ವಿಜ್ಞಾನದಿಂದ ಮೂಢನಂಬಿಕೆ ದೂರ
Team Udayavani, Oct 12, 2020, 4:47 PM IST
ಯಾದಗಿರಿ: ವಿಜ್ಞಾನದಿಂದ ಮೂಢನಂಬಿಕೆ, ಕಂದಾಚಾರ ದೂರವಾಗಲಿದೆ. ಡಿಜಿಟಲ್ ಯುಗಕ್ಕೆ ಕಾಲಿಡುತ್ತಿರುವ ಸನ್ನಿವೇಶದಲ್ಲಿ ಭಾನಾಮತಿಯಂತಹ ಪ್ರಕರಣಗಳು ಜೀವಂತವಾಗಿರುವುದು ವಿಷಾದನೀಯ ಸಂಗತಿ ಎಂದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಗಿರೀಶ ಕಡ್ಲೇವಾಡ ಹೇಳಿದರು.
ಯಾದಗಿರಿ ನಗರದ ಹೊರವಲಯದಲ್ಲಿರುವ ಎಪಿಎಫ್ದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಅಜೀಂ ಪ್ರೇಮಜಿಫೌಂಡೇಶನ್ ಇವರ ಸಹಯೋಗದಲ್ಲಿ ಕಲಬುರಗಿ ವಿಭಾಗದ ಬಾಲ ವಿಜ್ಞಾನೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ನಾಲ್ಕು ದಶಕಗಳಿಂದ ಬಾಲ ವಿಜ್ಞಾನ ಪತ್ರಿಕೆಯ ಕೊಡುಗೆ ಗುರುತರವಾಗಿದೆ. ವೈಜ್ಞಾನಿಕ ಚಿಂತನೆಗಳನ್ನು ಕನ್ನಡ ಭಾಷೆಯ ಮೂಲಕ ಸಾಮಾನ್ಯ ಜನರಲ್ಲಿ ಅರಿವು ಮೂಡಿಸುವ ಕೆಲಸವನ್ನು ಪತ್ರಿಕೆ ಮಾಡುತ್ತಿದೆ. ಇದನ್ನು ಡಿಜಿಟಲೀಕರಣ ಮಾಡಲಾಗುತ್ತಿದ್ದು, ವೆಬ್ಸೈಟ್ ನಲ್ಲಿ ಹಳೆಯ ಪತ್ರಿಕೆಗಳನ್ನು ಪಡೆದುಕೊಳ್ಳಬಹುದು ಎಂದರು.
ಕಾರ್ಯಕಾರಿ ಸಮಿತಿ ಸದಸ್ಯ ಮಹಾರುದ್ರಪ್ಪ ಅಣದೂರು ಅಧ್ಯಕ್ಷತೆ ವಹಿಸಿದ್ದರು. ಡಾ. ಕುಂಟೆಪ್ಪ ಗೌರಿಪುರ, ಪ್ರಕಾಶ ಲಕ್ಕಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮನಗೌಡ ಪಾಟೀಲ ಕ್ಯಾತನಾಳ, ಎಪಿಎಪ್ ಸಂಸ್ಥೆ ಸಂಯೋಜಕಿ ಅಕ್ಕಮಹಾದೇವಿ, ಬಾಲವಿಜ್ಞಾನೋತ್ಸವ ಸಂಯೋಜಕ ಸೂರ್ಯಪ್ರಕಾಶ ಘನಾತೆ,ರಾಜಶೇಖರ ಪಾಟೀಲ, ಶ್ರೀಶೈಲ ಎನ್. ಪೂಜಾರಿ,ಅಶೋಕ ಕೆಂಭಾವಿ, ಶರಣಗೌಡ, ಮುಖ್ಯಗುರು ಲಿಂಗಾರೆಡ್ಡಿ ನಾಯಕ ಇತರರಿದ್ದರು. ಪ್ರಾಂಶುಪಾಲ ಕರಬಸಯ್ಯ ದಂಡಿಗಿಮಠ, ರಾಮಕೃಷ್ಣ ಕಟ್ಕಾವಲಿ ಮತ್ತು ಸಾಯಪ್ಪ ಚಂಡ್ರಿಕಿ ವಿವಿಧ ಗೋಷ್ಠಿಗಳನ್ನು ನಿರೂಪಿಸಿದರು.
ಕನ್ನಡದಲ್ಲಿ ವಿಜ್ಞಾನ ಸಂವಹನ ಕುರಿತು ಚಿಟಗುಪ್ಪ ಜ್ಞಾನಾಮೃತ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಶೈಲಜಾ ಜಿ.ಹುಡಗೆ ಉಪನ್ಯಾಸ ನೀಡಿದರು. ಇದಕ್ಕೂ ಮುಂಚೆ ಬಾಲ ವಿಜ್ಞಾನ ಪತ್ರಿಕೆಯ ಲೇಖಕರಾದ ಅಮರೇಗೌಡ ಲಿಂಗಸುಗೂರ, ಸಂತೋಷಕುಮಾರ ಎಸ್.ಪಿ. ಆಳಂದ, ಶೈಲಜಾ ಗುಂಡಪ್ಪ ಬೀದರ ಅವರನ್ನು ಸನ್ಮಾನಿಸಿ ಅಭಿನಂದನಾ ಪತ್ರಗಳನ್ನು ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ