ನೀರಿನ ಸಮಸ್ಯೆಯಾಗದಂತೆ ಸ್ಪಂದಿಸಿ

ಪ್ರಮುಖ ವಿಷಯದ ಬಗ್ಗೆ ಧ್ವನಿ ಎತ್ತದ ತಾಲೂಕು ಪಂಚಾಯಿತಿ ಸದಸ್ಯರು

Team Udayavani, Mar 7, 2020, 1:21 PM IST

7-March-08

ಸುರಪುರ: ಕುಡಿಯುವ ನೀರು, ನರೇಗಾ, ಮನೆಗಳ ನಿರ್ಮಾಣ, ಶೌಚಾಯಲ, ರಸ್ತೆ, ವಿದ್ಯುತ್‌ ಸಮಸ್ಯೆ ಸೇರಿದಂತೆ ಪ್ರಮುಖ ವಿಷಯಗಳ ಚರ್ಚೆಗೆ ವೇದಿಕೆಯಾಗಬೇಕಿದ್ದ ತಾಪಂ ಸಾಮಾನ್ಯ ಸಭೆ ಕಾಟಾಚಾರಕ್ಕೆ ಎನ್ನುವಂತೆ ನಡೆಯಿತು.

ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರ ಅಧ್ಯಕ್ಷೆ ಶಾರದಾ ಬೇವಿನಾಳ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಪ್ರಮುಖ ವಿಷಯಗಳ ಕುರಿತು ಚರ್ಚೆ ಕಂಡು ಬರಲಿಲ್ಲ. ಬೇಸಿಗೆ ಆರಂಭವಾಗುತ್ತಿದ್ದು, ಕೆಲ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕಾರಣ ಸೂಕ್ತ ಕ್ರಮ ಕೈಗೊಳ್ಳುವಂತೆ ಕೆಲ ಸದಸ್ಯರು ಒತ್ತಾಯಿಸಿದ್ದು ಬಿಟ್ಟರೆ ಗಂಭೀರ ಚರ್ಚೆ ನಡೆಯಲಿಲ್ಲ.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಇಇ ಹಣಮಂತಪ್ಪ ಅಂಬ್ಲಿ ಇಲಾಖೆ ಪ್ರಗತಿ ಓದಲು ಮುಂದಾಗುತ್ತಿದ್ದಂತೆ ನಿಮ್ಮ ಸುಳ್ಳು ಮಾಹಿತಿ ಕೇಳಿ ಸಾಕಾಗಿ ಹೋಗಿದೆ. ಅವಧಿ ಮುಗಿಯುತ್ತಾ ಬಂದಿದ್ದರೂ ಒಂದು ಕೆಲಸ ಕೂಡ ಸರಿಯಾಗಿ ಮಾಡಲಿಲ್ಲ. ಬರೀ ಸುಳ್ಳು ಹೇಳುವುದು ಬಿಟ್ಟರೆ ಇನ್ನೇನು ಮಾಡಲಿಲ್ಲ. ನಿಮ್ಮ ಕಾರ್ಯವೈಖರಿ ತೃಪ್ತಿದಾಯಕವಾಗಿಲ್ಲ ಎಂದು ಕಿರದಳ್ಳಿ ಸದಸ್ಯ ಕವಿತಾ ಹೆಗೇರಿ ಆಕ್ಷೇಪಿಸಿದರು.

ಇದಕ್ಕೆ ಎಲ್ಲಾ ಸದಸ್ಯರು ಪಕ್ಷಾತೀತವಾಗಿ ದೂರಿದರು. ಬೇಸಿಗೆ ಪ್ರಾರಂಭವಾಗಿದ್ದು, ಮುಂಜಾಗ್ರತ ಕ್ರಮವಾಗಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು. ಒಟ್ಟಾರೆ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಸರ್ವ ಸದಸ್ಯರು ಸೂಚಿಸಿದರು.

ಎಇಇ ಹಣಮಂತ ಅಂಬ್ಲಿ ಪ್ರತಿಕ್ರಿಯಿಸಿ, ತಾಲೂಕಿನ ತಳಳ್ಳಿ, ಯಕ್ತಾಪುರ, ನಗನೂರು, ಶ್ರೀನಿವಾಸಪುರ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಕ್ಷೇತ್ರದಲ್ಲಿ 108 ಆರ್‌ಒ ಪ್ಲಾಂಟ್‌ಗಳಿದ್ದು, 68 ಕಾರ್ಯ ನಿರ್ವಹಿಸುತ್ತಿವೆ. 34 ಬಂದಾಗಿವೆ. ಟಾಸ್ಕ್ಪೋರ್ಸ್‌ ಸಮಿತಿ ಮೂಲಕ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ತಾಲೂಕು ಆರೋಗ್ಯಾಧಿಕಾರಿ ಡಾ|
ಆರ್‌.ವಿ. ನಾಯಕ ಮಾತನಾಡಿ, ಈ ವರ್ಷ ಕುಷ್ಠ ರೋಗದ 8 ಪ್ರಕರಣಗಳು ಕಂಡು ಬಂದಿವೆ. ಶೇ. 95ರಷ್ಟು ಡಿಇಸಿ ಮಾತ್ರೆಗಳನ್ನು ವಿತರಿಸಲಾಗಿದೆ. 289 ಜನರಲ್ಲಿ ಕ್ಷಯ ರೋಗ ಪತ್ತೆಯಾಗಿದೆ. ಎಚ್‌1ಎನ್‌-1 ಪ್ರಕರಣ ಮತ್ತು 12 ಜನರಿಗೆ ಡೆಂಘೀ, 23 ಜನರಿಗೆ ಚಿಕೂನ್‌ ಗುನ್ಯಾ ಕಂಡು ಬಂದಿದ್ದು, 256 ಜನರಿಗೆ ನಾಯಿ, 72 ಜನರಿಗೆ ಹಾವು ಕಚ್ಚಿದ ಪ್ರಕರಣಗಳು ನಡೆದಿವೆ ಎಂದು ತಿಳಿಸಿದರು.

ಕೆಂಭಾವಿ, ಕೊಡೇಕಲ್‌ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ. ಕಟ್ಟಡ ಕಾಮಗಾರಿ ನಡೆದಿದ್ದು, ಶೀಘ್ರದಲ್ಲಿಯೇ ಮುಗಿಯಲಿವೆ. ನಾರಾಯಣಪುರ, ದೇವಾಪುರ, ರುಕ್ಮಾಪುರ ಗ್ರಾಮಗಳಲ್ಲಿ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ವರ್ಷ ಮಂಜೂರಾಗುವ ಸಾಧ್ಯವಿದೆ. ತಿಂಥಣಿ, ಹೆಗ್ಗಣದೊಡ್ಡಿ, ಮುದ್ನೂರು ಬಿ ಗ್ರಾಮಗಳಿಗೂ ಪ್ರಸ್ತಾವನೆ ಹೋಗಿದೆ. ಬೇಸಿಗೆ ಆರಂಭವಾಗಿದ್ದು, ವಾಂತಿ-ಭೇದಿ ಪ್ರಕರಣಗಳು ಶುರುವಾಗುತ್ತವೆ. ಮುಂಜಾಗ್ರತೆ ಕ್ರಮವಾಗಿ ಗ್ರಾಮಗಳಲ್ಲಿ ಹೊಡೆದ ಪೈಪ್‌ ಲೈನ್‌ಗಳನ್ನು ದುರಸ್ತಿ ಮಾಡಿಸಬೇಕು. ಡೆಂಘೀ, ಚಿಕೂನ್‌ ಗುನ್ಯಾ ತಡೆಗೆ ಸ್ವಚ್ಛತೆ ಕೈಗೊಳ್ಳಬೇಕು. ಫಾಗಿಂಗ್‌ ಮಾಡಿಸಬೇಕು. ಕೊರೊನಾ ವೈರಸ್‌ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಯಲ್ಲಿ ಪ್ರತೇಕ ವಾರ್ಡ್‌ ಸ್ಥಾಪಿಸಲಾಗಿದ್ದು, 10 ಬೆಡ್‌ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಬಿಇಒ ನಾಗರತ್ನಾ ಓಲೇಕಾರ, ಕೃಷಿ ಅಧಿಕಾರಿ ದಾನಪ್ಪ ಕತ್ನಳ್ಳಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸತ್ಯನಾರಾಯಣ ದರಬಾರಿ, ಸಿಡಿಪಿಒ ಲಾಲಸಾಬ್‌ ಪೀರಾಪುರ, ಬಿಸಿಎಂ ಅಧಿಕಾರಿ ಬಾಬು ಮಾಹಿತಿ ನೀಡಿದರು.

ತಾಪಂ ಅಧ್ಯಕ್ಷೆ ಶಾರದಾ ಭೀಮಣ್ಣ ಬೇವಿನಾಳ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಮಂಜುಳಾ ಸಾಹೇಬಗೌಡ, ತಾಪಂ ಇಒ ಅಮರೇಶ ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.