ಮೂಲ ಸೌಕರ್ಯ ವಂಚಿತ ಚಂಡ್ರಿಕಿ
Team Udayavani, Sep 23, 2018, 11:45 AM IST
ಗುರುಮಠಕಲ್: ಗುರುಮಠಕಲ್ ಮತಕ್ಷೇತ್ರದ ಚಂಡ್ರಿಕಿ ಗ್ರಾಮದಲ್ಲಿ ಸರಿಯಾದ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಸೌಕರ್ಯಗಳ ಕೂರತೆಯಿಂದ ಜನತೆ ಪರದಾಡುವಂತಾಗಿದೆ. ಚಂಡರಿಕಿ ಗ್ರಾಪಂ ಕೇಂದ್ರ ಸ್ಥಾನವಾಗಿದ್ದು, 8 ಸಾವಿರ ಜನಸಂಖ್ಯೆ ಈ ಗ್ರಾಮದಲ್ಲಿದ್ದಾರೆ. 12 ಜನ ಪ್ರತಿನಿ ಧಿಗಳನ್ನು ಒಳಗೊಂಡಿದೆ. ಗ್ರಾಮದಲ್ಲಿ ಕೆಲವೆಡೆ ವಿವಿಧ ಯೋಜನೆಗಳಲ್ಲಿ ಸಿ.ಸಿ ರಸ್ತೆ ಮಾಡಲಾಗಿದೆ. ಆದರೆ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡದಿದ್ದರಿಂದ ಚರಂಡಿ ನೀರು ನೇರವಾಗಿ ರಸ್ತೆ ಮೇಲೆ ಹರಿದು ರಸ್ತೆಗಳೆಲ್ಲ ಚರಂಡಿಗಳಾಗಿ ಪರಿವರ್ತನೆಗೊಂಡಿವೆ.
ಗ್ರಾಪಂ ಆಡಳಿತ ನಿರ್ಲಕ್ಷ್ಯ ತಾಳಿದ್ದು ಇದಕ್ಕೆ ಕಾರಣವಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಅನುದಾನ ಬಳಿಸಿ ವ್ಯವಸ್ಥಿತ ಚರಂಡಿ ನಿರ್ಮಾಣ ಮಾಡದೆ ನಿರ್ಲಕ್ಷ್ಯ ಮಾಡಲಾಗಿದೆ. ಇದರ ಪರಿಣಾಮ ಗ್ರಾಮದಲ್ಲಿ ಸ್ವತ್ಛತೆ ಕನಸಾಗಿಯೇ ಉಳಿದಿದೆ.
ಕುಡಿಯುವ ನೀರಿನ ಸಮಸ್ಯೆ ಕೂಡ ಗ್ರಾಮದಲ್ಲಿ ಇದೆ. ಕುಡಿಯುವ ನೀರಿಗಾಗಿ ಶಾಶ್ವತ ಪರಿಹಾರ ಕೂಡ ಕಂಡು ಕೊಂಡಿಲ್ಲ. ಸಮರ್ಪಕ ವಿದ್ಯುತ್ ಸಮಸ್ಯೆ ಇಲ್ಲದೇ ಕತ್ತಲಲ್ಲಿ ವಾಸಿಸುವಂತಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗ್ರಾಮಕ್ಕೆ ಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಗಮನ ನೀಡಬೇಕು. ಸ್ಥಳೀಯ ಶಾಸಕರು ಗ್ರಾಮದ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಗ್ರಾಮಸ್ಥರ ಒತ್ತಾಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ