ಶಹಾಪುರ ಕ್ವಾರಂಟೈನ್ನಲ್ಲಿಯೇ ಕೋವಿಡ್ ಮಹಾ ಸ್ಫೋಟ
Team Udayavani, May 24, 2020, 12:31 PM IST
ಸಾಂದರ್ಭಿಕ ಚಿತ್ರ ಬಳಸಲಾಗಿದೆ
ಶಹಾಪುರ: ಮಹಾರಾಷ್ಟ್ರ ರಾಜ್ಯದ ಮುಂಬೈ ನಗರಕ್ಕೆ ವಲಸೆ ಹೋಗಿದ್ದ ತಾಲೂಕಿನ ವಿವಿಧ ಗ್ರಾಮದ ನಿವಾಸಿಗಳು ಶಹಾಪುರಕ್ಕೆ ಆಗಮಿಸಿದ್ದು, ಇವರನ್ನೆಲ್ಲ ಜಿಲ್ಲಾಡಳಿತ ಕ್ವಾರಂಟೈನ್ನಲ್ಲಿಡುವ ವ್ಯವಸ್ಥೆ ಮಾಡಿತ್ತು. ಆದರೆ ಇದೀಗ ಕ್ವಾರಂಟೈನ್ ಕೇಂದ್ರದಿಂದಲೇ ಕೋವಿಡ್ ಮಹಾ ಸ್ಫೋಟಗೊಂಡಿದೆ.
ಮೇ 18ರಂದು ಕನ್ಯಾಕೋಳೂರ ಗ್ರಾಮದಲ್ಲಿ ಎರಡು ಪ್ರಕರಣ ಮತ್ತು ತಾಲೂಕಿನ ಚಂದಾಪುರ ಗ್ರಾಮದಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ಶಹಪುರ ಹೊರವಲಯದ ಕನ್ಯಾಕೋಳೂರ ಗ್ರಾಮ ರಸ್ತೆಯಲ್ಲಿರುವ ಬಿಸಿಎಂ ವಸತಿ ನಿಲಯದಲ್ಲಿ ಸ್ಥಾಪಿಸಿದ್ದ ಕ್ವಾರಂಟೈನ್ ಕೇಂದ್ರದಲ್ಲಿಯೇ ಮೇ 19ರಂದು 2 ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರವೂ 8 ಮಕ್ಕಳು ಸೇರಿದಂತೆ 54 ಜನರಿಗೆ ಕೊರೊನಾ ದೃಢಪಟ್ಟಿದೆ. ಇದರಿಂದಾಗಿ ಶನಿವಾರ ಪತ್ತೆಯಾದ 54 ಪ್ರಕರಣಗಳು ಸೇರಿದಂತೆ ಒಟ್ಟು ಶಹಾಪುರ ತಾಲೂಕಿನಲ್ಲಿ 59 ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 87 ಪ್ರಕರಣಗಳು ದೃಢಪಟ್ಟಿರುವ ಬಗ್ಗೆ ಆರೋಗ್ಯ ಇಲಾಖೆ ತಿಳಿಸಿದೆ.
ಶಹಾಪುರದ ಕ್ವಾರಂಟೈನ್ನಲ್ಲಿ ಶನಿವಾರ ದೃಢಪಟ್ಟ ಒಟ್ಟು 54 ಹೊಸ ಪ್ರಕರಣಗಳು ಯಾದಗಿರಿ ತಾಲೂಕಿನ ಅಲಿಪುರ ತಾಂಡಾ ನಿವಾಸಿಗಳೆಂದು ತಿಳಿದು ಬಂದಿದೆ. ಕಳೆದೆರಡು ವಾರಗಳಿಂದ ಇವರನ್ನು ಕನ್ಯಾಕೋಳೂರ ಗ್ರಾಮಕ್ಕೆ ತೆರಳುವ ವಸತಿ ನಿಲಯದ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿತ್ತು. ಒಂದೇ ಕೇಂದ್ರದಲ್ಲಿ 107 ಜನರಿದ್ದು ಅದರಲ್ಲಿ 54 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ತಿಳಿದು ಬಂದಿದೆ. ಇನ್ನಿಬ್ಬರು ಕನ್ಯಾಕೋಳೂರ ಗ್ರಾಮದಲ್ಲಿ ಎರಡು ದಿನ ಉಳಿದಿದ್ದ ಕಾರ್ಮಿಕರಿಬ್ಬರಿಗೂ ಸೋಂಕು ತಗುಲಿರುವುದು ವರದಿಯಾಗಿತ್ತು. ಅವರು ಎರಡು ದಿನ ಗ್ರಾಮದಲ್ಲಿ ಓಡಾಡಿದ್ದರು. ನಂತರ ಕ್ವಾರಂಟೈನ್ಗೆ ಕಳುಹಿಸಲಾಗಿತ್ತು. ಕಿತ್ತೂರ ರಾಣಿ ಚನ್ನಮ್ಮ ಕ್ವಾರಂಟೈನ್ ನಲ್ಲಿ ಓರ್ವ ಕಾರ್ಮಿಕನಿಗೆ, ಚಂದಾಪುರ ಗ್ರಾಮದವನಿಗೆ ಸೋಂಕು ತಗುಲಿತ್ತು. ಇದೀಗ ಒಟ್ಟು ಶಹಾಪುರದಲ್ಲಿ ಸೋಂಕಿತರ ಸಂಖ್ಯೆ 59ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?