ಕೆರೆ-ಹಳ್ಳ-ನದಿಯಲ್ಲಿ ನೀರು ಖಾಲಿ


Team Udayavani, Mar 25, 2019, 5:36 PM IST

yad-1

ಸೈದಾಪುರ: ಕಳೆದ ನಾಲ್ಕೈದು ವರ್ಷಗಳಿಂದ ನಿರೀಕ್ಷಿತ ಪ್ರಮಾಣದ ಮಳೆಯಾಗದ ಪರಿಣಾಮ ಬರಗಾಲ ಮುಂದುವರಿದಿದೆ. ಇದರಿಂದಾಗಿ ಇಲ್ಲಿನ ಜನರು ಮಹಾನಗರಗಳತ್ತ ಗುಳೆ ಹೋಗುತ್ತಿದ್ದಾರೆ.

ಗುರುಮಠಕಲ್‌ ಮತಕ್ಷೇತ್ರದ ಬಹುತೇಕ ಗ್ರಾಮಗಳ ರೈತರು ಕೃಷಿಗಾಗಿ ಮಳೆ ನೀರನ್ನೇ ಅವಲಂಬಿಸಿದ್ದಾರೆ. ಕೆರೆಗಳು ನೀರಿನ ಪ್ರಮುಖ ಆಧಾರಗಳಾಗಿವೆ. ಆದರೆ ಮೂರ್‍ನಾಲ್ಕು ವರ್ಷಗಳಿಂದ ಮಳೆ ಅಭಾವದಿಂದ ಕೆರೆ, ಹಳ್ಳಗಳು ಖಾಲಿಯಾಗಿ ನೆಲ ಬಿರುಕು ಬಿಟ್ಟಿದೆ.

ಕೆರೆ ತುಂಬಿದರೆ ಅದರ ಸುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಹೆಚ್ಚುತ್ತಿತ್ತು. ಆದರೆ ಮಳೆಯಿಲ್ಲದೆ
ಕೆರೆ, ಕುಂಟೆ, ಹಳ್ಳಗಳು ಬತ್ತಿದ ಹಿನ್ನೆಲೆಯಲ್ಲಿ ಕೊಳವೆ ಬಾವಿಗಳಲ್ಲೂ ಅಂತರ್ಜಲದ ಕೊರತೆ ಉಂಟಾಗಿದೆ ಎಂದು ರೈತರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ವರ್ಷದ ಮುಂಗಾರು ವಿಳಂಬವಾದ ಕಾರಣ ಹೆಸರು ಬೆಳೆ ಕೈತಪ್ಪಿತು. ನಂತರದಲ್ಲಿ ಹತ್ತಿ, ತೊಗರಿ
ಬೆಳೆಗಳಿಗೂ ತೇವಾಂಶದ ಕೊರತೆ ಎದುರಾಗಿ ನಿರೀಕ್ಷಿತ ಪ್ರಮಾಣದ ಫಸಲು ಕೈ ತಲುಪಲಿಲ್ಲ. ಆದರೆ ಇದೀಗ ಮಾರುಕಟ್ಟೆಯಲ್ಲಿ ತೊಗರಿ ಬೆಲೆ ಹೆಚ್ಚಾಗಿದೆಯಾದರೂ ಕೃಷಿಕರಿಗೆ ವರದಾನವಿಲ್ಲದಂತಾಗಿದೆ. ಕಳೆದ ವರ್ಷದಂತೆ ಈ ಸಲ ಫಸಲು ಬಂದಿದ್ದರೆ ಸಾಲದಿಂದ ಮುಕ್ತಿ ಪಡೆಯುತ್ತಿದ್ದೇವು ಎನ್ನುತ್ತಾರೆ ರೈತರು. ಕೆರೆ ನೀರಿನಿಂದ ಭತ್ತದ ನಾಟಿ ಮಾಡಿ ಉತ್ತಮ ಫಸಲು ಪಡೆಯಬೇಕು ಎಂಬ ಮಹದಾಸೆ ಹೊಂದಿರುವ ರೈತರಿಗೆ ಸಕಾಲಕ್ಕೆ ಮಳೆ ಬಾರದಿರುವುದು ಗುಳೆ ಹೋಗುವಂತೆ ಮಾಡಿದೆ.
ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾದರೆ ಭೀಮಾ ಮತ್ತು ಕೃಷ್ಣ ನದಿಗಳಿಗೆ ನೀರು ಹರಿದು ಬರುತ್ತದೆ.

ಇದರಿಂದ ನದಿ ಅಂಚಿನಲ್ಲಿರುವ ಸೈದಾಪುರ ಸಮೀಪದ ಬೆಳಗುಂದಿ, ಭೀಮನಹಳ್ಳಿ, ಆನೂರ(ಕೆ),
ಆನೂರ(ಬಿ), ಗುಡೂರು ಮುಂತಾದ ಗ್ರಾಮಗಳ ರೈತರು ನೀರಾವರಿ ಸೌಲಭ್ಯ ಪಡೆದು ಭತ್ತ,
ಹತ್ತಿ ಸೇರಿದಂತೆ ಇನ್ನಿತರ ಬೆಳೆ ಬೆಳೆಯುತ್ತಾರೆ. ಆದರೆ ಪ್ರಸಕ್ತ ವರ್ಷದಲ್ಲಿ ನದಿ ನೀರಿನ ಪ್ರಮಾಣ
ಇಳಿಕೆಯಾದ ಹಿನ್ನೆಲೆಯಲ್ಲಿ ನದಿ ಅಂಚಿನಲ್ಲಿ ಕೇವಲ ಒಂದೇ ಬೆಳೆ ಬೆಳೆಯುವಂತೆ ಸೂಚಿಸಲಾಗಿತ್ತು.

ಹೀಗಾಗಿ ರೈತರು ಒಂದೇ ಬೆಳೆಗೆ ತೃಪ್ತಿಪಡುವಂತಾಗಿದೆ. ಇನ್ನು ಮಳೆಯನ್ನೇ ಆಶ್ರಯಿಸಿರುವ
ಗುರುಮಠಕಲ್‌ ಮತಕ್ಷೇತ್ರದ ಕೂಡೂÉರು, ಬದ್ದೇಪಲ್ಲಿ, ಬಾಲಚೇಡ, ದದ್ದಲ್‌, ಮಾಧ್ವಾರ,
ಕೊಂಕಲ್‌, ಕಣೇಕಲ್‌, ನೀಲಹಳ್ಳಿ ಸೇರಿದಂತೆ ಅನೇಕ ಗ್ರಾಮಗಳ ಜನರು ಹೊಟ್ಟೆಪಾಡಿಗಾಗಿ ಗುಳೆ
ಹೋಗುತ್ತಿದ್ದಾರೆ.

ಕೆರೆ ತುಂಬಿಸುವ ಯೋಜನೆ ಕುಂಠಿತ ಮಳೆಯಾಶ್ರಿತ ಕೆರೆ ನೀರನ್ನೇ ಕೃಷಿಗೆ ಆಧಾರವಾಗಿಸಿಕೊಂಡ
ಗುರುಮಠಕಲ್‌ ಮತಕ್ಷೇತ್ರದಲ್ಲಿ ಕೆರೆ ತುಂಬಿಸುವ ಯೋಜನೆ ಮೂಲಕ ನೀರಾವರಿ ಸೌಲಭ್ಯ
ಕಲ್ಪಿಸಿಕೊಡಲಾಗುವುದು ಎಂದು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿದೆ. ತ್ವರಿತಗತಿಯಲ್ಲಿ ಆರಂಭಿಸಬೇಕಾದ ಯೋಜನೆ ಕುಂಟುತ್ತ ಸಾಗಿದೆ. ಬಹುಗ್ರಾಮ ಕುಡಿಯುವ ನೀರು ಯೋಜನೆ ಹಳ್ಳ ಹಿಡಿದರೂ ಕಿವಿಗೊಡದ ಜನಪ್ರತಿನಿಧಿಗಳು ಇಲ್ಲಿನ ಕೃಷಿಕರಿಗೆ ನೀರಾವರಿ ಸೌಲಭ್ಯ ಕಲ್ಪಿಸಿಕೊಡುವರೇ ಎಂದು ರೈತರು ಪ್ರಶ್ನಿಸಿದ್ದಾರೆ.

„ಭೀಮಣ್ಣ ಬಿ. ವಡವಟ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.