ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ಪರಿಚಯ ಅವಶ್ಯ


Team Udayavani, May 2, 2022, 6:03 PM IST

22world

ಯಾದಗಿರಿ: ಜಗತ್ತಿನಲ್ಲಿ ಕೊರೊನಾ ದಾಳಿಯ ನಂತರ ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆ ಕಾಣುತ್ತಿದ್ದೇವೆ. ಕಾರಣ ಇಂದು ನಾವು ವಿದ್ಯಾರ್ಥಿಗಳಿಗೆ ಹೊಸ ಜಗತ್ತಿನ ನಿಯಮಗಳ ಪರಿಚಯ ಮಾಡುವ ಜೊತೆಗೆ ಸೂಕ್ತ ಜ್ಞಾನ ನೀಡುವುದು ಅವಶ್ಯಕವಾಗಿದೆ ಎಂದು ಸಂಪನ್ಮೂಲ ವ್ಯಕ್ತಿ ಮಹೇಶ ಮಾಶಾಲ್‌ ಧಾರವಾಡ ಅಭಿಪ್ರಾಯಪಟ್ಟರು.
ಇಲ್ಲಿನ ಆರ್ಯಭಟ್ಟ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಜ್ಞಾನ ಚೇತನ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಿದ ಅವರು, ಪ್ರಸಕ್ತ ದಿನಗಳಲ್ಲಿ ಜ್ಞಾನವಂತನಿಗಿಂತ ವೈಜ್ಞಾನಿಕ ಯಂತ್ರಗಳು ಉನ್ನತ ಸ್ಥಾನದಲ್ಲಿವೆ ಎಂದು ತಿಳಿಸಿದರು.

ಪಾಲಕರು ಮೊದಲು ತಮ್ಮ ಮಕ್ಕಳ ಬಗ್ಗೆ ನಕರಾತ್ಮಕ ಆಲೋಚನೆ ಮಾಡುವುದನ್ನು ನಿಲ್ಲಿಸಿ, ಅವರ ಪ್ರತಿಭೆ ಗಮನಿಸಿ, ಸಕಾಲಕ್ಕೆ ಪ್ರೋತ್ಸಾಹ ನೀಡಬೇಕು ಎಂದರು.

10ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಮುಂದೆ ನಾವು ಏನು ಅಭ್ಯಾಸ ಮಾಡಬೇಕು ಎಂಬ ಗೊಂದಲದಲ್ಲಿರುತ್ತಾರೆ. ಅಂತವರು ಮೊದಲು ನಿಮ್ಮಲ್ಲಿರುವ ಆಸಕ್ತಿ ಗುರುತಿಸಿಕೊಂಡು ಆ ಕ್ಷೇತ್ರ ಆಯ್ಕೆ ಮಾಡಿಕೊಂಡು ಅಚಲ ನಿರ್ಧಾರ, ಪರಿಶ್ರಮದೊಂದಿಗೆ ಅಭ್ಯಾಸ ಮಾಡಿ ಗುರಿ ತಲುಪಿ. ಸಮಾಜಕ್ಕೆ ಒಬ್ಬ ಪರಿಣಿತ ಶಕ್ತಿಯಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿ ನರೇಂದ್ರ ಬಡಸೇಶಿ ಉಪನ್ಯಾಸ ನೀಡಿ, ಮಕ್ಕಳ ಶೈಕ್ಷಣಿಕ, ದೈಹಿಕ, ಮಾನಸಿಕ ಪ್ರಗತಿಯಲ್ಲಿ ಉತ್ತಮ ಪರಿಸರದ ಪಾತ್ರ ಪ್ರಮುಖವಾಗಿದೆ. ಇಂತಹ ಬಿಸಿಲು ನಾಡಿನಲ್ಲಿ ಆರ್ಯಭಟ್ಟ ಶಾಲೆ ಒಳ್ಳೆಯ ಪರಿಸರ ಹಾಗೂ ಗುಣಮಟ್ಟದ ಬೋಧನೆ ನೀಡುತ್ತಿರುವುದು ಬದಲಾವಣೆಯ ಸಂಕೇತ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರದ ಜಿ.ವಿ. ಕೃಷ್ಣಾರೆಡ್ಡಿ ವಿದ್ಯಾರ್ಥಿಗಳಿಗೆ ಪೂರಕವಾದ ವಿಷಯಗಳನ್ನು ತಿಳಿಸಿದರು. ಶಿಕ್ಷಣ ಸಂಸ್ಥೆ ಅಧ್ಯಕ್ಷ ಸುಧಾಕರರೆಡ್ಡಿ ಮಾಲಿ ಪಾಟೀಲ್‌ ಅನಪುರ ಪ್ರಾಸ್ತಾವಿಕವಾಗಿ ಮಾತನಾಡಿ, ಶೈಕ್ಷಣಿಕ ಹಿಂದುಳಿದ ಭಾಗದ ನಮ್ಮ ವಿದ್ಯಾರ್ಥಿಗಳಿಗೆ ನಿರಂತರ ಕಾರ್ಯಾಗಾರ ಹಮ್ಮಿಕೊಳ್ಳುವ ಮೂಲಕ ಸ್ಪರ್ಧಾ ಪರೀಕ್ಷೆಗಳನ್ನು ಎದುರಿಸುವ ಜ್ಞಾನ ಹಾಗೂ ಆತ್ಮವಿಶ್ವಾಸ ಮೂಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು.

ಕಾರ್ಯಾಗಾರದಲ್ಲಿ ಯಾದಗಿರಿ ಜಿಲ್ಲೆಯ ಹಾಗೂ ನೆರೆಯ ಕಲಬುರಗಿ ಜಿಲ್ಲೆಯ ಸೇಡಂ, ಚಿತ್ತಾಪುರ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಶಾಲೆ ಪ್ರಾಂಶುಪಾಲ ಅರವಿಂದಾಕ್ಷಣ ಸ್ವಾಗತಿಸಿದರು. ಲಕ್ಷ್ಮೀ ಪಾಟೀಲ್‌ ವಂದಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.