ಆರೋಗ್ಯಕರ ಜೀವನಕ್ಕೆ ಕ್ರೀಡೆ ಅಗತ್ಯ
Team Udayavani, Jan 29, 2022, 3:01 PM IST
ನಾರಾಯಣಪುರ: ಆರೋಗ್ಯಕರ ಜೀವನ ಹಾಗೂ ದೈಹಿಕ, ಮಾನಸಿಕವಾಗಿ ಸದೃಢರಾಗಲು ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯ ಎಂದು ಪಿಎಸ್ಐ ಸಿದ್ದೇಶ್ವರ ಗೆರಡೆ ಹೇಳಿದರು.
ಇಲ್ಲಿನ ಎಂಪಿಎಸ್ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ಕ್ರೀಡಾಪಟುವೂ ಗೆದ್ದನೆಂದು ಹಿಗ್ಗದೆ ಸೋತನೆಂದು ಕುಗ್ಗದೆ ಕ್ರೀಡಾ ಸ್ಫೂರ್ತಿಯಿಂದ ಆಟವಾಡಬೇಕು. ಗೆಲುವು ಸೋಲುಗಳನ್ನು ಸಮನಾಗಿ ಸ್ವೀಕರಿಸಬೇಕು. ತಾವು ಆಡುವ ಆಟದಲ್ಲಿ ಪ್ರಾಮಾಣಿಕತೆ, ಶಿಸ್ತು, ಸಮಯ, ಏಕಗ್ರತೆಗೆ ಮಹತ್ವ ನೀಡಬೇಕು. ಇವೆಲ್ಲ ಗುಣಲಕ್ಷಣಗಳಿರುವ ಕ್ರೀಡಾಪಟು ಮಾದರಿ ಆಟಗಾರನಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.
ಟೂರ್ನಿಯಲ್ಲಿ ಭಾಗವಹಿಸಿದ 8 ತಂಡಗಳ ಆಟಗಾರರು ರೋಚಕ ಆಟ ಪ್ರದರ್ಶಿಸಿದರು. ಕೊನೆಯಲ್ಲಿ ರನ್ನ ತಂಡವು ಪ್ರಥಮ ಬಹುಮಾನ ಪಡೆದರೆ, ಜನ್ನ ತಂಡ ದ್ವಿತೀಯ, ಪೊನ್ನ ತಂಡವು ತೃತೀಯ ಬಹುಮಾನ ಪಡೆಯಿತು.
ಸಿಆರ್ಪಿ ಮೌನೇಶ ಬಡಿಗೇರ, ಮುಖ್ಯಶಿಕ್ಷಕಿ ಬಸಮ್ಮ ಬಿರಾದಾರ, ಉಪನ್ಯಾಸಕ ದ್ಯಾಮಣ್ಣ ಕೊಡೇಕಲ್, ಎಚ್.ಸಿ. ಸಂಗಪ್ಪ ಮೇಗಲಮನಿ, ಶಿಕ್ಷಕರ ಸಂಘದ ಹಾಜಿಮಲ್ಲಿಂಗ್ ಬಿಜಲಿ, ಬಸವರಾಜ ಯಾದವಾಡ, ಟಿಎಲ್ಸಿ ಕೇಂದ್ರದ ಮುಖ್ಯಸ್ಥ ಅಮೃತ್, ಮಂಜುನಾಥ, ಶ್ರವಣಕುಮಾರ, ನಾಗನಗೌಡ, ಗುರುಮೂರ್ತಿ ಗದ್ದೆಪ್ಪ, ಶಂಕರ, ರಮೇಶ, ವಿನಯ, ಸುಭಾಷ, ಸಿದ್ದಣ್ಣ, ಅಬ್ದುಲ್ ಖಾದಿರ್ ಚೌದ್ರಿ ಇದ್ದರು. ಶಿಕ್ಷಕರಾದ ಮರಿಯಪ್ಪ ಸ್ವಾಗತಿಸಿದರು. ಭೀಮಾಶಂಕರ ನಿರೂಪಿಸಿದರು. ಗದ್ದೆಪ್ಪ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್