ಯಾದಗಿರಿಯಲ್ಲಿ ಭಣ ಭಣ
Team Udayavani, Jul 13, 2020, 2:19 PM IST
ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್ ಮಹಾಮಾರಿ ನಿತ್ಯ ಅಟ್ಟಹಾಸ ಮೆರೆಯುತ್ತಿರುವುದರಿಂದ ಜಿಲ್ಲೆಯಲ್ಲಿ ರವಿವಾರ ವಾತಾವರಣ ಭಣ ಭಣವಾಗಿತ್ತು.
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ ಡೌನ್ ಆದೇಶದಿಂದಾಗಿ ಬೆಳಗ್ಗೆ ಹಾಲು, ತರಕಾರಿ ಮಾತ್ರ ದೊರೆಯಿತು. ಉಳಿದೆಲ್ಲ ಅಂಗಡಿ ಮುಂಗಟ್ಟು ಮುಚ್ಚಲಾಗಿತ್ತು. ಜಿಲ್ಲೆಯಲ್ಲಿ ಹೆಚ್ಚಾಗಿ ಮಹಾರಾಷ್ಟ್ರದಿಂದ ಹಿಂತಿರುಗಿರುವ ಜನರಲ್ಲಿಯೇ ಕೋವಿಡ್ ಸೋಂಕು ದೃಢವಾಗುತ್ತಿತ್ತು. ಇದೀಗ ಮೂರನೇ ಹಂತಕ್ಕೆ ತಲುಪಿದೆ. ಸಮುದಾಯಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಜಿಲ್ಲೆಯ ಜನರಲ್ಲಿ ತೀವ್ರ ಆತಂಕ ಮನೆ ಮಾಡಿದೆ.
ಹೀಗಾಗಿ ಜನರು ಮನೆಯಿಂದ ಹೊರ ಬರುವುದಕ್ಕೆ ಹೆದರುವ ವಾತಾವರಣ ನಿರ್ಮಾಣವಾಗಿದೆ. ಸಾರಿಗೆ ಸಂಚಾರವೂ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮುಖ್ಯ ರಸ್ತೆಗಳೆಲ್ಲ ಸ್ತಬ್ಧವಾಗಿ ಗೋಚರಿಸಿದವು. ಇನ್ನೂ ಖಾಸಗಿ ವಾಹನಗಳ ಸಂಚಾರ ಮತ್ತು ಆಟೋ ಸಂಚಾರವೂ ಬಂದ್ ಆಗಿತ್ತು. ತುರ್ತು ಸೇವೆಗಳಿಗೆ ಮಾತ್ರ ಅವಕಾಶವಿತ್ತು.
ಕೋವಿಡ್ ಆತಂಕದಿಂದ ತತ್ತರಿಸಿರುವ ಜನರು ಒಂದೊಪ್ಪತ್ತು ಉಪವಾಸ ಇದ್ದರೂ ಪರ್ವಾಗಿಲ್ಲ ಹೊರಹೋಗುವುದು ಬೇಡ ಎನ್ನುವ ಮನಸ್ಥಿತಿಗೆ ಹೊಂದಾಣಿಕೆಯಾಗುತ್ತಿರುವುದು ಸ್ಪಷ್ಟವಾಗಿ ಕಂಡುಬಂತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ