ಸುರಪುರ:ರಸ್ತೆ ಅಗಲೀಕರಣಕ್ಕೆ ಚಾಲನೆ

ಅಗಲೀಕರಣದಿಂದ 46 ಬಡ ಕುಟುಂಬಗಳು ಮನೆ ಕಳೆದುಕೊಂಡು ಬೀದಿಗೆ ಬಿದ್ದಿವೆ.

Team Udayavani, Feb 4, 2021, 6:41 PM IST

ಸುರಪುರ:ರಸ್ತೆ ಅಗಲೀಕರಣಕ್ಕೆ ಚಾಲನೆ

ಸುರಪುರ: ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ರಂಗಂಪೇಟೆ- ತಿಮ್ಮಾಪುರ ನಗರದ ರಸ್ತೆ ಅಗಲೀಕರಣಕ್ಕೆ ಬುಧವಾರ ಚಾಲನೆ ನೀಡಲಾಯಿತು. ರಸ್ತೆ ಅಗಲೀಕರಣ ಕುರಿತು ನಗರಸಭೆಯಿಂದ ಕೆಲ ದಿನಗಳಿಂದ ಸಾಕಷ್ಟು ಪ್ರಚಾರ ಮಾಡಲಾಗಿತ್ತು. ನಿವಾಸಿಗಳು ಕಳೆದ ಎರಡ್ಮೂರು ದಿನಗಳಿಂದ ಸ್ವಯಂಪ್ರೇರಿತರಾಗಿ ಮನೆ, ಅಂಗಡಿ, ಕಟ್ಟಡ ತೆರವುಗೊಳಿಸುವ ಕಾರ್ಯದಲ್ಲಿ ಮುಂದಾಗಿದ್ದರು. ನಗರಸಭೆಯವರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆಗಿಳಿದು
ಅಗಲೀಕರಣಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದರು. ಇದೀಗ ಜೆಸಿಬಿ ಯಂತ್ರಗಳು ಕೆಲಸ ಆರಂಭಿಸಿವೆ.

ರಸ್ತೆ ತುಂಬ ಕಲ್ಲು-ಮಣ್ಣು ರಾಶಿ: ರಂಗಂಪೇಟೆ ಆಟೋ ನಿಲ್ದಾಣದಿಂದ ಪ್ರಾರಂಭವಾದ ರಸ್ತೆ ವಿಸ್ತರಣೆ ಮಧ್ಯಾಹ್ನದವರೆಗೆ ಮುಖ್ಯ ರಸ್ತೆ ಅರ್ಧ ದಾಟಿತ್ತು. ಜೆಸಿಬಿ ಹೊಡೆತಕ್ಕೆ ಕಟ್ಟಡ, ಮನೆ ನೆಲಕ್ಕುರುಳಿದವು. ರಸ್ತೆ ತುಂಬ ಕಲ್ಲು, ಮಣ್ಣುಗಳ ರಾಶಿಯಿಂದ ರಂಗಂಪೇಟೆ ಸಂಪೂರ್ಣ ಧೂಳು ಮಯವಾಗಿತ್ತು. ವಿದ್ಯುತ್‌ ತಂತಿ, ಕೇಬಲ್‌ ವೈರ್‌ಗಳು ಕತ್ತರಿಸಿ ಬಿದ್ದವು. ವಿದ್ಯುತ್‌ ಸರಬರಾಜು ಸ್ಥಗಿತಗೊಳಿಸಲಾಗಿತ್ತು.

ಈ ವೇಳೆ ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲನಾಯಕ ಜೇವರ್ಗಿ, ನಗರಸಭೆ ಪೌರಾಯುಕ್ತ ಕೆ. ಜೀವನಕುಮಾರ, ನಗರಸಭೆ ಸದಸ್ಯ ಮೊಹ್ಮದ್‌ಗೌಸ್‌, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಗೇರೆ, ಯೋಜನಾಧಿಕಾರಿ ಓಂಕಾರ ಪೂಜಾರಿ, ಎಇ ಶಿವರಾಜ, ಜೆಇ ಮಹೇಶ ಇತರರು ಇದ್ದರು.

ವಿದ್ಯುತ್‌ ವ್ಯತ್ಯಯ: ರಂಗಂಪೇಟೆ-ತಿಮ್ಮಾಪುರದಲ್ಲಿ ರಸ್ತೆ ಅಗಲೀಕರಣ ನಡೆದಿದ್ದು ವಿದ್ಯುತ್‌ ಕಂಬ, ಟ್ರಾನ್ಸ್‌ ಫಾರ್ಮರ್‌ ತೆರವು, ಲೈನ್‌ ಕಟ್‌ ಸೇರಿ ಇತರೆ ಕೆಲಸಗಳು ಪ್ರಗತಿಯಲ್ಲಿರುತ್ತವೆ. ಆದ್ದರಿಂದ ನಾಲ್ಕಾರು ದಿನಗಳವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಹಕಸುವಂತೆ ಎಂದು ಜೆಸ್ಕಾಂ ಎಇಇ ಸೆಕ್ಸೆನ್‌ ಆಫೀಸರ್‌ ಈರಣ್ಣ ಅಳಿಚೆಂಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭಿವೃದ್ಧಿಗೆ 5.52 ಕೋಟಿ ಅನುದಾನ ರಸ್ತೆ ಅಗಲೀಕರಣ ಯೋಜನೆಗೆ 2014ರಲ್ಲಿಯೇ ಅನುಮೋದನೆ ದೊರಕಿದೆ. ಆದರೆ ಕಾರಣಾಂತರಗಳಿಂದ ನನೆಗುದಿಗೆ ಬಿದ್ದಿತ್ತು. 2.5 ಕಿಮೀ ರಸ್ತೆ ಅಗಲೀಕರಣಕ್ಕೆ ಒಳಪಟ್ಟಿದ್ದು 5.52 ಕೋಟಿ ಅನುದಾನ ಮಂಜೂರಾಗಿದೆ. 36 ಅಡಿ ಸಿಸಿ ರಸ್ತೆ ನಿರ್ಮಾಣದ ಜತೆಯಲ್ಲಿ ರಸ್ತೆಯ ಎರಡೂ ಬದಿಯಲ್ಲಿ ಚರಂಡಿ ಮತ್ತು ನೀರಿನ ಪೈಪ್‌ಲೈನ್‌ ವ್ಯವಸ್ಥೆ ಮಾಡಲಾಗುವುದು. ಅಗಲೀಕರಣದಿಂದ 46 ಬಡ ಕುಟುಂಬಗಳು ಮನೆ ಕಳೆದುಕೊಂಡು ಬೀದಿಗೆ ಬಿದ್ದಿವೆ. ತಾಲೂಕು ಆಡಳಿತದಿಂದ ಅವರಿಗೆ ತಾತ್ಕಾಲಿಕ ಶೆಡ್‌ ವ್ಯವಸ್ಥೆ ಮಾಡಲು ಶಾಸಕರು ಸೂಚಿಸಿದ್ದಾರೆ. ಈ ಕುರಿತು ಶೀಘ್ರ ಅಧ್ಯಕ್ಷ ಮತ್ತು ಸದಸ್ಯರ ಸಭೆ ಕರೆದು ನಿರ್ಣಯಿಸಲಾಗುವುದು ಎಂದು ನಗರಸಭೆ ಪೌರಾಯಕ್ತ ಜೀವನಕುಮಾರ ಕಟ್ಟಿಮನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.