ರೈತ ಸಕಲ ಜೀವರಾಶಿಗೆ ಅನ್ನ ನೀಡುವ ದೇವರು
Team Udayavani, Jun 27, 2018, 3:58 PM IST
ಶಹಾಪುರ: ಪ್ರಾಮಾಣಿಕ ದುಡಿಮೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ವ್ಯಕ್ತಿಗಳ ದರ್ಶನದಿಂದ ಮನದ ಮೈಲಿಗೆ ತೊಳೆದು ಹೋಗುತ್ತದೆ ಎಂದು ಲಿಂಗಸೂಗೂರಿನ ಅನುಭಾವಿ ತಿಮ್ಮಗೌಡ ಚಿಲ್ಕಾರಾಗಿ ಹೇಳಿದರು.
ನಗರದ ಬಸವ ಮಾರ್ಗ ಪ್ರತಿಷ್ಠಾನ ಸತ್ಯಂಪೇಟೆ ಲಿಂಗಣ್ಣ ಸತ್ಯಂಪೇಟೆ ಅವರ ವೇದಿಕೆಯಲ್ಲಿ ಆಯೋಜಿಸಿದ್ದ ತಿಂಗಳ ಬಸವ ಬೆಳಕು -76ರ ಸಭೆಯಲ್ಲಿ ಲಿಂ. ಗುರಪ್ಪ ಯಜಮಾನ, ಶಿವಮ್ಮ ತಾಯಿ ಹಾಗೂ ಲಿಂಗಣ್ಣ ಸತ್ಯಂಪೇಟೆ ಅವರ ನೆನಪಿನಲ್ಲಿ ಜರುಗಿದ ಸಭೆಯಲ್ಲಿ ಬಸವ ಬೆಳಕಿನ ಹೊಳೆಯು ಎಂಬ ವಿಷಯ ಕುರಿತು ಅವರು ಮಾತನಾಡಿದರು.
ಹಳ್ಳಿಗೆ ಏಕರಾತ್ರಿ ಪಟ್ಟಣಕ್ಕೆ ಪಂಚರಾತ್ರಿ ಎಂದು ಊರೂರು ಸುತ್ತಿ ತತ್ವ ಪ್ರಸಾರ ಮಾಡುವ ಮಠಾಧೀಶರ ಕೊರತೆ ಪ್ರಸ್ತುತ ದಿನಗಳಲ್ಲಿ ಕಾಣುತ್ತಿದೆ. ಬಸವಾದಿ ಶರಣರ ವಚನಗಳ ಓದು ನಮಗರಿವಿಲ್ಲದೆ ಬದುಕು ಕಟ್ಟಿ ಕೊಡುತ್ತದೆ. ಪ್ರಾಮಾಣಿಕತೆಯಿಂದ ಇರುವಂತೆ ಪ್ರೇರೇಪಿಸುತ್ತದೆ. ನೇರ ನಿಷ್ಠುರವಾಗಿ ಬದುಕುವುದಲ್ಲದೆ ಇವನಮ್ಮವ ಇವ ನಮ್ಮವ ಎಂಬ ಭಾವನೆ ಮೊಳೆಯುವಂತೆ ಪ್ರೇರೇಪಿಸುವ ಅಗಾಧವಾದ ಶಕ್ತಿ ವಚನಗಳಲ್ಲಿದೆ ಎಂದರು.
ರೈತ ಸಂಘದ ನಾಗರತ್ನಾ ಪಾಟೀಲ ಮಾತನಾಡಿ, ರೈತ ದೇಶದ ಶಕ್ತಿ. ಸಕಲ ಜೀವರಾಶಿಗಳಿಗೂ ಅನ್ನ ನೀಡುವ ದೇವರು. ಆದರೆ ವಾಸ್ತವವಾಗಿ ಬಹುರಾಷ್ಟ್ರೀಯ ಕಂಪನಿಗಳು ಆತನ ಬದುಕನ್ನು ನುಂಗಿ ಹಾಕಿವೆ ಎಂದು ಬೇಸರ ವ್ಯಕ್ತಪಡಿಸಿದರು. ಬಸವ ಜ್ಯೋತಿ ಪ್ರಜ್ವಲನೆಯನ್ನು ನಿವೃತ್ತ ಶಿರಸ್ತೇದಾರ್ ನೀಲಾಂಬಿಕೆ ವಿಶ್ವಾರಾಧ್ಯ ಸತ್ಯಂಪೇಟೆ ವಹಿಸಿದ್ದರು.
ಸಭೆಯ ಅಧ್ಯಕ್ಷತೆಯನ್ನು ಭಾರತಿ ಶರಣಬಸ್ಸಪ್ಪಗೌಡ ದರ್ಶನಾಪುರ ವಹಿಸಿದ್ದರು. ರಾಜು ಕುಂಬಾರ ಸ್ವಾಗತಿಸಿದರು. ಶಿವಣ್ಣ ಇಜೇರಿ ನಿರೂಪಿಸಿದರು. ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಕು. ವೀರಭದ್ರ, ಸಂಗೀತ ಕಲಾವಿದ ಚಂದ್ರಶೇಖರ ಗೋಗಿ ಅವರನ್ನು ಇದೇ ಸಂದರ್ಭದಲ್ಲಿ ಪ್ರತಿಷ್ಠಾನ ಸನ್ಮಾನಿಸಿತು.
ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಸತ್ಯಂಪೇಟೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹಾದೇವಪ್ಪ ಗಾಳೆನೋರ ಸ್ವಾಗತ ಗೀತೆ ಹಾಡಿದರು. ಕೊನೆಯಲ್ಲಿ ಚನ್ನಮಲ್ಲಿಕಾರ್ಜುನ ಗುಂಡಾನೋರ ವಂದಿಸಿದರು.
ಸಭೆಯಲ್ಲಿ ಅಡಿವೆಪ್ಪ ಜಾಕಾ, ಅಮರಣ್ಣ ಗುಡಗುಂಟಿ, ಮೋರೆಪ್ಪ ಕರಿಗೇರ, ಹೊನ್ನಾರೆಡ್ಡಿ ವಕೀಲರು, ಶಿವಯೋಗಪ್ಪ ಮುಡಬೂಳ, ಶಿವರುದ್ರ ಉಳ್ಳಿ, ಜಟ್ಟೆಪ್ಪ ಸತ್ಯಂಪೇಟೆ, ಪಂಪಣ್ಣಗೌಡ ಮಳಗ, ಮಲ್ಲಪ್ಪ ನಾಡಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ