ಕಲಬುರಗಿ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಸೇನಾನಿ ಹೆಸರಿಡಿ


Team Udayavani, Jan 20, 2020, 4:42 PM IST

20-January-20

ಸುರಪುರ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸುರಪುರ ಸಂಸ್ಥಾನದ ಸ್ವಾತಂತ್ರ್ಯ  ಸೇನಾನಿ ರಾಜಾ ನಾಲ್ವಡಿ ವೆಂಕಟಪ್ಪ ನಾಯಕರ ಹೆಸರಿಡಬೇಕು ಎಂದು ಸುಪ್ರೀಂಕೋರ್ಟ್‌ ಖ್ಯಾತ ವಕೀಲ ರಾಜಾ ವೆಂಕಟಪ್ಪ ನಾಯಕ ಒತ್ತಾಯಿಸಿದರು.

ನಗರದ ಅರಮನೆ ಕನ್ನಡಿ ಮಹಲ್‌ನಲ್ಲಿ ಸಂಸ್ಥಾನದ ವತಿಯಿಂದ ರವಿವಾರ ಹಮ್ಮಿ ಕೊಂಡಿದ್ದ ಸುರಪುರ ಸಂಸ್ಥಾನ ಹಾಗೂ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದಕ್ಷಿಣ ಭಾರತದ ನೇತೃತ್ವ ವಹಿಸಿದ್ದರು.

ಪ್ರೌಢಾವಸ್ಥೆಯಲ್ಲಿಯೇ ಬ್ರಿಟಿಷರ ವಿರುದ್ಧ ಹೋರಾಡಿ ವೀರಸ್ವರ್ಗ ಸೇರಿದ್ದಾರೆ. ಅವರ ಹೆಸರು ಅಜರಾಮರವಾಗಿ ಉಳಿಯಬೇಕಾದರೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಸೇನಾನಿ ಹೆಸರಿಡುವುದು ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದರು.

ದೇಶದ ಅನೇಕ ಅರಸು ಮನೆತನಗಳಲ್ಲಿ ಸುರಪುರ ಸಂಸ್ಥಾನ ಒಂದಾಗಿದೆ. ಕಿತ್ತೂರು, ಚಿತ್ರದುರ್ಗ ಸೇರಿದಂತೆ ಇತರೆ ಸಂಸ್ಥಾನಕ್ಕೆ ನೀಡಿದಷ್ಟು ಮಹತ್ವ ಸುರಪುರ ಸಂಸ್ಥಾನಕ್ಕೆ ನೀಡದಿರುವುದು ಖೇದನೀಯ. ಇದು ಇತಿಹಾಸಕಾರರ ಪ್ರಮಾದವೋ ಅಥವಾ ನಮ್ಮನ್ನಾಳುವ ಸರಕಾರಗಳ ಇಚ್ಛಾಶಕ್ತಿ ಕೊರತೆಯೋ ಗೊತ್ತಿಲ್ಲ. ಒಟ್ಟಾರೆಯಾಗಿ ಸುರಪುರ ಸಂಸ್ಥಾನ ಕಡೆಗಣಿಸಿರುವುದು ಈ ಭಾಗದ ಜನರ ಭಾವನೆಗೆ ಧಕ್ಕೆಯಾಗಿದೆ.

ಅದರಲ್ಲಿ ವಿಶೇಷವಾಗಿ ಇಲ್ಲಿನ ಅರಸರ ಶೌರ್ಯ, ಸಾಹಸಗಳ ಕುರಿತು ಪಠ್ಯದಲ್ಲಿ ಸೇರಿಸದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು. ಹಂಪಿ, ಕಿತ್ತೂರು ಸೇರಿದಂತೆ ಇತರೆ ಉತ್ಸವ ನಡೆಸುವ ಸರಕಾರ ಸುರಪುರ ಉತ್ಸವ ಆಚರಿಸಲು ಆಸಕ್ತಿ ತೋರದಿರುವುದು ಖಂಡನೀಯ.

ಮುಂಬರುವ ದಿನಗಳಲ್ಲಿ ಮೂರು ದಿನಗಳ ವರೆಗೆ ವೇಣುಗೋಪಾಲಸ್ವಾಮಿ ಉತ್ಸವ ನಡೆಸುವ ಮೂಲಕ ಸುರಪುರ ಉತ್ಸವ ಆಚರಿಸಬೇಕು. ಕ್ಯಾಪ್ಟನ್‌ ನ್ಯೂಬೇರಿ ಹತ್ಯೆ ಅಂಗವಾಗಿ ಸುರಪುರ ವಿಜಯೋತ್ಸವ ದಿನ ಆಚರಿಸಬೇಕು ಎಂದು ಒತ್ತಾಯಿಸಿದರು. ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ಮುಖ್ಯಸ್ಥ, ಖ್ಯಾತ ವಕೀಲ ಭಾಸ್ಕರರಾವ ಮುಡಬೂಳ, ಹಂಪಿ ವಿಶ್ವವಿದ್ಯಾಲಯದ ಉಪನ್ಯಾಸಕ ಅಮರೇಶ ಯಥಗಲ್‌ ಮಾತನಾಡಿ ರಾಜಾ ರಾಘವ ಪಾಮನಾಯಕ ಅವರು ಸೇರಿ ಕೊನೆ ಅರಸರ ವರೆಗೂ ಕಲೆ ಸಾಹಿತ್ಯ ಸಂಗೀತಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರಜಾ ಕಲ್ಯಾಣಕ್ಕೆ ಒತ್ತು ಜತೆಗೆ ಉತ್ತಮ ಆಡಳಿತ ನೀಡಿರುವ ಕುರಿತು ಇತಿಹಾಸದಿಂದ ತಿಳಿದು ಬರುತ್ತದೆ. ಶ್ರೇಷ್ಠ ಶ್ರೀಮಂತಿಕೆ ಹೊಂದಿರುವ ಸುರಪುರ ಸಂಸ್ಥಾನದ ಇತಿಹಾಸ ಜನರ ಕಣ್ಣಿಂದ ಮರೆಯಾಗದಂತೆ ಉಳಿಸಲು ಕಲಬುರಗಿ ನೂತನ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಸೇನಾನಿ ಹೆಸರಿಡಬೇಕು ಎಂದು ಒತ್ತಾಯಿಸಿದರು.

ನಂತರ ನಡೆದ ಸಭೆಯಲ್ಲಿ ಕಲಬುರಗಿ ವಿಮಾನ ನಿಲ್ದಾಣಕ್ಕೆ ರಾಜಾ
ನಾಲ್ವಡಿ ವೆಂಕಟಪ್ಪ ನಾಯಕ ಅವರ ಹೆಸರಿಡಲು ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ಮನವಿ ಸಲ್ಲಿಸಲು ನಿರ್ಣಯ ತೆಗೆದುಕೊಳ್ಳಲಾಯಿತು. ಸರಕಾರದ ಮೇಲೆ ಒತ್ತಡ ತರಲು ಈ ಭಾಗದ ಎಲ್ಲ ಶಾಸಕರು, ಸಂಸದರು, ಸಚಿವರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು.

ಇದಕ್ಕೂ ಮೊದಲು ಅರಸು ಮನೆತನದ ರಾಜಾ ಕೃಷ್ಣಪ್ಪ ನಾಯಕ
ಅವರು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅರಸು ಮನೆತನ ಕುರಿತು ಸಂಶೋಧನೆ ಮಾಡಿದ 9 ಜನರಿಗೆ ಸಂಸ್ಥಾನದ ಗೌರವ ಪ್ರಶಸ್ತಿ, ಕಲೆ ಸಾಹಿತ್ಯ ಸಂಗೀತ, ಶೈಕ್ಷಣಿಕ, ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 49 ಜನ ಸಾಧಕರಿಗೆ ರಾಜಾ ನಾಲ್ವಡಿ ವೆಂಕಟಪ್ಪ ನಾಯಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಸುರಪುರ ಅರಸು ಮನೆತದ ಇತಿಹಾಸ ಕುರಿತು ಏರ್ಪಡಿಸಿದ್ದ
ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪಾರಿತೋಷಕ ವಿತರಿಸಲಾಯಿತು. ರಾಜಾ ವೆಂಕಟಪ್ಪ ನಾಯಕ,
ರಾಜಾ ಸೀತಾರಾಮ ನಾಯಕ, ಎಸ್‌. ಗೋಪಾಲ ನಾಯಕ, ಸಂಸ್ಥಾನದ ಪ್ರಧಾನಮಂತ್ರಿ ಮನೆತನದ ಶರಣಬಸಪ್ಪ ನಿಷ್ಠಿ ಇದ್ದರು.ಸುರಪುರ ಗರುಡಾದ್ರಿ ಕಲೆ ಅಂತಾರಾಷ್ಟ್ರೀಯ ಕಲಾವಿದ ವಿಜಯ ಹಾಗರಗುಂಡಗಿ, ಮೈಸೂರು ವಿವಿ ವಿಶ್ರಾಂತ ಕುಲಪತಿ ಹಣಮಣ್ಣ ನಾಯಕ ದೊರೆ, ಬಾಂಬೆ ವಿವಿಯ ದೇವಿಕಾ ಗುಡಿ, ಕಲಬುರಗಿ ವಿವಿ ಸಂಗೀತ ವಿಭಾಗದ ಮುಖ್ಯಸ್ಥೆ ಸುನಂದಾ ಸಾಲವಡಗಿ, ನಿವೃತ್ತ ಎಸ್‌ಪಿ ಚಂದ್ರಕಾಂತ ಭಂಡಾರೆ, ಸಾಹಿತಿ ಎ. ಕೃಷ್ಣ, ಇತಿಹಾಸಕಾರರಾದ ಡಿ.ಎನ್‌. ಅಕ್ಕಿ, ಬಿ.ಪಿ. ಹೂಗಾರ. ಬಿ.ಆರ್‌. ಸುರಪುರ, ಎಸ್‌. ರೇವಣಸಿದ್ದಯ್ಯ ಸ್ಥಾವರಮಠ, ಬಸವರಾಜ ರೂಮಾಲ, ಶಾಂತಪ್ಪ ಬೂದಿಹಾಳ, ಜನಾರ್ಧನ ಪಾಣಿಭಾತೆ, ಡಾ| ಆರ್‌.ವಿ. ನಾಯಕ, ಡಾ| ಪ್ರಶಾಂತ ಕೆಂಭಾವಿ ಇದ್ದರು.

ರಾಜಾ ಲಕ್ಷ್ಮೀ ನಾರಾಯಣ ನಾಯಕ ಸ್ವಾಗತಿಸಿದರು. ಉಪನ್ಯಾಸಕ
ಡಾ| ಉಪೇಂದ್ರ ನಾಯಕ ಸುಬೇದಾರ ನಿರೂಪಿಸಿದರು. ರಾಜಾ ಪಿಡ್ಡನಾಯಕ ವಂದಿಸಿದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.