ಸಂಧಾನ ಸಭೆ ಯಶಸ್ವಿ : ಅನಿರ್ದಿಷ್ಟ ಧರಣಿ ಹಿಂದಕ್ಕೆ
ಅರ್ಹ ಫಲಾನುಭವಿಗಳ ವರದಿಯನ್ನು ಗುರುತಿಸಿ ನಿವೇಶನ ಮಂಜೂರು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ
Team Udayavani, Jan 21, 2021, 6:13 PM IST
ಯಾದಗಿರಿ: ಸ್ಲಂ ಘೋಷಣೆ, ಹಕ್ಕುಪತ್ರ ವಿತರಣೆ ಹಾಗೂ ನಿವೇಶನ ರಹಿತರಿಗೆ ವಸತಿ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಹಿಂಪಡೆಯಲಾಗಿದೆ. ನಗರದ ಜಿಲ್ಲಾಡಳಿತ ಭವನ ಎದುರು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆ ವತಿಯಿಂದ ಹಮ್ಮಿಕೊಂಡ ಧರಣಿಗೆ ಜಿಲ್ಲಾಡಳಿತ ಸ್ಪಂದಿಸಿದೆ. ಜಿಲ್ಲಾಧಿಕಾರಿಗಳು ಮತ್ತು ನಗರಾಭಿವೃದ್ಧಿ ಯೋಜನಾ ನಿರ್ದೇಶಕರ ಕಚೇರಿ ಅಧಿಕಾರಿಗಳು ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹಾಗೂ ಸ್ಥಳೀಯ ಮುಖಂಡರೊಂದಿಗೆ ಮಂಗಳವಾರ ಸಂಜೆ ಸಂಧಾನ ಸಭೆ ನಡೆಸಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಸರ್ಕಾರಿ ಜಾಗ ಲಭ್ಯವಿಲ್ಲದ ಕಾರಣ ಖಾಸಗಿ ಜಮೀನು ಸರ್ವೇ ನಂ. 29/3, 29/7, 29/8, 30/3, 30/6 ಮತ್ತು 31/3ರಲ್ಲಿ ಒಟ್ಟು 18 ಎಕರೆ 28 ಗುಂಟೆ ಜಮೀನು (ಯಾದಗಿರಿ ನಗರದಿಂದ 2.5 ಕಿ.ಮೀ. ಅಂತರದಲ್ಲಿ) ನಗರ ಸಭೆ ಆಯುಕ್ತರು ಮತ್ತು ತಹಶೀಲ್ದಾರ್ ನಿವೇಶನ ರಹಿತರಿಗೆ ಖಾಸಗಿ ಜಮೀನನ್ನು ಖರೀದಿಸಲು ಪ್ರಸ್ತಾವನೆಯನ್ನು ಅರ್ಹ ಫಲಾನುಭವಿಗಳ ವರದಿಯನ್ನು ಗುರುತಿಸಿ ನಿವೇಶನ ಮಂಜೂರು ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸ್ಲಂ ಘೋಷಣೆ ಹಾಗೂ ಹಕ್ಕು ಪತ್ರಕ್ಕೆ ಸಂಬಂಧಪಟ್ಟಂತೆ ಜ.29ರಂದು ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಯಾದಗಿರಿ ನಗರದ ಕೊಳಚೆ ಪ್ರದೇಶಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳು ಕುರಿತು ಚರ್ಚಿಸಲು ಸಭೆ ಕರೆಯುವುದಾಗಿ ಲಿಖಿತ ರೂಪದಲ್ಲಿ ಯೋಜನಾ ನಿರ್ದೇಶಕರು ಭರವಸೆ ನೀಡಿದ್ದರಿಂದ ಧರಣಿ ಹಿಂಪಡೆಯಲಾಗಿದೆ. ಈ ವೇಳೆ ಅಧ್ಯಕ್ಷ ಹಣಮಂತ ಶಹಾಪುರಕರ್, ಸಂಘಟನಾ ಸಂಚಾಲಕಿ ರೇಣುಕಾ ಸರಡಗಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ