ಶಿವಶರಣರಲ್ಲಿ ಸಮಾನತೆ ದರ್ಶನ


Team Udayavani, Feb 2, 2020, 4:16 PM IST

2-Febraury-25

ಸುರಪುರ: ಸವಿತಾ ಮಹರ್ಷಿ ಮತ್ತು ಶರಣ ಮಡಿವಾಳ ಮಾಚಿದೇವ ಸೇರಿದಂತೆ ಎಲ್ಲ ಶಿವಶರಣರಲ್ಲಿ ನಾವು ಸಮಾನತೆ ಕಾಣುತ್ತೇವೆ ಎಂದು ಉಪನ್ಯಾಸಕ ಲಕ್ಷ್ಮೀಕಾಂತ ದೇವರಗೋನಾಲ ಹೇಳಿದರು.

ನಗರದ ಮಾಲ್ಮೀಕಿ ಭವನದಲ್ಲಿ ಶನಿವಾರ ತಾಲೂಕು ಆಡಳಿತ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಹಾಗೂ ಸವಿತಾ ಮಹರ್ಷಿ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು. ಮಡಿವಾಳ ಮಾಚಿದೇವ ಬಟ್ಟೆ ತೊಳೆಯುವ ಕಾಯಕ ಮಾಡಿದರೆ, ಸವಿತಾ ಮಹರ್ಷಿ ಕ್ಷೌರಿಕ ವೃತ್ತಿ ಕೈಗೊಂಡಿದ್ದರು. ಮೇಲ್ನೋಟಕ್ಕೆ ಇದು ಕನಿಷ್ಟ ಎನಿಸಬಹುದು, ಆದರೆ ಶರಣರ ಪಾಲಿಗೆ ಇದು ಅತ್ಯಂತ ಮಹತ್ವ ಪೂರ್ಣ, ಸರ್ವ ಶ್ರೇಷ್ಠ ಕಾಯಕವಾಗಿತ್ತು ಎಂದು ವಿವರಿಸಿದರು.

ಮಡಿವಾಳ ಮಾಚಿದೇವ ಬಟ್ಟೆ ಮಾತ್ರ ತೊಳೆಯಲಿಲ್ಲ. ಸವಿತಾ ಮಹರ್ಷಿ ಕೇವಲ ಕ್ಷೌರಿಕ ವೃತ್ತಿ ಮಾಡಲಿಲ್ಲ. ಕಾಯಕದೊಂದಿಗೆ ಸಮಾಜಕ್ಕೆ ಅಂಟಿದ್ದ ಕಂದಾಚಾರ, ಮೌಡ್ಯತೆ ಎಂಬ ಅನಿಷ್ಟಗಳನ್ನು ತೊಳೆದರು. ತಮ್ಮ ವಚನಗಳ ಮೂಲಕ ಮೇಲು-ಕೀಳು, ಮುಟ್ಟು, ಮೈಲಿಗೆ, ಅಸಮಾನತೆ ತೊಡೆದು ಹಾಕಲು ಪ್ರಯತ್ನಿಸಿದ್ದರು ಎಂದು ಹೇಳಿದರು.

ವಕೀಲ ನಿಂಗಣ್ಣ ಚಿಂಚೋಡಿ ಮಾತನಾಡಿ, ವೃತ್ತಿ ಯಾವುದಾದರೇನು, ಸಮಾಜದಲ್ಲಿ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಿ ಬದುಕುವುದು ಮುಖ್ಯ. ಆದ್ದರಿಂದ ಸಮಾಜ ಬಾಂಧವರು ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಬೇಕು ಎಂದರು.

ತಹಸೀಲ್ದಾರ್‌ ನಿಂಗಣ್ಣ ಬಿರಾದಾರ ಮಾತನಾಡಿ, ಕಾಯಕದೊಂದಿಗೆ ಆರೋಗ್ಯ ವೃದ್ಧಿ ಮಾಡಿಕೊಳ್ಳುವ ಸೂತ್ರವನ್ನು ಶರಣರು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು. ಡಿವೈಎಸ್‌ಪಿ ವೆಂಕಟೇಶ ಉಗಿಬಂಡಿ, ತಾಪಂ ಇಒ ಅಮರೇಶ, ರಮೇಶ ಗುತ್ತೇದಾರ, ಬಾಲರಾಜ ಚಿನ್ನಾಕರ್‌, ಸ್ವಾಮಿ ಬೈಲಪ್ಪ ಮುತ್ಯಾ ಗೊಡ್ರ್ಯಾಳ, ಸಮಾಜದ ತಾಲೂಕು ಅಧ್ಯಕ್ಷ ವೀರಗಂಟೆಪ್ಪ ಹೆಗ್ಗನದೊಡ್ಡಿ ವೇದಿಕೆಯಲ್ಲಿದ್ದರು. ಕಂದಾಯ ನಿರೀಕ್ಷಕ ಗುರುಬಸಪ್ಪ ಸ್ವಾಗತಿಸಿದರು. ಗುರು ರಾಠೊಡ ನಿರೂಸಿದರು. ಕೊಂಡಲ ನಾಯಕ ವಂದಿಸಿದರು.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.