ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಹಿರಿದು
Team Udayavani, Jun 16, 2022, 3:20 PM IST
ಸಿರವಾರ: ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು ಎಂದು ಮಾಜಿ ಶಾಸಕ ಜಿ.ಹಂಪಯ್ಯ ನಾಯಕ ಹೇಳಿದರು.
ಪಟ್ಟಣದಲ್ಲಿ ಕಾಂಗ್ರೆಸ್ ಮಹಿಳಾ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ “ನಾ ನಾಯಕಿ-ನಾರಿಶಕ್ತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷವು ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಂತಹ ಧಿಧೀಮಂತ ನಾಯಕರ ಪಕ್ಷ. ನಮ್ಮ ಪಕ್ಷದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ನೀಡಲಾಗಿದೆ. ತಾಲೂಕು ಅಧ್ಯಕ್ಷೆ ರೇಣುಕಾ ಅವರು ಮಹಿಳೆಯರನ್ನು ಸಂಘಟಿಸುವುದರ ಮೂಲಕ ತಾವು ಸಹ ಪುರುಷರಿಗೆ ಕಡಿಮೆ ಇಲ್ಲ ಎಂಬುವುದನ್ನು ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವುದರ ಮೂಲಕ ತೋರಿಸುತ್ತಿರುವುದು ಶ್ಲಾಘನೀಯ ಎಂದರು.
ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ರೇಣುಕಾ ಎನ್ ಮಾತನಾಡಿ, ಮಹಿಳೆಯರು ಪುರುಷರ ಸರಿಸಮಾನವಾಗಿ ಪಕ್ಷ ಸಂಘಟನೆಗೆ ದುಡಿಯಬೇಕು. ಮಹಿಳಾ ಪದಾಧಿಕಾರಿಗಳು ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಮುಂಬರುವ ಎಲ್ಲ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಮಹಿಳೆ ಪಾತ್ರ ಪ್ರಮುಖವಾದದ್ದು ಎಂಬುವುದನ್ನು ತೋರಿಸಬೇಕು. ಮಹಿಳಾ ಘಟಕದ ಬೆಳವಣಿಗೆಗೆ ಪಕ್ಷದ ಹಿರಿಯರ ಸಹಕಾರವು ಅಗತ್ಯ ಎಂದರು.
ಹಿರಿಯ ಮುಖಂಡ ಚುಕ್ಕಿ ಸೂಗಪ್ಪ ಸಾಹುಕಾರ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲ ಬೆಣ್ಣೆ ಮಾತನಾಡಿದರು. ಪ್ರತಿಭಾರೆಡ್ಡಿ, ಮುಖಂಡರಾದ ಶಿವುಕುಮಾರ ಚುಕ್ಕಿ, ಕಲ್ಲೂರು ಬಸವರಾಜ ನಾಯಕ, ರಮೇಶ ದರ್ಶನಕರ್, ದಾನನಗೌಡ, ಶಿವಶರಣ ಅರಕೇರಿ, ಅನಿತಾ ಗಣದಿನ್ನಿ, ಚಂದ್ರಕಲಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ