“ಸುರಪುರ ನಾಯಕರು’ ಪಠ್ಯ ಮುಂದುವರಿಕೆ
Team Udayavani, Jun 10, 2022, 5:11 PM IST
ಸುರಪುರ: 7ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕದಲ್ಲಿದ್ದ “ಸುರಪುರ ನಾಯಕರು’ ಶೀರ್ಷಿಕೆಯ ಪಠ್ಯವನ್ನು ಕೈಬಿಡುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಿಕ್ಷಣ ಸಚಿವ ಬಿ.ಸಿ. ನಾಗೇಶ ಭರವಸೆ ನೀಡಿದ್ದಾರೆ ಎಂದು ಶಾಸಕ ರಾಜೂಗೌಡ ತಿಳಿಸಿದರು.
ಬೆಂಗಳೂರಿನಿಂದ ಗುರು ವಾರ ದೂರವಾಣಿಯಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಸುರಪುರ ದೊರೆಗಳ ಕೊಡುಗೆ ಅನನ್ಯವಾಗಿದೆ. ಎರಡು ಶತಮಾನಗಳವರೆಗೆ ಜನಪರ ಆಡಳಿತ ನಡೆಸಿ ಜನಮಾನಸದಲ್ಲಿದ್ದಾರೆ. ಇವರ ಪಠ್ಯವನ್ನು ತೆಗೆಯುವುದರಿಂದ ಈ ಭಾಗದ ಜನ ಬೇಸರ ಪಟ್ಟುಕೊಳ್ಳುತ್ತಾರೆ ಎಂದು ಪತ್ರ ಬರೆದು ಮನವಿ ಮಾಡಿದ್ದೆ. ನನ್ನ ಮನವಿಗೆ ಸ್ಪಂದಿಸಿದ ಸಿಎಂ ಮತ್ತು ಶಿಕ್ಷಣ ಸಚಿವರು ಇಂದು ನನ್ನನ್ನು ತಮ್ಮ ಮನೆಗಳಿಗೆ ಗುರುವಾರ ಪ್ರತ್ಯೇಕವಾಗಿ ಕರೆದು ಈ ಕುರಿತು ಚರ್ಚೆ ನಡೆಸಿದರು ಎಂದರು.
ಪಠ್ಯವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ಒಂದು ವೇಳೆ ಕೈಬಿಟ್ಟಿದ್ದರೆ ಮರು ಮುದ್ರಣ ಮಾಡಿ ಪುಸ್ತಕಗಳನ್ನು ಪೂರೈಕೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಸಚಿವ ಪ್ರಭು ಚವ್ಹಾಣ, ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ