ರೈತರ ಸಮಸ್ಯೆಗೆ ಪರಿಹಾರ ಕಲ್ಪಿಸಿ
Team Udayavani, Jul 20, 2022, 1:04 PM IST
ಶಹಾಪುರ: ಕೃಷಿ ಚಟುವಟಿಕೆಗೆ ಬೇಕಾಗುವ ಸಲಕರಣೆ, ರಸಗೊಬ್ಬರ ಸೇರಿದಂತೆ ಇತರೆ ಸಮಸ್ಯೆಗಳು ಉಂಟಾಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸರ್ಕಾರಿ ಇಲಾಖೆಗಳ ಪ್ರಮುಖ ಅಧಿಕಾರಿಗಳ ಸಭೆ ಕರೆಯಬೇಕು ಎಂದು ಆಗ್ರಹಿಸಿ ಕೃಷಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ಮತ್ತು ಆಮ್ ಆದ್ಮಿ ಕಾರ್ಯಕರ್ತರು ಜಂಟಿಯಾಗಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ತಾಲೂಕಿನಾದ್ಯಂತ ಮುಂಗಾರು ಹಂಗಾಮಿನಲ್ಲಿ ಶೇ.70 ಬೀಜಗಳ ಬಿತ್ತನೆ ಮಾಡಲಾಗಿದೆ. ಆದರೆ ಬೆಳೆಗಳಿಗೆ ಸಮರ್ಪಕ ರಸಗೊಬ್ಬರ, ಕ್ರಿಮಿನಾಶಕ ವಿತರಣೆ ಸೇರಿದಂತೆ ವಿದ್ಯುತ್ ಪೂರೈಕೆ ಅಗತ್ಯವಿದ್ದು, ಯಾವುದೇ ಕೊರತೆ ಉಂಟಾಗದಂತೆ ಎಚ್ಚರಿಕೆ ವಹಿಸಬೇಕಿದೆ ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.
ಅದರಂತೆಯೇ ಬೆಳೆಗಳಿಗೆ ಕಾಲುವೆ ನೀರು ಹರಿಸಲು ದಿನಕ್ಕೆ 7 ತಾಸು ವಿದ್ಯುತ್ ಪೂರೈಸುವಂತೆ ಆಮ್ ಆದ್ಮಿ ಮುಖಂಡರು ಒತ್ತಾಯಿಸಿದರು.
ಈ ವೇಳೆ ಹಸಿರು ಸೇನೆ ಜಿಲ್ಲಾಧ್ಯಕ್ಷ ಮಹೇಶಗೌಡ ಸುಬೇದಾರ, ಆಮ್ ಆದ್ಮಿ ಪಕ್ಷದ ಚಂದ್ರಶೇಖರ ಗುತ್ತೇದಾರ ಸೇರಿದಂತೆ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ