ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ


Team Udayavani, Oct 8, 2018, 3:12 PM IST

yad-2.jpg

ಯಾದಗಿರಿ: ಕೇಂದ್ರ ಸರ್ಕಾರ ಸ್ಮಾರ್ಟ್‌ ಸಿಟಿ ಯೋಜನೆ ಜಾರಿಗೆ ತಂದು ಉಳ್ಳವರಿಗೆ ಸಕಲ ಸೌಕರ್ಯ ಕಲ್ಪಿಸಲು ಎಲ್ಲರಿಂದಲೂ ತೆರಿಗೆ ವಸೂಲಿ ಮಾಡುತ್ತಿದೆ ಎಂದು ಸ್ಲಂ ಜನಾಂದೋಲದ ರಾಜ್ಯ ಸಂಚಾಲಕ ಎ. ನರಸಿಂಹಮೂರ್ತಿ ಹೇಳಿದರು.

ನಗರದ ಎನ್‌ವಿಎಂ ಸಭಾಂಗಣದಲ್ಲಿ ಕರ್ನಾಟಕ ಸ್ಲಂ ಜನಾಂದೋಲನ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘಟನೆಯಿಂದ ನಗರಾಭಿವೃದ್ಧಿ ಯೋಜನೆಗಳು ಮತ್ತು ವಿವಿಧ ಸರ್ಕಾರದ ವಸತಿ ಯೋಜನೆಗಳು ಹಾಗೂ ಸಂಘಟನೆ ಬಲಿಷ್ಠತೆಗಾಗಿ ಕಾರ್ಯಕರ್ತರಿಗೆ ಜವಾಬ್ದಾರಿ ಕುರಿತು ಆಯೋಜಿಸಿದ್ದ ವಿಭಾಗ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಕೊಳೆಗೇರಿ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರಗಳು ಯಾವುದೇ ದೂರದೃಷ್ಟಿಯಿಂದ ಕಾರ್ಯಯೋಜನೆ ರೂಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರ ಅವರು, ಗ್ರಾಮೀಣ ಭಾಗದಲ್ಲಿ ಜನರು ಹೊಟ್ಟೆ ತುಂಬಿಸಿಕೊಳ್ಳಲು ಕೂಲಿ ಕೆಲಸ ಇಲ್ಲದೆ ಬಹಿಷ್ಕರಿಸಲ್ಪಟ್ಟರುವರು ಗ್ರಾಮದಿಂದ ನಗರಗಳತ್ತ ಮುಖ ಮಾಡುತ್ತಿದ್ದಾರೆ. ದುಡಿತಕ್ಕೆ ಸಮಾನ ಕೂಲಿಯೂ ಸಿಗದಿರುವುಕ್ಕೆ ಸ್ಲಂಗಳ ನಿರ್ಮಾಣವಾಗುತ್ತಿವೆ ಎಂದು ಖಂಡಿಸಿದರು.

ಪ್ರಸಕ್ತ ದೇಶದಲ್ಲಿ ನಗಾರಾಭಿವೃದ್ಧಿಯು ಶೇ. 26ರಷ್ಟು ವೇಗದಲ್ಲಿದೆ. 2030ರ ವೇಳೆಗೆ ದೇಶದಲ್ಲಿ ಶೇ. 50ರಷ್ಟು ವೇಗ ಪಡೆಯಲಿದೆ ಎಂದು ವಿಶ್ವ ಬ್ಯಾಂಕ್‌ ಹೇಳಿದ್ದು, ದೇಶದಲ್ಲಿ 69 ಲಕ್ಷ ಜನರಿಗೆ ಮನೆಯಿಲ್ಲ. ಬಡತನ ಹೆಚ್ಚಳದಿಂದಲೇ ಅಭಿವೃದ್ಧಿ ಕುಂಟಿತವಾಗುತ್ತಿದ್ದು, ಪ್ರಧಾನಿ ಮೋದಿ ಅವರು 2022ರ ವೇಳೆಗೆ ಸರ್ವರಿಗೆ ಸೂರು ಒದಗಿಸುವ ಮಾತು ಹೇಳುತ್ತಾರೆಂದರು.

ನಗರಾಭಿವೃದ್ಧಿ ಯೋಜನೆ ಕುಡಿಯುವ ನೀರು, ಒಳಚರಂಡಿ, ಘನತ್ಯಾಜ್ಯ ನಿರ್ವಹಣೆಯ ಯೋಜನೆಗಳು ಪಕ್ಷ, ರಾಜಕಾರಣಿ, ಅಧಿಕಾರಿಗಳ ಜೇಬು ತುಂಬಲು ಹುಲ್ಲುಗಾವಲು ಪ್ರದೇಶವಾಗಿದೆ ಎಂದರು. ನಮಗೆ ಬೇಕಿರುವ ಸೌಕರ್ಯಗಳನ್ನು ಪಡೆಯುವದಕ್ಕೆ ಹೋರಾಟ ಅಗತ್ಯವಾಗಿದ್ದು, ಕಾರ್ಯಕರ್ತರು ಹೋರಾಟ ರೂಪರೇಷೆಗಳನ್ನು ಅರಿಯಬೇಕಿದೆ ಎಂದರು.

ಯಾದಗಿರಿ ನಗರಸಭೆ ಕಚೇರಿ ವ್ಯವಸ್ಥಾಪಕ ಮಲ್ಲಿಕಾರ್ಜುನ ಎಚ್‌. ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ 52 ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಿಸಲಾಗಿದೆ. ನಗರದಲ್ಲಿ ಹಲವು ಯೋಜನೆಗಳ ಅನುಷ್ಠಾನ ಮಾಡಿರುವ ಕುರಿತು ಮಾಹಿತಿ ನೀಡಿದರು.
 
ಕೊಳೆಗೇರಿ ಮಂಡಳಿಯ ಅಧಿಕಾರಿ ಮೊ. ಯುಸೂಫ್‌ ಮಾತನಾಡಿ, ಯಾದಗಿರಿ, ಕಲಬುರಗಿ, ಬೀದರ ಹಾಗೂ ರಾಯಚೂರು ವ್ಯಾಪ್ತಿಯಲ್ಲಿ ಒಟ್ಟು 2,752ರಷ್ಟು ಮನೆಗಳು ಪ್ರಧಾನ ಮಂತ್ರಿ ಆವಾಜ ಯೋಜನೆಯಡಿ ಮಂಜೂರಾಗಿದ್ದು, ಕೆಲವೆಡೆ ಕಾಮಗಾರಿ ಪ್ರಾರಂಭವಾಗಿದ್ದರೆ, ಇನ್ನು ಕೆಲವೆಡೆ ಪ್ರಾರಂಭ ಹಂತದಲ್ಲಿದೆ ಎಂದು ವಿವರಿಸಿದರು.

ಬಿಎಸ್‌ಪಿ ಜಿಲ್ಲಾಧ್ಯಕ್ಷ ಎಂ.ಆರ್‌. ಬೇರಿ ಮತನಾಡಿದರು. ಜನಾರ್ಧನ ಅಳ್ಳಿಬಿಂಚಿ, ಹಣಮಂತ ಶಹಾಪೂರಕರ, ರೇಣುಕಾ ಸರಡಗಿ ವೇದಿಕೆಯಲ್ಲಿದ್ದರು. ಗಣೇಶ ಕಾಂಬಳೆ ನಿರೂಪಿಸಿದರು. ಕಲಬುರಗಿ ಮತ್ತು ರಾಯಚೂರಿನ ಹಲವರು ಭಾಗವಹಿಸಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.