ಮುದ್ನಾಳ್ಗೆ ಬಸವ ಸಮಿತಿ ಸನ್ಮಾನ
Team Udayavani, Sep 11, 2022, 3:35 PM IST
ಯಾದಗಿರಿ: ಸಮಾಜದಲ್ಲಿ ಮನೆ ಮಾಡಿದ್ದ ಅಸ್ಪೃಶ್ಯತೆ ನಿವಾರಣೆಗಾಗಿ ಸದಾ ತಲೆ ಮೇಲೆ ಶ್ವೇತವಸ್ತ್ರ ಧರಿಸಿ, ಮೌನಕ್ರಾಂತಿ ಮಾಡಿದ್ದ ಸ್ವಾತಂತ್ರ್ಯ ಹೋರಾಟಗಾರ ದಿ. ವಿಶ್ವನಾಥರಡ್ಡಿ ಮುದ್ನಾಳ್ ಬಸವ ತತ್ವ ನಿಷ್ಠರಾಗಿದ್ದರು ಎಂದು ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ ಬಣ್ಣಿಸಿದರು.
ಬೆಂಗಳೂರಿನ ಬಸವ ಭವನದಲ್ಲಿ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ದಿ. ಬಿ.ಡಿ. ಜತ್ತಿ ಅವರ 110ನೇ ಜನ್ಮದಿನ ಕಾರ್ಯಕ್ರಮದಲ್ಲಿ ವೀರಶೈವ ಸಮುದಾಯಕ್ಕೆ ಮುದ್ನಾಳರ ಕೊಡುಗೆ ಸ್ಮರಿಸಿದ ಅವರು, ವರದಕ್ಷಿಣೆ ತೆಗೆದುಕೊಳ್ಳುವ ಮದುವೆಗೆಗಳಿಗೆ ವಿಶ್ವನಾಥರಡ್ಡಿ ಎಂದಿಗೂ ಹೋಗಲಿಲ್ಲ. ಹೈಕ (ಕಲ್ಯಾಣ ಕರ್ನಾಟಕ) ಭಾಗ ಸರ್ವತೋಮುಖ ಅಭಿವೃದ್ಧಿ ಕಾಣದ ಹೊರತು ನನಗ್ಯಾವ ಪ್ರಶಸ್ತಿಯೂ ಬೇಡ ಎಂದು ಮನೆ ಬಾಗಿಲಿಗೆ ಬಂದಿದ್ದ ಕರ್ನಾಟಕ ಏಕೀಕರಣ ಪ್ರಶಸ್ತಿ ನಿರಾಕರಿಸಿದ ನಿಸ್ವಾರ್ಥ ಜೀವಿ ಮುದ್ನಾಳ್ ಎಂದರು.
ಬಸವ ಸಮಿತಿ ಹಿರಿಯ ಉಪಾಧ್ಯಕ್ಷರಾಗಿ ಬಿಡಿ ಜತ್ತಿ ಮತ್ತು ಭೀಮಣ್ಣ ಖಂಡ್ರೆ ಜತೆ ಮುದ್ನಾಳ್ ಅವರು ನಾಡಿನಾದ್ಯಂತ ಶರಣರ ವಚನ, ಸಿದ್ಧಾಂತಗಳನ್ನು ಪಸರಿಸಲು ಹಗಲಿರಳು ಶ್ರಮಿಸಿದ್ದರು ಎಂದು ಹೇಳಿದರು.
ಇದೇ ವೇಳೆ ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಶಾಸಕ ವೆಂಕಟರಡ್ಡಿ ಮುದ್ನಾಳ್ರನ್ನು ಬಸವ ಸಮಿತಿಯಿಂದ ಸನ್ಮಾನಿಸಲಾಯಿತು. ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮಿಗಳು ಹಾಗೂ ಬೇಲಿಮಠದ ಸ್ವಾಮಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ