ಕಲಬುರ್ಗಿ ಹಂತಕರ ಬಂಧನಕ್ಕೆ ಆಗ್ರಹ


Team Udayavani, Aug 31, 2017, 4:16 PM IST

yad-1.jpg

ಸುರಪುರ: ಖ್ಯಾತ ಸಂಶೋಧಕ ಡಾ| ಎಂ.ಎಂ.ಕಲಬುರ್ಗಿ ಅವರ ಕೊಲೆಗೈದ ಹಂತಕರನ್ನು
ತ್ವರಿತವಾಗಿ ಬಂಧಿಸಬೆಕು ಎಂದು ಸಾಹಿತಿ ವಿಶ್ವರಾಧ್ಯ ಸತ್ಯಂಪೇಟ ಆಗ್ರಹಿಸಿದರು.

ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ರಾಜೂ ಕುಂಬಾರ ಏರ್ಪಡಿಸಿದ್ದ ಡಾ| ಎಂ.ಎಂ.
ಕಲಬುರ್ಗಿ ಅವರ ಎರಡನೇ ಸ್ಮರಣೋತ್ಸವ ಹಾಗೂ ವಚನ ಬಾಲಕಿಯ ನಾಮಕರಣ ಸಮಾರಂಭದಲ್ಲಿ ಅವರು ಮಾತನಾಡಿದರು. ಮೌಡ್ಯತೆಯನ್ನು ವಿರೋಧಿಸಿ ಸಮಾಜಕ್ಕಂಟ್ಟಿದ
ಕೊಳಕನ್ನು ನಿವಾರಿಸಲು ಡಾ| ಕಲಬುರ್ಗಿ ಅವಿರತವಾಗಿ ಶ್ರಮಿಸಿದ್ದರು. ಶೈವ ಸಂಸ್ಕೃತಿಯನ್ನು
ಬಲವಾಗಿ ಖಂಡಿಸುತ್ತಿದ್ದರು. ಲಿಂಗಾಯತವೇ ಸ್ವತಂತ್ರ್ಯ ಧರ್ಮಕ್ಕೆ ಯೋಗ್ಯ ಎನ್ನುವದನ್ನು ಆಧಾರ
ಸಹಿತವಾಗಿ ಪ್ರತಿಪಾದಿಸಿದ್ದರು. ಅವರ ವಿಚಾರಗಳನ್ನು ಸಹಿಸಲಾಗದ ದುಷ್ಟ ಶಕ್ತಿಗಳು ಅವರನ್ನು ಕೊಲೆ ಮಾಡಿವೆ ಎಂದು ಆರೋಪಿಸಿದರು.

ವಚನ ಸಾಹಿತ್ಯದಲ್ಲಿ ಕಂಡುಬರುವ ಮಾನವೀಯ ಮೌಲ್ಯಗಳು ಬೇರಾವ ಸಾಹಿತ್ಯದಲ್ಲಿ ಕಂಡು
ಬರುವುದಿಲ್ಲ. ಸರಳ ಭಾಷೆಯಲ್ಲಿರುವ ವಚನ ಸಾಹಿತ್ಯ ಶ್ರೀ ಸಾಮಾನ್ಯ ಸಾಹಿತ್ಯವಾಗಿ ಬೆಳೆಯಿತು.
ದಿನ ಕಳೆದಂತೆ ಹೆಚ್ಚು ಜನಪ್ರೀಯತೆ ಗಳಿಸಿತು. ವಚನ ಸಾಹಿತ್ಯ ಹೊರ ಬಂದರೆ ಸನಾತನ ಪರಂಪರೆಗೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಸನತಾನವಾದಿಗಳು ವಚನ ಸಾಹಿತ್ಯವನ್ನು ಮೂಲೆ ಗುಂಪು ಮಾಡಿದರು ಎಂದು ಆರೋಪಿಸಿದ ಅವರು, ಇದಕ್ಕೆ ಕಲಬುರ್ಗಿ ಅವರು ಪುನಃಶ್ಚೇತನ ನೀಡಿ ಸನಾತನಿಗಳ ಕೆಂಗಣ್ಣಿಗೆ ಗುರಿಯಾದರು ಎಂದು ದೂರಿದರು.

ಕಲಬುರ್ಗಿ ಕೊಲೆಯಾದ ಮಾತ್ರಕ್ಕೆ ಅವರ ವಿಚಾರ ಕೊಲೆ ಆಗಿಲ್ಲ. ಹೋರಾಟವು ನಿಂತ್ತಿಲ್ಲ. ಅವರ ವಿಚಾರಗಳಿಂದ ಪ್ರಭಾವಿತರಾದ ಸಾವಿರಾರು ಯುವಕರು ಇವತ್ತು ಬೀದಿಗಿಳಿದು ಹೋರಾಟ
ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಸಾನ್ನಿಧ್ಯ ವಹಿಸಿದ್ದ ಗುರುಮಿಠಕಲ್‌ ಖಾಸಾಮಠದ
ಶಾಂತವೀರ ಮುರಘರಾಜೇಂದ್ರ ಸ್ವಾಮಿಗಳು ಮಾತನಾಡಿ. ಕಲಬುರ್ಗಿ ಅವರ ಕೊಲೆ ತನಿಖೆಯನ್ನು
ಸಮಾಜದ ತಾಳ್ಮೆಯನ್ನು ಪರೀಕ್ಷಿಸದೆ ಸರಕಾರ ನಿದ್ರೆಯಿಂದ ಎಚ್ಚೆತ್ತುಕೊಳ್ಳಬೇಕು. ತನಿಖೆಗೆ ವೇಗ
ಹೆಚ್ಚಿಸಿ ಆರೋಪಿಗಳನ್ನು ಬೇಗನೆ ಸರೆ ಹಿಡಿಯಬೇಕು ಎಂದು ಒತ್ತಾಯಿಸಿದರು.

ಚಿತಂಕ ಶಿವಣ್ಣ ಇಜೇರಿ ಪ್ರಾಸ್ತಾವಿಕ ಮಾತನಾಡಿದರು. ಮಹಾದೇವಪ್ಪ ಗಾಳೆನವರ್‌. ಮಲ್ಲಿಕಾರ್ಜುನ ಗುಂಡಾನವರ್‌ ವಚನಗಾಯನ ಮಾಡಿದರು. ರಾಜೂ ಕುಂಬಾರ ಸ್ವಾಗತಿಸಿದರು. ಶಿವುರುದ್ರುಳ್ಳಿ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.