ಬೇಸಿಗೆಯಲ್ಲಿ ನೀರಿನ ಅಭಾವವಾಗದಿರಲಿ: ನಾಡಗೌಡ
Team Udayavani, Apr 17, 2020, 11:52 AM IST
ಸಿಂಧನೂರು: ನಗರದ ತಾಪಂ ಸಭಾಂಗಣದಲ್ಲಿ ನಡೆದ ಪಿಡಿಒಗಳ ಸಭೆಯಲ್ಲಿ ಶಾಸಕ ವೆಂಕಟರಾವ್ ನಾಡಗೌಡ ಮಾತನಾಡಿದರು
ಸಿಂಧನೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವವಾಗದಂತೆ ಎಚ್ಚರ ವಹಿಸಿ ಕೆರೆ ತುಂಬಿಸಿಕೊಳ್ಳಲು ಮುಂದಾಗುವಂತೆ ತಾಲೂಕಿನ ಪಿಡಿಒಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ನಿರ್ದೇಶನ ಮಾಡಿದರು.
ನಗರದ ತಾಪಂ ಸಭಾಂಗಣದಲ್ಲಿ ಗುರುವಾರ ನಡೆದ ಪಿಡಿಒಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೇಸಿಗೆಯಲ್ಲಿ ಜನ-ಜಾನುವಾರುಗಳು ಕುಡಿಯುವ ನೀರಿನ ಅಗತ್ಯತೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳಲ್ಲೂ ನೀರಿನ ಬಗ್ಗೆ ಮುಂಜಾಗ್ರತಾ ಕ್ರಮ ಕ್ರಮ ಕೈಗೊಂಡು ನೀರು ವ್ಯರ್ಥ ಮಾಡದಂತೆ ಜಾಗೃತಿ ಮೂಡಿಸಬೇಕು. ಯಾರಾದರೂ ಬೇಜವಾಬ್ದಾರಿ ತೋರಿದರೆ ಅಂಥವರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದರು.
ಈಗಾಗಲೇ ಕೊರೊನಾ ಬಗ್ಗೆ ಪ್ರತಿ ಗ್ರಾಪಂಗಳಲ್ಲಿ ಜಾಗೃತಿ ಮೂಡಿಸುವ ಕೆಲಸವಾಗುತ್ತಿದ್ದರೂ ಇನ್ನೂ ಕೆಲವರು ಮುಂಜಾಗ್ರತಾ ಕ್ರಮ ಅನುಸರಿಸುತ್ತಿಲ್ಲ. ರೋಗದ ಬಗ್ಗೆ ಎಚ್ಚರ ವಹಿಸದಿದ್ದರೆ ಮುಂದೆ ತೊಂದರೆಯಾಗುತ್ತದೆ ಎಂದರು. ಲಾಕ್ಡೌನ್ನಿಂದ ಬಡ ಕುಟುಂಬಗಳಿಗೆ ಕೆಲಸವಿಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಬಡ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಕೆಲಸ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಕೊರೊನಾ ರೋಗ ನಿವಾರಣೆಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಬೇಕು ಎಂದರು. ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಗುರಿಕಾರ, ಇಒ ಬಾಬು ರಾಠೊಡ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ