SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?
Team Udayavani, May 9, 2024, 3:30 PM IST
ಯಾದಗಿರಿ: 2024 ರ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಯಾದಗಿರಿ ಜಿಲ್ಲೆ ಪ್ರತಿವರ್ಷದಂತೆ ಕೊನೆಯ ಸ್ಥಾನ ಪಡೆದುಕೊಂಡಿದೆ.
ಹಿಂದುಳಿದ ಜಿಲ್ಲೆಯಾದ ಯಾದಗಿರಿ ಶೈಕ್ಷಣಿಕವಾಗಿ ಹಿಂದೆ ಉಳಿದಿದ್ದು, ಇದಕ್ಕೆ ಶಿಕ್ಷಕರ ನೇಮಕ ಕೊರೆತಯೂ ಒಂದಾಗಿದೆ.
2023 ನೇ ಸಾಲಿನಲ್ಲಿ ಯಾದಗಿರಿ ಜಿಲ್ಲೆಯು ಎಸ್ಎಸ್ಎಲ್ಸಿ ಫಲಿತಾಂಶ 73 ರಷ್ಟು ಪ್ರತಿಶತ ಪಡೆದಿದತ್ತು. ಆದರೆ ಪ್ರಸ್ತುತ ವರ್ಷ ಫಲಿತಾಂಶ ಶೇ.50.59 ಕ್ಕೆ ಇಳಿದಿದೆ.
ರಾಜ್ಯದಲ್ಲಿ ಕೊನೆಯ ಸ್ಥಾನ ಪಡೆದ ಯಾದಗಿರಿ ಜಿಲ್ಲೆಯಲ್ಲಿ 18880 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದರು. 9551 ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.
ಯಾದಗಿರಿ ಜಿಲ್ಲೆ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಕಳೆದ ಐದು ವರ್ಷಗಳಿಂದ ಕೊನೆಯ ಸ್ಥಾನ ಪಡೆಕೊಂಡು, ಶೈಕ್ಷಣಿಕವಾಗಿ ಅತ್ಯಂತ ಹಿಂದೆ ಉಳಿದಿರುವುದು ಶೋಚನೀಯವಾಗಿದೆ.
ಪ್ರೌಢ ಶಾಲೆಗಳ 1435 ಮಂಜೂರಾತಿ ಶಿಕ್ಷಕರ ಹುದ್ದೆಯಲ್ಲಿ, 760 ಶಿಕ್ಷಕರ ಹುದ್ದೆಗಳು ಭರ್ತಿ ಮಾಡಲಾಗಿದೆ. ಸುಮಾರು 675 ಖಾಯಂ ಶಿಕ್ಷಕರ ಖಾಲಿ ಇದ್ದು, ಅದರಲ್ಲಿ, 650 ಅತಿಥಿ ಶಿಕ್ಷಕರ ನಿಯೋಜಿಸಿ ಮಕ್ಕಳಿಗೆ ಪಾಠ ಮಾಡಲಾಗಿದೆ. ಕಲಿಕಾ ಮಟ್ಟ ಸುಧಾರಣೆ ವಿಶೇಷ ಕ್ಲಾಸ್ ತೆಗೆದುಕೊಳ್ಳಲಾಗಿದೆ. ಆದರೂ ಫಲಿತಾಂಶ ಸುಧಾರಣೆ ಕಂಡಿಲ್ಲ. ಮಕ್ಕಳನ್ನು ಕರೆದುಕೊಂಡು ಪೋಷಕರು ವಲಸೆ ಹೋಗಿದ್ದು ಕೂಡ, ಫಲಿತಾಂಶ ಹಿನ್ನಡೆಗೆ ಕಾರಣವಾಗಿದೆ ಎಂದು ಯಾದಗಿರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
MUST WATCH
ಹೊಸ ಸೇರ್ಪಡೆ
CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ
Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Iran President ಇಬ್ರಾಹಿಂ ರೈಸಿ ದುರ್ಮರಣ; ಅಧಿಕಾರ ಕೈಗೆತ್ತಿಕೊಂಡ ಮೊಹಮ್ಮದ್ ಮೊಖ್ಬರ್
Boys Drowned: ಬನಹಟ್ಟಿ ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು