ಕುತಂತ್ರಿ ಕಾಂಗ್ರೆಸ್‌ಗೆ ಜನ ವಿರೋಧ ಪಕ್ಷದ ಸ್ಥಾನವೂ ನೀಡಿಲ್ಲ

ಸಂಸದ ಖೂಬಾ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದ್ದು ನಮ್ಮೆಲ್ಲರಿಗೂ ಸಂತಸ ಮೂಡಿಸಿದೆ.

Team Udayavani, Aug 19, 2021, 6:16 PM IST

ಕುತಂತ್ರಿ ಕಾಂಗ್ರೆಸ್‌ಗೆ ಜನ ವಿರೋಧ ಪಕ್ಷದ ಸ್ಥಾನವೂ ನೀಡಿಲ್ಲ

ಯಾದಗಿರಿ: ಎರಡು ಬಾರಿಯೂ ವಿರೋಧ ಪಕ್ಷದ ಸ್ಥಾನಕ್ಕೆ ಕೊಡುವುದಕ್ಕೂ ಬಿಟ್ಟಿಲ್ಲ. ಕಾಂಗ್ರೆಸ್‌ ಬಳಿ ಬಿಜೆಪಿ ವಿರುದ್ಧ ಮಾತನಾಡಲು, ಸಂಸತ್‌ನಲ್ಲಿ ಚರ್ಚೆಗೆ ಯಾವುದೇ ವಿಷಯವಿಲ್ಲ. ಗಲಾಟೆ, ಬಹಿಷ್ಕಾರ ಹಾಗೂ ಅಡ್ಡಿಪಡಿಸುವುದೇ ಕಾಂಗ್ರೆಸ್‌ ಕೆಲಸವಾಗಿದ್ದು, ಇಂತಹ ಕಾರ್ಯಗಳನ್ನು ನೋಡಿ ಜನರು ಸುಮ್ಮನಿರಲ್ಲ ಎಂದು ನವೀಕರಿಸಬಹುದಾದ ಇಂಧನ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು.

ಯಾದಗಿರಿಯ ವಿದ್ಯಾಮಂಗಲ ಕಾರ್ಯಾಲಯದಲ್ಲಿ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಮೂರು ಕೃಷಿ ಕಾಯ್ದೆಗಳ ತಿದ್ದುಪಡಿಯಿಂದ ರೈತರ ಬಾಳು ಬಂಗಾರವಾಗಲಿದೆ. ಆದರೆ ಅದನ್ನು ವಿರೋಧಿಸಿ 8-9 ತಿಂಗಳಿಂದ ನಿಜವಾದ ರೈತರಲ್ಲದ ದಲ್ಲಾಳಿಗಳು ಪ್ರತಿಭಟನೆ ನಡೆಸುತ್ತಿದ್ದು, ಎಲ್ಲಿಯೂ ಸಮರ್ಥನೆ ಸಿಕ್ಕಿಲ್ಲ ಎಂದರು.

ಸರ್ಕಾರದ ಯೋಜನೆಯ ಲಾಭ ಒಂದು ಮತಕ್ಷೇತ್ರದಲ್ಲಿ ಕನಿಷ್ಟ 60 ಸಾವಿರ ಕುಟುಂಬಗಳಿಗೆ ತಲುಪಿದೆ. ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಸರ್ಕಾರದ ಸೌಕರ್ಯಗಳ ತಲುಪಿಸಬೇಕು. ಎಲ್ಲ ವರ್ಗಕ್ಕೂ ಅನ್ವಯವಾಗುವ ಆಯುಷ್ಮಾನ್‌ ಭಾರತ, ಉಜ್ವಲ ಯೋಜನೆ, ಉಚಿತ ಶೌಚಾಲಯ ಸೇರಿ ಹಲವು ಯೋಜನೆಗಳನ್ನು ನೀಡಿದ್ದು, ಇದರಿಂದ ದೇಶದ ಎಲ್ಲ ವರ್ಗದ ಜನರು ಬಿಜೆಪಿ ಜತೆಗಿದ್ದಾರೆ ಎಂದರು.

ಯುಪಿಎ 1 ಮತ್ತು 2ನೇ ಅವಧಿ ಸರ್ಕಾರದಲ್ಲಿ ಕೇವಲ 40 ಸಾವಿರ ಕೋಟಿ ರೈತರ ಸಾಲ ಮನ್ನಾವಾಗಿದೆ. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತರನ್ನು ಆರ್ಥಿಕವಾಗಿ ಸಬಲರಾಗಲು ಎಲ್ಲ ರೈತರಿಗಾಗಿ ಯೋಜನೆ ನೀಡಿದ್ದು, 60 ಸಾವಿರ ಕೋಟಿ ರೂಪಾಯಿ ಪ್ರತಿವರ್ಷ ರೈತರಿಗೆ ಸಹಾಯವಾಗುತ್ತಿದೆ ಎಂದರು.

ಸಂಸತ್‌ ಸಂಪ್ರದಾಯದಂತೆ ನೂತನ ಸಚಿವರನ್ನು ಪರಿಚಯಿಸುವ ಸಂಪ್ರದಾಯವನ್ನು ವಿರೋಧಿಸಿ ಕಾಂಗ್ರೆಸ್‌ ಇನ್ನಿತರ ವಿಪಕ್ಷಗಳು ಅಡ್ಡಿಪಡಿಸಿದ್ದವು. ಹಾಗಾಗಿ ಜನರಿಂದ ಆಶೀರ್ವಾದ ಪಡೆಯಲು ಕಲಬುರಗಿ, ಯಾದಗಿರಿ ಹಾಗೂ ರಾಯಚೂರಿನಲ್ಲಿ ಯಾತ್ರೆ ನಡೆಸಲಾಗುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ಈ ಭಾಗದಿಂದ ಸಂಸದ ಖೂಬಾ ಅವರಿಗೆ ಮಂತ್ರಿ ಸ್ಥಾನ ಸಿಕ್ಕಿದ್ದು ನಮ್ಮೆಲ್ಲರಿಗೂ ಸಂತಸ ಮೂಡಿಸಿದೆ. ಸರಳ ವ್ಯಕ್ತಿತ್ವತ ನಾಯಕರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸಮರ್ಪಕ ನೀರಾವರಿ ಸೌಕರ್ಯ ದೊರೆತರೆ ರೈತರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೇಕ್‌ ಪಾಯಿಂಟ್‌ ನಿರ್ಮಾಣ ಅಗತ್ಯವಾಗಿದೆ ಎಂದು ಬೇಡಿಕೆ ಮುಂದಿಟ್ಟಿದ್ದು, ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.  ಇದಕ್ಕು ಮೊದಲು ಜನಾಶೀರ್ವಾದ ಯಾತ್ರೆಯ ಸಂಚಾಲಕ ರಾಜ್ಯ ಬಿಜೆಪಿ ನಾಯಕ ಜಗದೀಶ ಹಿರೇಮನಿ ಮಾತನಾಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರೆಡ್ಡಿ ನಾಯ್ಕಲ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಶಾಸಕ, ಕಲಬುರಗಿ-ಯಾದಗಿರಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಾಜಕುಮಾರ ಪಾಟೀಲ್‌ ತೇಲ್ಕುರ, ವಿಧಾನ ಪರಿಷತ್‌ ಸದಸ್ಯ ಬಿ.ಜಿ. ಪಾಟೀಲ್‌, ಶಶೀಲ್‌ ಜಿ.ನಮೋಶಿ, ಶರಣಪ್ಪ ತಳವಾರ, ಅಮಾತೆಪ್ಪ ಕಂದಕೂರ, ಡಾ|ವೀರಬಸವಂತರೆಡ್ಡಿ ಮುದ್ನಾಳ, ಗುರು ಶಿರವಾಳ, ಚಂದ್ರಶೇಖರಗೌಡ ಮಾಗನೂರ, ಲಲಿತಾ ಅನಪೂರ, ದೇವಿಂದ್ರನಾಥ ನಾದ, ಬಸವರಾಜ ಚಂಡರಕಿ, ವಿಲಾಸ್‌ ಬಿ.ಪಾಟೀಲ್‌, ಪ್ರಭಾವತಿ ಎಂ.ಕಲಾಲ್‌, ಅಮೀನರೆಡ್ಡಿ ಯಾಳಗಿ, ಭೀಮರೆಡ್ಡಿ ಮುದ್ನಾಳ ಇನ್ನಿತರರು ಇದ್ದರು.

ಭವ್ಯ ಸ್ವಾಗತ-ಪ್ರತಿಮೆಗೆ ಮಾಲಾರ್ಪಣೆ
ಕಾರ್ಯಕ್ರಮಕ್ಕು ಮೊದಲು ಸಚಿವ ಖೂಬಾರನ್ನು ನಗರಸಭೆ ಅಧ್ಯಕ್ಷರು, ಪಕ್ಷದ ಪ್ರಮುಖರ ನಿಯೋಗ ಸ್ವಾಗತಿಸಿತು. ಬಳಿಕ ಹತ್ತಿಕುಣಿ ಕ್ರಾಸ್‌ ಮಾರ್ಗವಾಗಿ ವಾಹನದಲ್ಲಿ ಮೆರವಣಿಗೆ ಮೂಲಕ ಗಾಂಧಿ ವೃತ್ತಕ್ಕೆ ತೆರಳಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಿ, ಕನಕ ವೃತ್ತದಲ್ಲಿ ಕನಕದಾಸ, ಅಂಬೇಡ್ಕರ್‌ ವೃತ್ತದಲ್ಲಿ ಡಾ| ಬಾಬಾ ಸಾಹೇಬ ಅಂಬೇಡ್ಕರ್‌ರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.