ಬಾಲ್ಯ ವಿವಾಹಕ್ಕೆ ಅಧಿಕಾರಿಗಳ ಬ್ರೆಕ್‌

ಗ್ರಾಮಸ್ಥರಲ್ಲಿ ನೂತನ ಸಪ್ತಪದಿ ಯೋಜನೆ ಅರಿವು ಮೂಡಿಸಿದ ಅಧಿಕಾರಿಗಳ ತಂಡ

Team Udayavani, Mar 16, 2020, 4:53 PM IST

16-March-25

ಸುರಪುರ: ತಾಲೂಕಿನ ದೇವಾಪುರದಲ್ಲಿ ರವಿವಾರ ನಡೆಯುತ್ತಿದ್ದ ಬಾಲ್ಯ ವಿವಾಹ ಅಧಿಕಾರಿಗಳ ಸಮಯ ಪ್ರಜ್ಞೆ ಮತು ಮಿಂಚಿನ ಕಾರ್ಯಾಚರಣೆಯಿಂದ ತಡೆ ಬಿದ್ದಿದೆ.

ದೇವಾಪುರದ ಕುಟುಂಬವೊಂದರಲ್ಲಿ ಬಾಲ್ಯ ವಿವಾಹಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿತ್ತು. ರವಿವಾರ ಮದುವೆ ನಡೆಯಲಿದೆ ಎಂಬ ಖಚಿತ ಮಾಹಿತಿ ಪಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ದಂಡಾಧಿಕಾರಿ, ಪೊಲೀಸರು ಮತ್ತು ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮದುವೆ ಸಿದ್ಧತೆಯಲ್ಲಿದ್ದ ಪಾಲಕ ಪೋಷಕರೊಂದಿಗೆ ಅಧಿಕಾರಿಗಳು ಚರ್ಚೆ ನಡೆಸಿ ವಯಸ್ಸು ಮತ್ತು ಇತರೆ ದಾಖಲೆ ಪರಿಶೀಲಿಸಿದರು. ಈ ವೇಳೆ ಆಕೆಗೆ 15 ವರ್ಷ ಎಂದು ಖಚಿತವಾಯಿತು. ಈ ಹಿನ್ನೆಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಪ್ರಕಾರ ಮದುವೆ ಮಾಡುವುದು ತಪ್ಪು. ಇದೊಂದು ಅಪರಾಧಿಕ ಕೃತ್ಯವಾಗುತ್ತದೆ ಕಾರಣ ಮದುವೆ ಕೈ ಬಿಡುವಂತೆ ತಿಳಿ ಹೇಳಿದರು.

ಈ ವೇಳೆ ಮಾತನಾಡಿದ ಗ್ರೇಡ್‌-2 ತಹಶೀಲ್ದಾರ್‌ ಸೋಪಿಯಾಸುಲ್ತಾನ್‌ ವಯ ಪೂರ್ವದಲ್ಲಿಯೇ ಮದುವೆ ಮಾಡುವುದು ಅಪರಾಧ. ಗಂಡಿಗೆ 21 ವರ್ಷ, ಹೆಣ್ಣಿಗೆ 18 ವರ್ಷ ಆಗುವವರೆಗೆ ಮದುವೆ ಮಾಡುವಂತಿಲ್ಲ. ಒಂದು ವೇಳೆ ಕಾನೂನು ಉಲ್ಲಂಘಿಸಿ ಮದುವೆ ಮಾಡಿದಲ್ಲಿ ದಂಡ ಮತ್ತು ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ. ಕಾರಣ ಅನಗತ್ಯವಾಗಿ ಸಮಸ್ಯೆ ಮೈಮೇಲೆ ಎಳೆದುಕೊಳ್ಳುವುದು ಬೇಡ. ಇದರೊಂದಿಗೆ ಏನೊಂದು ತಿಳಿಯದ ಮತ್ತು ಪ್ರಾಪಂಚಿಕ ಜ್ಞಾನ ವಿಲ್ಲದೆ ಇರುವ ಬಾಲಕಿಗೆ ಮದುವೆ ಮಾಡುವುದರಿಂದ ಆಕೆ ಬದುಕು ಕೂಡ ಹಾಳು ಮಾಡಿದಂತ್ತಾಗುತ್ತದೆ. ಕಾರಣ ಮದುವೆ ಕೈಬಿಡುವಂತೆ ಅರಿವು ಮೂಡಿಸುವ ಪ್ರಯತ್ನ ಮಾಡಿದರು.

ಸರಕಾರ ಹೊಸದಾಗಿ ಸಪ್ತಪದಿ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಲ್ಲಿ ಮದುವೆ ಮಾಡಿಕೊಳ್ಳುವುದರಿಂದ ಕುಟುಂಬಕ್ಕೆ ಸರಕಾರ ಧನ ಸಹಾಯ ನೀಡುತ್ತದೆ. ನೀವು ಕಾರ್ಮಿಕರಾಗಿದ್ದಲ್ಲಿ ಕಾರ್ಮಿಕ ಇಲಾಖೆಯಿಂದ ಕೂಡ ಧನ ಸಹಾಯ ಸಿಗುತ್ತದೆ. ಕಾರಣ ಸದ್ಯಕ್ಕೆ ಮದುವೆ ವಿಚಾರ ಕೈ ಬಿಡಿ. ಮಗಳಿಗೆ 18 ವರ್ಷ ಪೂರ್ಣಗೊಂಡ ನಂತರ ಸರಕಾರದ ಯಾವುದಾದರೂ ಯೋಜನೆಯಲ್ಲಿ ಮದುವೆ ಮಾಡಿ. ಇದರಿಂದ ಕುಟುಂಬಕ್ಕೆ ಆರ್ಥಿಕ ನೆರವು ಸಿಗಲಿದೆ ಎಂದು ತಿಳಿಹೇಳಿದರು.

ಕೊನೆಗೂ ಅಧಿಕಾರಿಗಳ ಸಲಹೆ ಮತ್ತು ಸೂಚನೆ ಮತ್ತು ಮಾರ್ಗದರ್ಶನಕ್ಕೆ ಸಮ್ಮತಿ ಸೂಚಿಸದ ಕುಟುಂಬಸ್ಥರು ಮದುವೆ ಕೈಬಿಡುವ ನಿರ್ಧಾರ ಮಾಡಿದರು. ಮಗಳಿಗೆ 18 ವರ್ಷ ಪೂರ್ಣಗೊಳ್ಳುವವರೆಗೆ ಮದುವೆ ಮಾಡುವುದಿಲ್ಲ ಎಂದು ಲಿಖೀತ ಹೇಳಿಕೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆಯ ದಶರಥ, ಕಾನೂನು ಸಲಹೆಗಾರ ರಾಜೇಂದ್ರ ಯಾದವ, ಕಂದಾಯ ನಿರೀಕ್ಷಕ ವಿಠ್ಠಲ , ಗಾಲೆ ನಟರಾಜ, ಪಿಎಸ್‌ಐ ಶ್ಯಾಮಸುಂದರ ನಾಯಕ, ಪಿಡಿಒ ಮತ್ತು ಅಂಗನಾಡಿ ಕಾರ್ಯಕರ್ತೆ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri; ಅಪಾಯ ಮಟ್ಟಕ್ಕೆ ತಲುಪಿದ ಕೃಷ್ಣಾ ಮತ್ತು ಭೀಮಾ ನದಿ ನೀರು; ಹೈಅಲರ್ಟ್ ಘೋಷಣೆ

Yadagiri: Former MLA Dr Veerabasavant Reddy Mudnal passed away

Yadagiri: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ನಿಧನ

1-gtt

Yadgir: ಕಲುಷಿತ ನೀರು‌ ಸೇವಿಸಿ 14 ಜನರು ಅಸ್ವಸ್ಥ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Yadagiri: ಜಿ.ಪಂ ಯೋಜನಾಧಿಕಾರಿ‌ ಮನೆ‌‌ ಮೇಲೆ ಲೋಕಾ ದಾಳಿ

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

Saidapur: ಕುಟುಂಬಿಕ ಕಲಹದಿಂದ ಪತ್ನಿ, ಅತ್ತೆ, ಮಾವನನ್ನೇ ಹತ್ಯೆ ಮಾಡಿದ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.