ಮಕ್ಕಳ ಕಲಿಕೆಗೆ ಶೈಕ್ಷಣಿಕ ಮೇಳಗಳು ಸಹಕಾರಿ: ಓಲೇಕಾರ


Team Udayavani, Jan 11, 2020, 5:16 PM IST

11-January-19

ಸುರಪುರ: ಮಕ್ಕಳ ಕಲಿಕೆ ಅಭಿವೃದ್ಧಿ ಪಡಿಸುವಲ್ಲಿ ಶೈಕ್ಷಣಿಕ ಮೇಳಗಳು ಸಹಕಾರಿಯಾಗಲಿವೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ನಾಗರತ್ನಾ ಓಲೇಕಾರ ಹೇಳಿದರು.

ತಾಲೂಕಿನ ದೇವಾಪುರ ಹರಿಜನ ವಾರ್ಡ್‌ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಅಜೀಂ ಪ್ರೇಮಜಿ ಫೌಂಡೇಶನ್‌ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಭಾಷಾ ಮತ್ತು ಗಣಿತ ಮೇಳದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಳಗಳಲ್ಲಿ ಮಕ್ಕಳ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದಂತೆ ಅನೇಕ ಪರಿಕಲ್ಪನೆಗಳನ್ನು ಉತ್ತಮವಾಗಿ ಅಭಿವ್ಯಕ್ತಿಸಲಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಎಪಿಎಫ್‌ನ ತಾಲೂಕು ಸಂಯೋಜಕ ಸುರೇಶಗೌಡ ಮಾತನಾಡಿ, ಈ ರೀತಿಯ ಶೈಕ್ಷಣಿಕ ಮೇಳಗಳನ್ನು ಗ್ರಾಮೀಣ ಭಾಗಗಳಲ್ಲಿ ಹಮ್ಮಿಕೊಳ್ಳುವುದರಿಂದ ಈ ಭಾಗದ ಮಕ್ಕಳಲ್ಲಿ ಉತ್ತಮವಾದ ಕಲಿಕೆ ಉಂಟು ಮಾಡುತ್ತದೆ. ಮಕ್ಕಳು ನಿರಂತರವಾಗಿ ಭಾಷೆ ಮತ್ತು ಗಣಿತಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳನ್ನು ಅನುಭವಾತ್ಮಕವಾಗಿ ಕಲಿತಿರುವುದಕ್ಕೆ ಈ ಮೇಳ ಸಾಕ್ಷಿಯಾಗಿದೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಾಪಂ ಸದಸ್ಯ ನಂದನಗೌಡ ಪಾಟೀಲ, ಮೇಳಗಳಲ್ಲಿ ಮಕ್ಕಳ ಚಟುವಟಿಕೆ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮೇಳಗಳಲ್ಲಿ ಸನ್ನಿವೇಶ ನೋಡಿ ವಿವರಿಸುವುದು, ಚಿತ್ರ ನೋಡಿ ಕಥೆ ರಚಿಸುವುದು, ಸ್ವಂತ ವಾಕ್ಯ ಬಳಸಿ, ಗಾದೆ ಮಾತುಗಳು, ಪದ ರಚನೆ, ಕಥೆಗೆ ಶೀರ್ಷಿಕೆ ಬರೆ, ಗಣಿತದ ಮೂಲಕ್ರಿಯೆಗಳು, ನನ್ನ ಸಮಯ, ಆಕೃತಿಗಳು, ಹಾವು ಏಣಿ ಆಟ ಹೀಗೆ ಅನೇಕ ವಿಷಯಗಳ ಕುರಿತು ಮಕ್ಕಳು ವಿವರಿಸಿದರು. ಮುಷ್ಟೂರ ದೊಡ್ಡಿ ಸರ್ಕಾರಿ ಪ್ರಾಥಮಿಕ ಶಾಲೆ, ಹಂದ್ರಾಳ ಸರ್ಕಾರಿ ಪ್ರಾಥಮಿಕ ಶಾಲೆ, ಗೋನಾಲ ಎಸ್‌ಡಿ ಸರ್ಕಾರಿ ಪ್ರಾಥಮಿಕ ಶಾಲೆ ಮಕ್ಕಳು ಭಾಗವಹಿಸಿದ್ದರು.

ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ ಎಂ. ಜಾಂಗಿನ, ಗ್ರಾಪಂ ಸದಸ್ಯ ಅಯ್ಯಪ್ಪ ಗಂಜಾಳ, ರೇಣುಕಾ, ಪ್ರಮುಖರಾದ ಚನ್ನಪ್ಪಗೌಡ, ರಮೇಶ ಕವಲಿ, ಚನ್ನಬಸಪ್ಪ ತಳವಾರ, ಮಹಾದೇವ, ಹಸನಪ್ಪ ತಳವಾರ, ಬಿಆರ್‌ಪಿ ಕಾಂತೇಶ, ಸಿಆರ್‌ಪಿ ಯಂಕಣ್ಣ ಹುಲಕಲ್‌, ಮುಖ್ಯ ಶಿಕ್ಷಕ ಕಾಸೀಂ ಬಾಗವಾನ, ಶಿಕ್ಷಕರಾದ ಭೀಮಣ್ಣ ಹುದ್ಧಾರ, ರಾಜಶೇಖರ ಭಾಸಗಿ, ಮಲ್ಲಣ್ಣ ಸಜ್ಜನ, ರಾಜಣ್ಣ, ರಾಜಶೇಖರ ಚಿಲ್ಲಾಳ, ಶಿವಶರಣ, ರಾಜಶೇಖರ ಕಲ್ಲೂರಮಠ, ರೇಖಾ,
ಆರತಿ, ಪವಿತ್ರ, ಎಪಿಎಫ್‌ನ ಪರಮಣ್ಣ ತೆಳಗೇರಿ, ಅಜೀಮ್‌, ಶಿವುಕುಮಾರ, ಅನ್ವರ ಜಮಾದಾರ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.