ದೇವಿಕೆರಾ ಹೊಲದಲ್ಲಿದ್ದ 180 ಅಕ್ಕಿ ಚೀಲ ವಶ
Team Udayavani, Apr 18, 2020, 11:56 AM IST
ಸುರಪುರ: ತಹಶೀಲ್ದಾರ್ ನಿಂಗಣ್ಣ ಬಿರಾದಾರ ನೇತೃತ್ವ ತಂಡ ಗೋದಾಮಿನ ಮೇಲೆ ದಾಳಿ ನಡೆಸಿತು.
ಸುರಪುರ: ತಾಲೂಕಿನ ದೇವಿಕೇರಾ ಗ್ರಾಮದ ಹತ್ತಿರದ ಹೊಲವೊಂದರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿ ಚೀಲಗಳನ್ನು ತಹಶೀಲ್ದಾರ್ ನೇತೃತ್ವದ ತಂಡ ಗುರುವಾರ ರಾತ್ರಿ ದಾಳಿ ನಡೆಸಿ ವಶಕ್ಕೆ ಪಡೆದುಕೊಂಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ತಹಶೀಲ್ದಾರ್ ಬಿರಾದಾರ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 35 ಕೆಜಿ ತೂಕದ 180 ಅಕ್ಕಿ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.
ಫಜಲ್ ಮತ್ತು ಮುಬಾರಕ್ ಎಂಬುವವರಿಗೆ ಗೋದಾಮು ಸೇರಿದ್ದಾಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಯಾರೊಬ್ಬ ಮಾಲೀಕನು ಭೇಟಿ ನೀಡಿಲ್ಲ ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ಕಿ ಪಡಿತರ ಅಥವಾ ಶಿಶು ಅಭಿವೃದ್ಧಿ ಇಲಾಖೆಗೆ ವಿತರಿಸಿದ್ದೇ ಎಂಬುದನ್ನು ತಿಳಿಯಲು ಆಹಾರ ಪೂರೈಕೆ ಇಲಾಖೆಗೆ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಶಿಶು ಅಭಿವೃದ್ಧಿ ಇಲಾಖೆ ಯೋಜನಾಧಿಕಾರಿ ಲಾಲ್ಸಾಬ್ ಪೀರಾಪುರ ಅವರನ್ನು ಸ್ಥಳಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ.
ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಬಿರಾದಾರ ತಿಳಿಸಿದ್ದಾರೆ. ದಾಳಿಯಲ್ಲಿ ಪಿಎಸ್ಐ ಚಂದ್ರಶೇಖರ ನಾರಾಯಣಪುರ, ಕಂದಾಯ ನಿರೀಕ್ಷಕ ಗುರುಬಸಪ್ಪ ಪಾಟೀಲ, ಆಹಾರ ನಿರೀಕ್ಷಕ ಅಪ್ಪಯ್ಯ ಹಿರೇಮಠ, ಗ್ರಾಮ ಲೆಕ್ಕಿಗ ಪ್ರದೀಪಕುಮಾರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ