018, 4:26 PM IST

405.jpg

ನಾರಾಯಣಪುರ: ಕೊಡೇಕಲ್‌ ಹೋಬಳಿ ವ್ಯಾಪ್ತಿಯಲ್ಲಿ ಜಿಲ್ಲೆಗಳ ರೂಪಾಂತರ ಎಂಬ ಕಾರ್ಯಕ್ರಮದಡಿ ಆಯ್ಕೆಯಾದ ರಾಯನಗೋಳ, ಬೋಮ್ಮನಗುಡ್ಡ ಹಾಗೂ ಯರಕಿಹಾಳ ಗ್ರಾಮಗಳಲ್ಲಿನ ಕುರಿ ಮತ್ತು ಮೇಕೆಗಳಿಗೆ ಪಿಪಿಆರ್‌ ರೋಗ ನಿಯಂತ್ರಕ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ವೈದ್ಯ ಮಹಬೂಬಸಾಬ್‌ ಖಾಜಿ ಹೇಳಿದರು.

ಕೊಡೇಕಲ್‌ ಹೋಬಳಿ ವ್ಯಾಪ್ತಿಯ ರಾಯನಗೋಳ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜಿಲ್ಲೆಗಳ ರೂಪಾಂತರ ಕಾರ್ಯಕ್ರಮದಡಿ ಪಿಪಿಆರ್‌ ರೋಗ ನಿಯಂತ್ರಣ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದೆ. 

ದೇಶದಲ್ಲಿನ ಅತ್ಯಂತ ಹಿಂದುಳಿದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲೆಗಳ ರೂಪಾಂತರ ಎಂಬ ಮಹತ್ವಾಕಾಂಕ್ಷಿ ಕಾರ್ಯಕ್ರಮದಡಿ ರಾಜ್ಯದ ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಆ ಎರಡು ಜಿಲ್ಲೆಗಳಲ್ಲಿ ಗುರುತಿಸಲಾಗಿರುವ ಆಯ್ದ ಗ್ರಾಮಗಳಲ್ಲಿನ ಎಲ್ಲ ಕುರಿ ಮತ್ತು
ಮೇಕೆಗಳಿಗೆ ಮುಂಜಾಗೃತ ಕ್ರಮವಾಗಿ ಪಿಪಿಆರ್‌ ರೋಗ ನಿಯಂತ್ರಕ ಲಸಿಕೆಯನ್ನು ಕಡ್ಡಾಯವಾಗಿ ಹಾಕಲಾಗುತ್ತಿದೆ ಎಂದು ಹೇಳಿದರು. ಅದೇ ರೀತಿ ಈ ಹಿಂದೆಯೂ ಕೂಡ ಕಾಲು ಬಾಯಿ ರೋಗ ನಿಯಂತ್ರಣಕ್ಕೆ ನಾರಾಯಣಪುರ ಪಶು ಆಸ್ಪತ್ರೆ ವ್ಯಾಪ್ತಿಯ ಗ್ರಾಮಗಳಲ್ಲಿನ ರೈತರ ರಾಸುಗಳಿಗೆ
ಕಡ್ಡಾಯವಾಗಿ ರೋಗ ನಿಯಂತ್ರಕ ಎಫ್‌ಎಂಡಿ ಲಸಿಕೆ ಹಾಕಲಾಗಿದೆ.

ಮುಂಬರುವ ದಿನಗಳಲ್ಲಿ ಕೊಡೇಕಲ್‌ ಹೋಬಳಿ ವ್ಯಾಪ್ತಿಯಲ್ಲಿ ಆಯ್ಕೆಯಾದ ರಾಯನಗೋಳ, ಬೋಮ್ಮನಗುಡ್ಡ ಹಾಗೂ ಯರಕಿಹಾಳ ಮೂರು ಗ್ರಾಮಗಳಲ್ಲಿನ ಹೆಚ್ಚು ಹಾಲು ನೀಡುವ ಸ್ಥಳೀಯ ತಳಿಗಳ ಅಭಿವೃದ್ಧಿಗಾಗಿ ಸಂತಾನೋತ್ಪಾದನೆಗೆ ಅರ್ಹವಾದ ದೇಶಿ ರಾಸುಗಳಾದ ಎಮ್ಮೆ, ಆಕಳುಗಳಿಗೆ ಕೃತಕ ಗರ್ಭಧಾರಣೆ ಮಾಡಲು ಇಲಾಖೆ ನಿರ್ದೇಶನ ನೀಡಿದ್ದು, ಆಯ್ಕೆಯಾಗಿರುವ ಗ್ರಾಮಗಳ ವ್ಯಾಪ್ತಿಯ ಎಮ್ಮೆ, ಆಕಳುಗಳಿಗೆ ಕೃತಕ ಗರ್ಭಧಾರಣೆ ಮಾಡಲಾಗುವುದು. 

ಆಯಾ ಗ್ರಾಮದ ರೈತರು ತಮ್ಮ ವ್ಯಾಪ್ತಿಯಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಸಹಕಾರ ನೀಡುವ ಮೂಲಕ ಯೋಜನೆ ಸದುಪಯೋಗ ಪಡೆಯಬೇಕು ಎಂದು ಹೇಳಿದರು. ಗ್ರಾಮದ ರೈತರು ಸೇರಿದಂತೆ ಪಶು ಆಸ್ಪತ್ರೆ ಸಿಬ್ಬಂದಿ ಇದ್ದರು. 

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.