ಸುರಪುರ ಸಾರಿಗೆ ಘಟಕ ಸೀಲ್ಡೌನ್
Team Udayavani, Jul 5, 2020, 10:06 AM IST
ಸುರಪುರ: ಇಲ್ಲಿಯ ಬಸ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 16 ಜನ ಸಾರಿಗೆ ಸಿಬ್ಬಂದಿಗೆ ಕೊವೀಡ್ ಸೋಂಕು ದೃಢಪಟ್ಟಿದ್ದು, ಶನಿವಾರ ಸಂಜೆಯಿಂದ ಬಸ್ ಘಟಕ ಶೀಲ್ಡೌನ್ ಮಾಡಲಾಗಿದೆ ಎಂದು ತಹಶೀಲ್ದಾರ್ ನಿಂಗಣ್ಣ ಬಿರಾದಾರ ತಿಳಿಸಿದ್ದಾರೆ.
ಶುಕ್ರವಾರವೇ ಶೀಲ್ಡೌನ್ ಮಾಡಬೇಕಿತ್ತು. ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿದಿರುವುದರಿಂದ ಶನಿವಾರ ಶೀಲ್ಡೌನ್ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಘಟಕದಿಂದ ಯಾವುದೇ ಬಸ್ ಕಾರ್ಯಾಚರಿಸುವುದಿಲ್ಲ. ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಮೊದಲು ಘಟಕದಲ್ಲಿ 8 ಜನರಿಗೆ ಕೋವಿಡ್ ವಕ್ಕರಿಸಿತ್ತು. ಇವರ ಪ್ರಾಥಮಿಕ ಸಂಪರ್ಕದಿಂದ ಮತ್ತೆ 8 ಜನರಿಗೆ ಸೋಂಕು ತಗುಲಿದ್ದು, ಇದುವರೆಗೆ ಒಟ್ಟು 16 ಜನರಿಗೆ ಸೋಂಕು ದೃಢಪಟ್ಟಿದೆ. ಎಲ್ಲ ಸೋಂಕಿತರನ್ನು ನಿಷ್ಠಿ ಕಾಲೇಜಿನ ಐಸೋಲೇಷನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾರಿಗೆ ಘಟಕದ ಉಳಿದ 40ರಿಂದ 50 ಜನ ಸಿಬ್ಬಂದಿ ವರದಿ ನಗೆಟಿವ್ ಬಂದಿದ್ದು, ಅವರೆಲ್ಲರಿಗೂ ಹೋಂ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಆರ್.ವಿ. ನಾಯಕ ತಿಳಿಸಿದ್ದಾರೆ.
ತಹಶೀಲ್ದಾರ್ ಆದೇಶದ ಹಿನ್ನೆಲೆಯಲ್ಲಿ ಘಟಕಕ್ಕೆ ಬೀಗ ಹಾಕಲಾಗಿದೆ. ಘಟಕದ ಒಳಹೋಗುವ ದ್ವಾರದ ರಸ್ತೆ ಅಗೆಯಲಾಗಿದ್ದು ಘಟಕದ ಸುತ್ತಲೂ ಮುಳ್ಳು ಬೇಲಿ ಹಾಕಲಾಗಿದೆ ಎಂದು ಪೌರಾಯುಕ್ತ ಜೀವನಕುಮಾರ ತಿಳಿಸಿದ್ದಾರೆ. ಕೇವಲ ಸುರಪುರ ಘಟಕ ಒಂದೇ ಶೀಲ್ ಡೌನ್ ಮಾಡಿದರೆ ಸಾಲದು, ಇಡೀ ಸಾರಿಗೆ ಸಂಚಾರವನ್ನೇ ನಿಷೇಧಿಸಿ ಇನ್ನಷ್ಟು ದಿನ ಲಾಕ್ ಡೌನ್ ಮಾಡಿದರೆ ಒಳ್ಳೆಯದು. ಈ ಕುರಿತು ರಾಜ್ಯ ಸರಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು ಎಂದು ದಲಿತ ಸಂಘಟನೆ ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ