ಕೃಷಿ ಜೀವನ ಬದಲಿಸುವುದೇ ಧ್ಯೇಯ

ಕುಟುಂಬದ ಶ್ರೇಯೋಭಿವೃದ್ಧಿಯೇ ಮಹಿಳೆಯ ಗುರಿಯಾಗಲಿ: ಡಾ| ಡಿ. ವೀರೇಂದ್ರ ಹೆಗ್ಗಡೆ

Team Udayavani, Jan 26, 2020, 1:07 PM IST

26-January-12

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ರಾಜ್ಯವ್ಯಾಪಿ ಕಾರ್ಯ ನಿರ್ವಹಿಸುತ್ತಿದೆ. ಸಾಲ ಕೊಡುವುದೇ ಇದರ ಉದ್ದೇಶವಲ್ಲ. ಇದೊಂದು ಕಿರುಸಾಲ ಕೊಡುವ ಸಂಸ್ಥೆ. ಆದರೆ ನಮ್ಮ ಉದ್ದೇಶ ಕೃಷಿ ಜೀವನ, ವ್ಯಕ್ತಿತ್ವ, ಆಹಾರ ಬದುಕಿನ ಘಟ್ಟಗಳನ್ನು ಪರಿವರ್ತನೆಗೆ ತರುವುದಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ತಿಳಿಸಿದರು.

ಶನಿವಾರ ವಿದ್ಯಾನಗರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಜಿಲ್ಲಾ ಕೇಂದ್ರ ಕಟ್ಟಡ ಚೈತನ್ಯಸೌಧ ಹಾಗೂ ಯಂತ್ರಶ್ರೀ ಭತ್ತ ಅಭಿಯಾನ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಕೇವಲ ಹೆರುವಾಗ, ಊಟ ಹಾಕುವಾಗ ಗೃಹಲಕ್ಷ್ಮೀಯಾಗುವುದಿಲ್ಲ. ಅವಳು ಪತಿಗೆ, ತಂದೆಗೆ, ಮಕ್ಕಳಿಗೆ ಬೆಂಬಲವಾಗಿ ನಿಂತು ಅವರನ್ನು ಬೆಳೆಸುವ ನಿಟ್ಟನಲ್ಲಿ ಕಾರ್ಯ ನಿರ್ವಹಿಸಬೇಕು ಎಂದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿನ ತಮ್ಮ ಒಡನಾಟದ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಅನಿಲ್‌ ಜೈನ್‌ ವಿನ್ಯಾಸದಲ್ಲಿ ಗುತ್ತಿಗೆದಾರ ಶ್ರೀನಿವಾಸ್‌ ನಿರ್ಮಿಸಿರುವ ಈ ಕಟ್ಟಡಕ್ಕೆ ಹೇಮಾವತಿ ವಿ. ಹೆಗ್ಗಡೆ ಅವರ ಸಲಹೆಯಂತೆ ಚೈತನ್ಯಸೌಧ ಎಂಬ ಹೆಸರನ್ನಿಡಲಾಗಿದ್ದು, ಈ ಕಚೇರಿಯು ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನಷ್ಟು ಸಕ್ರಿಯವಾಗಿ ಲಕ್ಷಾಂತರ ಮಹಿಳೆಯರಿಗೆ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಮುಂದಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯವ್ಯಾಪಿ ಮಹಿಳೆಯರ ಅಭ್ಯುದಯಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವರಪ್ರಸಾದವಾಗಿದೆ. ಜಿಲ್ಲೆಯ ಎಲ್ಲ ಮಹಿಳೆಯರು ಇದರ ಸದುಪಯೋಗ ಪಡೆದು ಸಬಲರಾಗಲು ಕೋರಿದರು.

ಸಂಸದ ಬಿ.ವೈ.ರಾಘವೇಂದ್ರ ಅವರು ಸಿಡ್ಬಿ ಪ್ರಯಾಸ್‌ ಸ್ವ-ಉದ್ಯೋಗ ಯೋಜನೆ ನೆರವು ಬಿಡುಗಡೆ ನೆರವೇರಿಸಿ ಮಾತನಾಡಿ, ಜಿಲ್ಲೆಯ ಮಹಿಳೆಯರ ಆರ್ಥಿಕ ಸಾಧನಗೆ ಪೂರಕವಾದ ಈ ಯೋಜನೆ ಹಾಗೂ ಧರ್ಮಾಧಿಕಾರಿಗಳನ್ನು ಅಭಿನಂದಿಸಿದರು. ವಿಕಲ ಚೇತನರಿಗೆ ಸಲಕರಣೆ ವಿತರಿಸಿದ ಮಹಾನಗರ ಪಾಲಿಕೆ ಮೇಯರ್‌ ಲತಾ ಗಣೇಶ್‌ ಮಾತನಾಡಿ, ನಾನು ಈ ಸ್ಥಾನಕ್ಕೆ ಬರಲು ನನಗೆ ಹಿಂದಿನ 10 ವರ್ಷಗಳ ಕಾಲ ಧರ್ಮಸ್ಥಳದ ಈ ಯೋಜನೆ ಮೂಲ ಪ್ರೇರಕ ಶಕ್ತಿಯಾಗಿತ್ತು ಎಂದು ಧರ್ಮಾಧಿಕಾರಿಗಳನ್ನು ಅಭಿನಂದಿಸಿದರು.

ಭತ್ತ ಅಭಿಯಾನ ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಪಂ ಉಪಾಧ್ಯಕ್ಷೆ ವೇದಾ ವಿಜಯ್‌ಕುಮಾರ್‌ ಮಾತನಾಡಿ, ನಾನೊಬ್ಬ ರೈತ ಕುಟುಂಬದ ಮಹಿಳೆಯಾಗಿದ್ದು, ಭತ್ತದ ಬೇಸಾಯದ ಬಗ್ಗೆ ಅರಿವಿದೆ. ನನಗೆ ಇದರ ಉದ್ಘಾಟನೆಯ ಸೌಭಾಗ್ಯ ನೀಡಿದ್ದು, ಅಭಿನಂದನೀಯ ಎಂದರು.

ಕಾರ್ಯಕ್ರಮದಲ್ಲಿ ಪಾಲಿಕೆ ಉಪಮೇಯರ್‌ ಚನ್ನಬಸಪ್ಪ, ಸದಸ್ಯರಾದ ಸುರೇಖಾ ಮುರುಳೀಧರ್‌, ಸುನೀತಾ ಅಣ್ಣಪ್ಪ, ಯಮುನಾ ರಂಗೇಗೌಡ ಮತ್ತಿತರರು ಇದ್ದರು. ಕಾರ್ಯಕ್ರಮದಲ್ಲಿ ನಳೀನ್‌ ರಾವ್‌ ತಂಡದವರು ಪ್ರಾರ್ಥಿಸಿದರು. ಕಾರ್ಯ ನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿದರು. ಯೋಜನಾಧಿಕಾಕಾರಿ ಬಾಲಕೃಷ್ಣ ಹಿರಿಂಜ ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.