6 ಪಥ ರಸ್ತೆ ಜಿಲ್ಲೆಯ ಅಭಿವೃದ್ಧಿಗೆ ಪೂರಕ


Team Udayavani, Jan 25, 2019, 11:44 AM IST

yad-1.jpg

ಯಾದಗಿರಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗ್ರೀನ್‌ ಫೀಲ್ಡ್‌ ಭಾರತ ಮಾಲಾ ಪರಿಯೋಜನೆಯಡಿ ಜಿಲ್ಲೆಯ ಶಹಾಪುರ ಮತ್ತು ವಡಗೇರಾ ತಾಲೂಕುಗಳ ಮೂಲಕ 6 ಪಥದ ರಸ್ತೆ ಹಾಯ್ದು ಹೋಗಲಿದ್ದು, ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಹೇಳಿದರು.

ಜಿಪಂ ಸಭಾಂಗಣದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವತಿಯಿಂದ ಅಕ್ಕಲಕೋಟದಿಂದ-ಕರ್ನಾಟಕ/ ತೆಲಂಗಾಣ ಪ್ರದೇಶದವರೆಗೆ 6 ಪಥದ ರಸ್ತೆಯನ್ನು ನಿರ್ಮಿಸುವ ಕುರಿತು ಹಮ್ಮಿಕೊಂಡಿದ್ದ ಸಾರ್ವಜನಿಕ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಕ್ಕಲಕೋಟದಿಂದ ಆರಂಭವಾಗುವ ರಸ್ತೆ ಕರ್ನಾಟಕ, ತೆಲಂಗಾಣ ಗಡಿಪ್ರದೇಶದವರೆಗೆ ಇದ್ದು, ಕರ್ನೂಲ್‌ವರೆಗೆ ವಿಸ್ತರಿಸಲ್ಪಟ್ಟಿದೆ. ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಮೂಲಕ ಹಾದು ಹೋಗಲಿದೆ. 6 ಪಥದ ರಸ್ತೆ ನಿರ್ಮಾಣ ಪ್ರಸ್ತುತ ಪ್ರಾಥಮಿಕ ಹಂತದಲ್ಲಿದ್ದು, ಭೂ ಸ್ವಾಧೀನ ಪ್ರಕಿಯೆ ಸದ್ಯಕ್ಕೆ ಇರುವುದಿಲ್ಲ. ಮುಂದೆ ಭೂ ಸ್ವಾಧೀನ ಪಡಿಸಿಕೊಳ್ಳುವಾಗ ಸಂಬಂಧಪಟ್ಟ ಪ್ರತಿಯೊಬ್ಬ ರೈತರಿಗೂ ಮಾಹಿತಿ ನೀಡಲಾಗುವುದು. ರೈತರ ಸಮ್ಮುಖದಲ್ಲಿಯೇ ಸ್ವಾಧೀನಕ್ಕೊಳಪಡುವ ಭೂ ಬೆಲೆ ನಿರ್ಧರಿಸಿ, ಸೂಕ್ತ ಪರಿಹಾರ ಒದಗಿಸಲಾಗುವುದು. ಯಾವುದೇ ಕಾರಣಕ್ಕೂ ಆತಂಕಪಡಬೇಕಾಗಿಲ್ಲ ಎಂದು ಅಭಯ ನೀಡಿದರು.

ಉತ್ತಮ ರಸ್ತೆ ಸಂಪರ್ಕದಿಂದ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆ, ಉದ್ಯೋಗ ಸೃಷ್ಟಿ, ಆಸ್ತಿಗಳ ಬೆಲೆ ಹೆಚ್ಚಳವಾಗುತ್ತದೆ. ಜಿಲ್ಲೆಗೆ ಈಗಾಗಲೇ ರೈಲು ಸಂಪರ್ಕ ಇದೆ. ಅಲ್ಲದೆ, ವಾಡಿ-ಗದಗ ರೈಲು ಸಂಪರ್ಕ ಕಾರ್ಯ ನಡೆಯುತ್ತಿದೆ. ಈಗ 6 ಪಥದ ರಸ್ತೆ ನಿರ್ಮಾಣದಿಂದ ಜಿಲ್ಲೆಯ ಜನತೆಗೆ ಮತ್ತಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

ಸಹಾಯಕ ಆಯುಕ್ತ ಡಾ| ಬಿ.ಎಸ್‌. ಮಂಜುನಾಥ ಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿ 6 ಪಥದ ರಸ್ತೆ ನಿರ್ಮಾಣಕ್ಕಾಗಿ 680 ಹೆಕ್ಟೇರ್‌ ಭೂಮಿ ಸ್ವಾಧೀನಪಡಿಸಿಕೊಳ್ಳುವ ಸಾಧ್ಯತೆ ಇದೆ. ರಸ್ತೆಯ ಅಗಲ 230 ಫೀಟ್ ಇರುತ್ತದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 64 ಕಿ.ಮೀಟರ್‌ ರಸ್ತೆ: ಅಕ್ಕಲಕೋಟದಿಂದ-ಕರ್ನಾಟಕ/ ತೆಲಂಗಾಣ ಪ್ರದೇಶದವರೆಗೆ ನಿರ್ಮಿಸುತ್ತಿರುವ 6 ಪಥದ ರಸ್ತೆಯ ಉದ್ದ 203 ಕಿ.ಮೀಟರ್‌ ಇದ್ದು, ಅಂದಾಜು ವೆಚ್ಚ 7,567 ಕೋಟಿ ರೂ.ಗಳಲ್ಲಿ ನಿರ್ಮಾಣ ನಡೆಯಲಿದೆ. ಯಾದಗಿರಿ ಜಿಲ್ಲೆಯಲ್ಲಿ 64.9 ಕಿ.ಮೀಟರ್‌ ಉದ್ದದ ಅಂದಾಜು ವೆಚ್ಚ 1,735 ಕೋಟಿ ರೂಪಾಯಿ ವ್ಯಯಿಸಲಾಗುತ್ತಿದೆ. ಭೂಮಿ ಸರ್ವೇ ಇನ್ನೂ ಆಗಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಉಪ ವ್ಯವಸ್ಥಾಪಕ ಪ್ರದೀಪ್‌ ಹಿರೇಮಠ ಹಾಗೂ ಆರ್‌.ವಿ. ಅಸೋಸಿಯೇಟ್ಸ್‌ನ ಪಿ.ವಿ. ರತ್ನಕುಮಾರ ವಿವರಿಸಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್‌, ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ. ರಜಪೂತ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಸಿಒಪಿ ಪರ್ಥಾಡೊ, ಸಹಾಯಕ ಸಲಹೆಗಾರ ಶಶಿಕಾಂತ ದಂಡೋತಿ ಇದ್ದರು. ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಹಾಗೂ ರೈತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಇರುವ ಸ್ವಲ್ಪ ಜಮೀನಿನಲ್ಲಿ ಜೀವನ ನಡೆಸುತ್ತಿದ್ದೇವೆ. ರಸ್ತೆ ನಿರ್ಮಾಣಕ್ಕೆ ಭೂಮಿ ವಶಪಡಿಸಿಕೊಂಡರೆ ರೈತರು ಬೀದಿಗೆ ಬರಬೇಕಾಗುತ್ತದೆ. ಹಾಗಾಗಿ ಸೂಕ್ತ ಪರಿಹಾರದ ಜೊತೆಗೆ ಜಮೀನು ಕಳೆದುಕೊಂಡ ರೈತರ ಕುಟುಂಬಕ್ಕೆ ಸರ್ಕಾರ ಉದ್ಯೋಗ ಒದಗಿಸಿಕೊಡಲು ಮುಂದಾಗಬೇಕು. ಅಲ್ಲದೇ ಈ ಗ್ರಾಮಗಳನ್ನು ದತ್ತು ಪಡೆದು ಅಗತ್ಯ ಮೂಲ ಸೌಕರ್ಯ ಒದಗಿಸಬೇಕು. ಸಂಗನಗೌಡ ಅಣಬಿ, ರೈತ

ಜಿಲ್ಲೆಯ ಶಹಾಪುರ ಮತ್ತು ವಡಗೇರಾ ತಾಲೂಕಿನ 21 ಹಳ್ಳಿಗಳ ಮೂಲಕ ಹಾದು ಹೋಗಲಿರುವ ರಸ್ತೆ, ಶಹಾಪುರ ತಾಲೂಕಿನ ಅಣಬಿ, ಶಿರವಾಳ, ಹುರಸಗುಂಡಗಿ, ಬಿದ್ರಾಣಿ, ಇಬ್ರಾಹಿಂಪುರ, ಚಟ್ನಳ್ಳಿ, ಕರಣಗಿ, ಖಾನಾಪುರ, ಮಂಗಿನಹಳ್ಳಿ ಹಾಗೂ ವಡಗೇರಾ ತಾಲೂಕಿನ ನಾಯ್ಕಲ್‌, ಮಲಹಳ್ಳಿ, ಕುರಕುಂದಾ, ಉಳ್ಳೆಸೂಗೂರ, ವಡಗೇರಾ, ಕೋನಹಳ್ಳಿ, ಬಿಳಾØರ, ರೋಟ್ನಡಗಿ, ಕದ್ರಾಪುರ, ಬೆಂಡೆಬೆಂಬಳಿ, ಕೋಡಾಲ್‌, ಗೋನಾಳ ಮೂಲಕ ರಸ್ತೆ ಹಾದು ಹೋಗಲಿದೆ.

ಟಾಪ್ ನ್ಯೂಸ್

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.