ಸುರಪುರದಲ್ಲಿ ಕಳ್ಳನ ಸೆರೆ: 10 ಬೈಕ್ ವಶ
Team Udayavani, Jun 2, 2022, 5:07 PM IST
ಸುರಪುರ: ನಗರ ಮತ್ತು ಸುತ್ತಮುತ್ತಲೂ ಕಳೆದ ನಾಲ್ಕೈದು ತಿಂಗಳಿಂದ ನಡೆಯುತ್ತಿದ್ದ ಬೈಕ್ಗಳ ಕಳ್ಳತನ ಪ್ರಕರಣಗಳು ಬೈಕ್ ಮಾಲೀಕರಿಗೆ ತಲೆನೋವಾಗಿದ್ದವು. ಈ ಬಗ್ಗೆ ಪುರಪುರ ಠಾಣೆಯಲ್ಲಿ ಹಲವು ದೂರುಗಳು ದಾಖಲಾಗಿದ್ದವು.
ಕಳ್ಳರ ಪತ್ತೆಗೆ ಠಾಣೆ ಅಧಿಕಾರಿಗಳಾದ ಸುನೀಲ ಮೂಲಿಮನಿ, ಕೃಷ್ಣ ಸುಬೇದಾರ ಮತ್ತು ನಬಿಲಾಲ್ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿತ್ತು. ಈ ತಂಡ ಕಳ್ಳನ ಪತ್ತೆ ಹಚ್ಚಲು ಯಶಸ್ವಿಯಾಗಿ ಕಳ್ಳತನ ಮಾಡಿದ್ದ 10 ಮೋಟಾರ್ ಬೈಕ್ ಗಳನ್ನು ವಶಪಡಿಸಿಕೊಂಡಿದೆ.
ಈ ಬಗ್ಗೆ ಬುಧವಾರ ಸುರಪುರದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಡಾ|ಸಿ.ಬಿ. ವೇದಮೂರ್ತಿ, ದೇವದುರ್ಗದ ಹನುಮಂತ ಎಂಬ ವ್ಯಕ್ತಿಯ ಮೇಲೆ ಅನುಮಾನಗೊಂಡ ನಮ್ಮ ಅಧಿಕಾರಿಗಳು ವಿಚಾರಿಸಿದಾಗ ಕಳ್ಳತನ ಬಯಲಿಗೆ ಬಂದಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದರು.
ಆರೋಪಿ ಯಾದಗಿರಿ ಜಿಲ್ಲೆಯ ವಿವಿಧೆಡೆ ಮತ್ತು ಲಿಂಗಸುಗೂರಿನಲ್ಲೂ ಕಳ್ಳತನ ಮಾಡಿದ್ದಾನೆ. ಜನರು ಬೈಕ್ ಗಳಿಗೆ ಸೈಡ್ ಲಾಕ್ ಹಾಕಿ, ಅವಶ್ಯವಿದ್ದಲ್ಲಿ, ವ್ಹೀಲ್ ಲಾಕ್ ಮಾಡಬೇಕು ಎಂದು ಮನವಿ ಮಾಡಿದರು. ಕಳ್ಳನ ಪತ್ತೆ ಹಚ್ಚಿದ ಅಧಿಕಾರಿಗಳಿಗೆ ಬಹುಮಾನ ನೀಡಲಾಗುವುದು ಎಂದು ಎಸ್ಪಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Movie Review: ಆಡು ಜೀವಿದಂ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…