ಶಾಂತಿ-ಸೌಹಾರ್ದತೆಯಿಂದ ಹಬ್ಬ ಆಚರಿಸಿ

ಬಲವಂತದಿಂದ ಬಣ್ಣ ಹಚ್ಚುವುದು ಸರಿಯಲ್ಲ ವಾಹನ ಅಡ್ಡಗಟ್ಟಿ ಹಣ ವಸೂಲಿ ಮಾಡಿದರೆ ಕ್ರಮ

Team Udayavani, Mar 8, 2020, 4:32 PM IST

8-March-26

ಸುರಪುರ: ನಗರದಲ್ಲಿ ಹೋಳಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು ಎಂದು ಸಿಪಿಐ ಸಾಹೇಬಗೌಡ ಪಾಟೀಲ ತಿಳಿಸಿದರು.

ನಗರದ ಪೊಲೀಸ್‌ ಠಾಣೆಯಲ್ಲಿ ಶನಿವಾರ ನಡೆದ ಶಾಂತಿಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ಧರ್ಮದ ಹಬ್ಬದ ಹಿಂದೆ ಐತಿಹಾಸಿಕ ಹಿನ್ನೆಲೆ ಇರುತ್ತದೆ. ಅದನ್ನು ಅರ್ಥಪೂರ್ಣವಾಗಿ ಆಚರಿಸಿದಾಗ ಹಬ್ಬ ಹರಿದಿನಗಳಿಗೆ ಅರ್ಥ ಬರುತ್ತದೆ. ಹೀಗಾಗಿ ಹೋಳಿ ಹಬ್ಬವನ್ನು ಎಲ್ಲರೂ ಸೇರಿ ಶಾಂತಿಯಿಂದ ಆಚರಿಸಬೇಕು ಎಂದು ಹೇಳಿದರು.

ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವುದರಿಂದ ಮತ್ತು ಕೊರೊನಾ ವೈರಸ್‌ ಆತಂಕ ಇರುವುದರಿಂದ ಯುವಕರು ಎಚ್ಚರಿಕೆಯಿಂದ ಬಣ್ಣ ಆಡಬೇಕು. ಒತ್ತಾಯ, ಬಲವಂತದಿಂದ ಬಣ್ಣ ಹಾಕುವುದು ಸರಿಯಲ್ಲ, ಬಣ್ಣ ಎರಚುವ ನೆಪದಲ್ಲಿ ವಾಹನಗಳನ್ನು ಅಡ್ಡಗಟ್ಟಿ ಹಣ ವಸೂಲಿ ಮಾಡುವುದು ಅಪರಾಧ ಎಂದರು.

ವೆಂಕೋಬ ದೊರೆ, ಉಸ್ತಾದ್‌ ವಜಾಹತ್‌ ಹುಸೇನ್‌, ವೆಂಕಟೇಶ ಬೇಟೆಗಾರ, ವೆಂಕಟೇಶ ನಾಯಕ ಬೈರಿಮರಡಿ, ಶಿವಲಿಂಗ ಚಲುವಾದಿ, ರಾಹುಲ್‌ ಹುಲಿಮನಿ, ಎಂ. ಪಟೇಲ್‌ ಇತರರು ಮಾತನಾಡಿ, ಸುರಪುರದಲ್ಲಿ ಪ್ರತಿಯೊಂದು ಹಬ್ಬಗಳು ಭಾವೈಕ್ಯತೆಯಿಂದ ನಡೆಯುತ್ತಿವೆ. ಇಲ್ಲಿಯವರೆಗೂ ಯಾವುದೇ ಅಹಿತಕರ ಘಟನೆಗಳು ನಡೆದ ಉದಾಹರಣೆ ಇಲ್ಲ. ಅದಕ್ಕೆ ಯಾರೊಬ್ಬರು ಸಹ ಅವಕಾಶ ನೀಡುವುದಿಲ್ಲ. ಪರಸ್ಪರ ಶಾಂತಿ-ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸುತ್ತವೆ. ಸಣ್ಣ ಪುಟ್ಟ ಘಟನೆಗಳಿದ್ದಲ್ಲಿ ಆಯಾ ಧರ್ಮಗಳ ಮುಖಂಡರು ತಿಳಿ ಹೇಳಿ ಸಮಸ್ಯೆಯಾಗದಂತೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು.

ದಾನಪ್ಪ ಕಡಿಮನಿ, ನಿಂಗಣ್ಣ ಗೋನಾಳ, ರಾಮಣ್ಣ ಶೆಳ್ಳಗಿ, ಬಸವಲಿಂಗಪ್ಪ ಐನಾಪುರ, ದೇವಿಂದ್ರಪ್ಪ ಬಳಿಚಕ್ರ, ಎಂ. ಪಾಶಾ, ವೆಂಕಟೇಶ ಅಮ್ಮಾಪುರ, ಮಲ್ಲೇಶಿ ಪೂಜಾರಿ ಸೇರಿದಂತೆ ಇನ್ನಿತರರಿದ್ದರು. ಪಿಎಸ್‌ಐಗಳಾದ ಚೇತನ ಕುಮಾರ, ಚಂದ್ರಶೇಖರ ನಾರಾಯಣಪುರ ವೇದಿಕೆಯಲ್ಲಿದ್ದರು. ಮುಖ್ಯ ಪೇದೆ ಮಂಜುನಾಥ ಸ್ವಾಮಿ ಸ್ವಾಗತಿಸಿದರು. ಮಹಾಂತೇಶ ಬಿರಾದಾರ ನಿರೂಪಿಸಿದರು. ಶರಣುಗೌಡ ವಂದಿಸಿದರು.

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.