ಜನ ವಿರೋಧಿ ನೀತಿಯೇ ಕೇಂದ್ರ ಸರಕಾರದ ಸಾಧನೆ


Team Udayavani, Mar 29, 2019, 5:24 PM IST

yad-1

ಶಹಾಪುರ: ಕೇಂದ್ರದಲ್ಲಿ ಆಡಳಿತ ಚುಕ್ಕಾಣಿ ಹಿಡಿದ ಬಿಜೆಪಿ ಸರ್ಕಾರ ತನ್ನ ಐದು ವರ್ಷದ ಆಡಳಿತದಲ್ಲಿ ಜನ ವಿರೋಧಿ ನೀತಿಯನ್ನೇ ಸಾಧನೆಗಳನ್ನಾಗಿ ಮಾಡಿಕೊಂಡಿದೆ. ಇದರಿಂದ ದೇಶದ ಜನ ಬೇಸತ್ತಿದ್ದಾರೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರ ಸಮೀಪದ ದಿಗ್ಗಿ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ಒದಗಿಸಬೇಕಿದ್ದ ಹಣಕಾಸು ಯೋಜನಾ ಸವಲತ್ತು ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಅಲ್ಲದೆ ನೋಟ್‌ ಬ್ಯಾನ್‌ ಮಾಡುವ ಮೂಲಕ ದೇಶದ ಬಂಡವಾಳಶಾಹಿ ವರ್ಗಕ್ಕೆ ಮಣೆ ಹಾಕಿದೆ. ದೇಶದ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿಯೇ ಕಾಲಹರಣ ಮಾಡಿದ್ದಾರೆ. ಅಲ್ಲದೆ ಕೋಟ್ಯಂತರ ರೂಪಾಯಿ ರಾಷ್ಟ್ರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಅಬ್ಬರದ ಪ್ರಚಾರಕ್ಕೆ ಕಿವಿಕೊಡದೆ ರಾಯಚೂರು ಲೋಕಾಸಭೆ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ ಅವರಿಗೆ ಮತ ನೀಡುವ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ನಾನು ಪಡೆದ 30 ಸಾವಿರ ಲೀಡ್‌ನ್ನು ಲೋಕಾಸಭೆ ಚುನಾವಣೆಯಲ್ಲಿಯೂ ಕಾಯ್ದುಕೊಂಡು ಬರಬೇಕು. ಇಲ್ಲವಾದಲ್ಲಿ ನನ್ನ ಮೇಲೆ ಕಾಂಗ್ರೆಸ್‌ ನಾಯಕರು ಸಂಶಯ ಪಡುವಂತಾಗುತ್ತದೆ. ಕಾರಣ ಕಾರ್ಯಕರ್ತರು ನನ್ನ ಚುನಾವಣೆಯಲ್ಲಿ ಕೆಲಸ ಮಾಡಿದಂತೆ ಈ ಚುನಾವಣೆಯಲ್ಲಿಯೂ ಶ್ರಮವಹಿಸುವ ಮೂಲಕ ಹೆಚ್ಚಿನ ಮತಗಳ ಅಂತರದಿಂದ ಬಿ.ವಿ. ನಾಯಕ ಅವರನ್ನು ಗೆಲ್ಲಿಸಬೇಕು ಮನವಿ ಮಾಡಿದರು.

ರಾಯಚೂರು ಲೋಕಾಸಭೆ ಕಾಂಗ್ರೆಸ್‌ ಅಭ್ಯರ್ಥಿ ಬಿ.ವಿ. ನಾಯಕ ಮಾತನಾಡಿ, ಪ್ರಧಾನಿ ಮೋದಿ ಹವಾದಿಂದ ರಾಷ್ಟ್ರ ನಿರ್ಮಾಣವಾಗದು. ದೇಶದಲ್ಲಿ ಸುಭದ್ರ ಕಾಂಗ್ರೆಸ್‌ ಸರ್ಕಾರದಿಂದ ಮಾತ್ರ ಭಾರತದ ಅಭಿವೃದ್ಧಿ ಸಾಧ್ಯ. ಕಾರಣ ಯುವಕರು ಬಿಜೆಪಿ ನಾಟಕೀಯ ದೇಶಪ್ರೇಮಕ್ಕೆ ಮನಸೋಲದೆ ಕಾಳಜಿ ಪೂರ್ವಕವಾಗಿ ದೇಶದ ಭದ್ರತಗೆ ದುಡಿಯುತ್ತಿರುವ ಕಾಂಗ್ರೆಸ್‌ ಪರ ಮತನೀಡಬೇಕೆಂದು ಮನವಿ ಮಾಡಿದರು.

ಎಂಎಲ್‌ಸಿ ಶರಣಪ್ಪ ಮಟ್ಟೂರ ಮಾತನಾಡಿ, ದೇಶದಲ್ಲಿ ಅಶಾಂತಿ ತಾಂಡಾವಾಡುತ್ತಿದೆ. ಧರ್ಮ-ಧರ್ಮಗಳ ಮಧ್ಯ ಬೆಂಕಿ ಹೊತ್ತಿ ಉರಿಯುತ್ತಿದೆ. ಕಾಂಗ್ರೆಸ್‌ನ ಮೂಲ ಮಂತ್ರ ಸೌಹಾರ್ಧತೆಯಾಗಿದೆ. ಅದನ್ನು ಕಾಪಾಡಿಕೊಂಡು ಬಂದಿದೆ. ದೇಶದಲ್ಲಿ ಧರ್ಮ ಧರ್ಮಗಳ ಮಧ್ಯ ಹೊತ್ತಿ ಉರಿಯುವ ಬೆಂಕಿಯನ್ನು ನಂದಿಸಲು ಕಾಂಗ್ರೆಸ್‌ ಮತ್ತೇ ದೇಶದ ಚುಕ್ಕಾಣಿ ಹಿಡಯಬೇಕು. ಕಾಂಗ್ರೆಸ್‌ ಐತಿಹಾಸಿಕ ಚರಿತ್ರೆ ಹೊಂದಿದೆ. ಇದನ್ನು ಮನಗಂಡು ಜನರ ಮನವೊಲಿಸಬೇಕು ಎಂದು
ಕಾರ್ಯಕರ್ತರಿಗೆ ಕರೆ ನೀಡಿದರು.

ವಿಧಾನ ಪರಿಷತ್‌ ಸದಸ್ಯ ಬಸವರಾಜಪ್ಪಗೌಡ ಇಟಗಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ನಾಯಕರ ಸೇವೆ ಅನನ್ಯ. ಕಾಂಗ್ರೆಸ್‌ ದುರ್ಬಲ ರೈತರು, ಕೂಲಿ ಕಾರ್ಮಿಕ ಏಳ್ಗೆ ಬಯಸಿ ಶತಮಾನದಿಂದ ದುಡಿಯುತ್ತ ಬಂದಿದೆ. ಪ್ರತಿಶತ 80ರಷ್ಟು ಜನ ಸಾಮಾನ್ಯರಿಗಾಗಿ ಕಾಂಗ್ರೆಸ್‌ ಶ್ರಮಿಸುತ್ತಿದೆ ಎಂದು ಹೇಳಿದರು.

ಜಿಲ್ಲಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮರಿಗೌಡ ಹುಲಕಲ್‌, ಶಹಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ ಆರಬೋಳ ಮಾತನಾಡಿದರು. ಕಾಂಗ್ರೆಸ್‌ ಮುಖಂಡರಾದ ಸಿದ್ದಲಿಂಗಣ್ಣ ಆನೇಗುಂದಿ, ವೈ.ಪಿ. ಚಿಪ್ಪಾರ, ಹಣಮಂತ್ರಾಯ ದೊರಿ, ತಾಪಂ ಅಧ್ಯಕ್ಷ ಬಸವಂತ್ರಡ್ಡಿ ಸಾಹು, ಬಸನಗೌಡ ಪಾಟೀಲ, ಶಂಕ್ರಣ್ಣ ವಣಿಕ್ಯಾಳ, ಶರಣಗೌಡ ಗುಂಡಗುರ್ತಿ, ನೀಲಕಂಠ ಬಡಿಗೇರ, ಸಲಿಂ ಸಂಗ್ರಾಮ, ಗಿರೆಪ್ಪಗೌಡ ಬಾಣತಿಹಾಳ, ಮಾನಸಿಂಗ್‌ ಚವ್ಹಾಣ ಸೇರಿದಂತೆ ಯೂತ್‌ ಅಧ್ಯಕ್ಷ ಮೌನೇಶ ನಾಟೇಕಾರ, ಉಪಾಧ್ಯಕ್ಷ ಲಕ್ಷ್ಮಣ ದೇವಿ ನಗರ ಇದ್ದರು.

ಟಾಪ್ ನ್ಯೂಸ್

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.