ಗಿರಿನಾಡಿಗೆ ಸಿದ್ಧಗಂಗಾ ಶ್ರೀಗಳ ಒಡನಾಟ
Team Udayavani, Jan 22, 2019, 11:37 AM IST
ಯಾದಗಿರಿ: ಕಾಯಕ ಯೋಗಿ ತ್ರಿವಿಧ ದಾಸೋಹಿ ನಡೆದಾಡುವ ದೇವರೆಂದೇ ನಾಮಾಂಕಿತಗೊಂಡ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಅವರು 2007ರಲ್ಲಿ ಗಿರಿನಾಡಿನ ಸುಕ್ಷೇತ್ರ ಅಬ್ಬೆತುಮಕೂರಿನ ವಿಶ್ವಾರಾಧ್ಯರ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದು, ಅಲ್ಲದೇ ಅಂದಿನ ದಿನವೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆಂಬ ವಿಷಯ ತಿಳಿದು ಬಂದಿರುವುದು ಇಲ್ಲಿನ ಜನರು ಸದ್ಭಕ್ತರು ಮರೆಯುವಂತಿಲ್ಲ.
ಅಂದು ತುಮಕೂರಿನ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿರುವಾಗಲೇ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಸುದ್ದಿ ತಿಳಿದು, ಅಂದಿನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ್ದ ಅವರು, ಯಾವುದೇ ಪ್ರಶಸ್ತಿ, ಹೆಸರಿಗೆ ನಾನು ಕಾಯಕ ಮಾಡುವುದಿಲ್ಲ. ಪ್ರಶಸ್ತಿ ಪಡೆಯಬೇಕೆಂಬ ಹಂಬಲವು ಇಲ್ಲ. ಆದರೆ, ಸಂತ ವಿಶ್ವಾರಾಧ್ಯರ ನೆಲದಲ್ಲಿರುವಾಗ ಪ್ರಶಸ್ತಿ ಘೋಷಣೆಯಾಗಿರುವುದು ಇಲ್ಲಿನ ನೆಲದ ಮಹಿಮೆ ಎಂತಹದ್ದು ಎಂಬುದನ್ನು ತೋರಿಸಿಕೊಡುತ್ತದೆ ಎಂದಿದ್ದರು.
ಅಲ್ಲದೇ, ಅಂದು ಜಾತ್ರಾ ಅಂಗವಾಗಿ ರಾತ್ರಿ ನಡೆದ ಬಸವೇಶ್ವರರ ಕುರಿತ ನಾಟಕವನ್ನು ಮುಂದಿನ ಸಾಲಿನಲ್ಲಿ ಕುಳಿತು ನಾಟಕ ಮುಗಿಯವವರೆಗೂ ಕುಳಿತು ವೀಕ್ಷಿಸಿರುವುದು ವಿಶೇಷವಾಗಿತ್ತು ಎನ್ನಲಾಗಿದೆ. ಮರುದಿನ ಹಲವು ಭಕ್ತರ ಮನೆಗೆ ತೆರಳಿ ಉತ್ಸಾಹದಿಂದಲೇ ಲಿಂಗ ಪೂಜೆ ವಿಧಿ ವಿಧಾನಗಳಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್