ಬೇಡಿಕೆ ಈಡೇರಿಕೆಗೆ ಆಗ್ರಹ

ಟಿ. ಬೊಮ್ನಳ್ಳಿ ಗ್ರಾಮದ ರೈತರಿಗೆ ಏತ ನೀರಾವರಿ ಕಲ್ಪಿಸಲು ಒತ್ತಾಯ

Team Udayavani, Jan 11, 2020, 3:33 PM IST

11-January-10

ಸುರಪುರ: ತಾಲೂಕಿನ ಟಿ. ಬೊಮ್ನಳ್ಳಿ ಗ್ರಾಮಕ್ಕೆ ಏತ ನೀರಾವರಿ ಕಲ್ಪಿಸುವುದು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶೋಷಿತ ಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರಿಗೆ ಮನವಿ ಸಲ್ಲಿಸಿದರು.

ನಗರದ ತಹಶೀಲ್ದಾರ್‌ ಕಚೇರಿಗೆ ಆಗಮಿಸಿದ ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಅವರನ್ನು ಭೇಟಿ ಮಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ, ಗ್ರಾಮದ ಕೆರೆ ಸುಮಾರು 50 ಎಕರೆ ವಿಸ್ತಾರ ಇದೆ. ವರ್ಷ ಇಡೀ ನೀರಿನಿಂದ ತಂಬಿರುತ್ತದೆ. ಇತ್ತೀಚೆಗೆ ಕರೆ ಹೂಳು ಮತ್ತು ಗಿಡಗಂಟೆ ಬೆಳೆದು ವ್ಯರ್ಥವಾಗಿ ಹಾಳಾಗುತ್ತಿದೆ. ಇದನ್ನು ಸ್ವಚ್ಛಗೊಳಿಸಿ ಏತ ನೀರಾವರಿ ಕಲ್ಪಿಸುವುದಲ್ಲಿ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಗ್ರಾಮದ ಪಕ್ಕದಲ್ಲಿಯೇ ಕಾಲುವೆ ಹಾದು ಹೋಗಿದೆ. ಆದರೆ ಕೆಲ ಜಮೀನುಗಳಿಗೆ ನೀರಾವರಿ ಇಲ್ಲ. ಕೆರೆಯನ್ನು ಏತ ನೀರಾವರಿಗೆ ಒಳಪಡಿಸದಲ್ಲಿ ನೀರಾವರಿ ವಂಚಿತ ರೈತರಿಗೆ ಹೆಚ್ಚಿನ ನೆರವಾಗಲಿದೆ. ಕಾರಣ ಸ್ಥಳ ಪರಿಶೀಲಸಿ ಏತ ನೀರಾವರಿ ಯೋಜನೆಗೆ ಒಳಪಡಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.

ನಗರದಲ್ಲಿ ಕುಡಿಯುವ ನೀರಿಗೆ ಬಹಳಷ್ಟು ಸಮಸ್ಯೆ ಇದೆ. ಕೆಲ ವಾರ್ಡ್ಗಳಿಗೆ ನೀರು ಸರಬರಾಜು ಆಗುವುದೇ ಇಲ್ಲ. ನೀರು ಶುದ್ಧೀಕರಣ ಮಾಡುತ್ತಿಲ್ಲ. ಶುದ್ಧೀಕರಣ ಯಂತ್ರಗಳು ಕೆಟ್ಟು ಹೋಗಿ ಸುಮಾರು ವರ್ಷ ಕಳೆದಿವೆ. ನಗರಸಭೆಯವರು ಕಲುಷಿತ ನೀರು ಸರಬರಾಜು ಮಾಡುತ್ತಿದ್ದಾರೆ. ಇದರಿಂದ ರೋಗ ಆವರಿಸುವ ಸಾಧ್ಯತೆ ಇದೆ. ಕಾರಣ ಕೂಡಲೇ ಈ ಸಮಸ್ಯೆ ನಿವಾರಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಮನೆ ಹಂಚಿಕೆ ಕಾರ್ಯ ಸರಿಯಾಗಿ ಆಗಿಲ್ಲ. ಪಿಡಿಒಗಳು ತಮಗೆ ಇಷ್ಟ ಬಂದವರಿಗೆ ಮನೆ ಹಂಚಿಕೆ ಮಾಡಿ ಅರ್ಹ ಬಡವರಿಗೆ ವಂಚನೆ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅಂಗನವಾಡಿ ಕೇಂದ್ರಗಳಲ್ಲಿ ನಿಯಮಾನುಸಾರ ಪೌಷ್ಟಿಕ ಆಹಾರ
ವಿತರಿಸುತ್ತಿಲ್ಲ. ಬ್ಯಾಂಕ್‌ಗಳು ರೈತರಿಗೆ ಸೌಲಭ್ಯ ನೀಡುತ್ತಿಲ್ಲ, ಡಿಸಿಸಿ ಮತ್ತು ವಿಎಸ್‌ಎಸ್‌ ಸೊಸೈಯಿಟಿಗಳಲ್ಲಿ ಸಾಲ ವಿತರಣೆಯಲ್ಲಿ ತಾರತಮ್ಯ ನಡೆಯುತ್ತಿದೆ. ಈ ಎಲ್ಲಾ ಬೇಡಿಕೆಗಳ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಗೋಪಾಲ ಬಾಗಲಕೋಟೆ, ಬಸವರಾಜಗೌಡ ಯಂಕೋಬ ನಾಯಕ, ಭೀಮರಾಯ ಸಾಹು, ಪರಮಣ್ಣಗೌಡ ಪಾಟೀಲ, ಸಿದ್ದಪ್ಪ ಪೂಜಾರಿ, ಸಣ್ಣ ಬೀರಪ್ಪ, ಭೀಮರಾಯ ತಿಪನಟಗಿ, ದೇವಿಂದ್ರಪ್ಪ ನಾಯಕ, ಕೃಷ್ಣ ದೊರೆ, ದೇವಿಂದ್ರ ರತ್ತಾಳ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.