ಆರೇ ತಿಂಗಳಲ್ಲಿ ಕಿತ್ತೋದ ರಸ್ತೆ; 70 ಲಕ್ಷ ರೂ. ವೆಚ್ಚದ ಕಾಮಗಾರಿ


Team Udayavani, Jul 31, 2020, 7:30 AM IST

ಆರೇ ತಿಂಗಳಲ್ಲಿ ಕಿತ್ತೋದ ರಸ್ತೆ; 70 ಲಕ್ಷ ರೂ. ವೆಚ್ಚದ ಕಾಮಗಾರಿ

ದೇವದುರ್ಗ: ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಿಂದ ಕಮದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಡಾಂಬರ್‌ ರಸ್ತೆ ಆರೇಳು ತಿಂಗಳಲ್ಲೇ ಕಿತ್ತು ಹೋಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆ 70 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ನಿರ್ಮಿಸಲಾಗಿದೆ. 3.5 ಕಿಮೀ ರಸ್ತೆಗೆ ಲಕ್ಷಾಂತರ ರೂ. ಅನುದಾನ ಕಳಪೆ ಗುಣಮಟ್ಟದ ಕಾಮಗಾರಿ ಹಣ ಇದೀಗ ಪೋಲಾಗಿದೆ. ಎಲ್ಲೆಂದರಲ್ಲಿ ರಸ್ತೆ ಕಿತ್ತು ಹೋಗಿದ್ದು, ಸುಗಮ ಸಂಚಾರಕ್ಕೆ ತೊಂದರೆ ಎನಿಸಿದೆ. ಅಲ್ಲಲ್ಲಿ ಬಿದ್ದ ತೆಗ್ಗುಗಳಲ್ಲಿ ಎದ್ದುಬಿದ್ದು ಸಂಚಾರ ಮಾಡಬೇಕಾದಂತ ಸಂಕಷ್ಟ ಗ್ರಾಮಸ್ಥರಿಗೆ ಎದುರಾಗಿದೆ.

ಅಧಿಕಾರಿಗಳು ಮೌನ: ಕಳೆದ ಎರಡು ತಿಂಗಳ ಹಿಂದೆ ಕಳಪೆ ರಸ್ತೆ ಕಾಮಗಾರಿ ಎಲ್ಲೆಂದರಲ್ಲಿ ಕಿತ್ತು ಹೋದ ಹಿನ್ನೆಲೆ ಡಿ.ಕರಡಿಗುಡ್ಡ ಗ್ರಾಮಸ್ಥರೇ ರಸ್ತೆಗಿಳಿದು ಹೋರಾಟ ಕೈಗೊಂಡಾಗ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಗ್ರಾಮಸ್ಥರ ಮಧ್ಯೆ ವಾಗ್ಧಾನ ನಡೆದಿತ್ತು. ಅಧಿಕಾರಿ ಎದುರಲ್ಲೇ ಕಳಪೆ ರಸ್ತೆ ಕೈಯಿಂದ ರಸ್ತೆ ಕಿತ್ತು ತೋರಿಸಿದ ಪ್ರಸಂಗ ಜರುಗಿತು. ಇಷ್ಟರಲೇ ಅವಾಂತರ
ಎದುರಾದರೂ ಮೇಲಧಿ ಕಾರಿಗಳು ಕ್ರಮವಹಿಸದೇ ಇರುವುದು ಅನುಮಾನಕ್ಕೆ ಎಡೆ ಮಾಡಿದೆ.

ಶಾಸಕರ ಪರಿಶ್ರಮ: ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಪಡಿಸಲು ಸರಕಾರ ಮಟ್ಟದಲ್ಲಿ ಹಗಲು ರಾತ್ರಿ ಎನ್ನದೇ ಶಾಸಕರು ಪರಿಶ್ರಮ ಪಟ್ಟು ಅನುದಾನ ತರಲಾಗುತ್ತಿದೆ. ಟೆಂಡರ್‌ ಪಡೆದ ಗುತ್ತಿಗೆದಾರರು ಕಳಪೆ ಗುಣಮಟ್ಟದ ಕಾಮಗಾರಿ ಮಾಡುವುದರಿಂದ ಮಾದರಿ ತಾಲೂಕು ಅಭಿವೃದ್ಧಿಗೆ ಕಪ್ಪುಚುಕ್ಕಿ ಎಂಬಂತಾಗಿದೆ.

ಮೂರುವರೆ ಕಿಮೀ 70 ಲಕ್ಷ: ಡಿ.ಕರಡಿಗುಡ್ಡ ಗ್ರಾಮದಿಂದ ಕಮದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ  ಮೂರುವರೆ ಕಿಮೀ ರಸ್ತೆ ಅಭಿವೃದ್ಧಿಗೆ 70 ಲಕ್ಷ ರೂ.ಅನುದಾನ ಮಂಜೂರಾಗಿದೆ. ಆರೇಳು ವರ್ಷಗಳ ಕಾಲ ಗುಣಮಟ್ಟದ ರಸ್ತೆ ನಿರ್ಮಿಸಲು ಗುತ್ತೆದಾರರು ನಿರ್ಲಕ್ಷ್ಯ ವಹಿಸಿದ ಪರಿಣಾಮ ಕಳಪೆ ಗುಣಮಟ್ಟದ ರಸ್ತೆ ಆರೇಳು ತಿಂಗಳಲೇ ಕಿತ್ತು ಹೋಗಿದೆ. ಒಂದು ವರ್ಷ ಅವಧಿ ನಿರ್ವಹಣೆ ಜವಾಬ್ದಾರಿ ಅಲ್ಲಲ್ಲಿ ಕಿತ್ತುರುವ ರಸ್ತೆಗೆ ಡಾಂಬರ್‌ ಹಾಕದೇ ಬಿಟ್ಟಿರುವ ಹಿನ್ನೆಲೆ ಗ್ರಾಮಸ್ಥರು ಎದ್ದುಬಿದ್ದು ಸಂಚಾರ ಮಾಡಬೇಕಾದಂತ ಸಂಕಷ್ಟ ಬಂದೊದಗಿದೆ.

ಗ್ರಾಮಸ್ಥರು ಆಗ್ರಹ: ಡಿ.ಕರಡಿಗುಡ್ಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ಗ್ರಾಪಂ ಅಧಿ ಕಾರಿಗಳು ಕೂಡಲೇ ಗಮನಹರಿಸಬೇಕು. ಬಿದ್ದಿರುವ ಗುಂಡಿಗಳಲ್ಲಿ ಮರಂ ಹಾಕಿ. ರಸ್ತೆಗೆ ಬಾಗಿರುವ ಜಾಲಿಗಿಡಗಳು ದುರಸ್ತಿ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಗ್ರಾಮಸ್ಥರಾದ ರಂಗಪ್ಪ, ಬಸವರಾಜ ಆಗ್ರಹಿಸಿದರು.

ಕಮದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಿತ್ತಿದ್ದು, ಗಮನಕ್ಕಿದೆ. ಡಾಂಬರ್‌ ಹಾಕಿ ದುರಸ್ತಿ ಮಾಡಿಸುವಂತೆ ಈಗಾಗಲೇ ಗುತ್ತಿಗೆದಾರರಿಗೆ ತಿಳಿಸಿದ್ದೇನೆ. ರಂಗಪ್ಪ ರಾಮದುರ್ಗ, ಪ್ರಭಾರಿ ಎಇಇ.

ದೇವದುರ್ಗ: ಡಿ.ಕರಡಿಗುಡ್ಡ ಗ್ರಾಮದಿಂದ ಕಮದಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಿತ್ತು ಹೋಗಿದೆ.

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.