ತೊಗರಿ ಖರೀದಿ ಕೇಂದ್ರ ಬಂದ್‌


Team Udayavani, Feb 19, 2018, 5:41 PM IST

yad-2.jpg

ವಡಗೇರಾ: ಕಳೆದ ಹಲವು ತಿಂಗಳಿಂದ ಸಮೀಪದ ಬೆಂಡೆಬೆಂಬಳಿ ಗ್ರಾಮದ ವ್ಯವಸಾಯ ಸಹಕಾರ ಸಂಘದ ತೊಗರಿ ಖರೀದಿ ಕೇಂದ್ರ ಮುಚ್ಚಿರುವುದರಿಂದ ಈ ಭಾಗದ ಅನೇಕ ರೈತರು ತೊಂದರೆ ಅನುಭವಿಸುತ್ತಿದ್ದಾರೆ.

ಈ ಹಿಂದೆ ಜಿಲ್ಲೆಯಾದ್ಯಂತ ಅನೇಕ ರೈತರು ತೊಗರಿ ಖರೀದಿ ಅವಧಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿ ರಸ್ತೆ ತಡೆ ಮಾಡಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ್ದರು. ಆಗ ಜಿಲ್ಲಾಧಿಕಾರಿ ತೊಗರಿ ಖರೀದಿ ಅವಧಿಯನ್ನು ವಿಸ್ತರಿಸಬೇಕು ಎಂದು ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

ಆಗ ಸರಕಾರ ಫೆ. 14ರಿಂದ ಮಾರ್ಚ್‌ 15ರವರೆಗೆ ರೈತರಿಂದ ತೊಗರಿ ಖರೀದಿಸಬೇಕು ಎಂದು ಆದೇಶ ಹೊರಡಿಸಿತ್ತು. ಜಿಲ್ಲೆಯಲ್ಲಿ ಸರಕಾರ ಸ್ಥಾಪನೆ ಮಾಡಿದ ತೊಗರಿ ಕೇಂದ್ರದಲ್ಲಿ ರೈತರಿಂದ ತೊಗರಿ ಖರೀದಿಸುತಿವೆ. ಆದರೆ ಹಲವು ದಿನಗಳಿಂದ ಬೆಡೆಬೆಂಬಳಿ ತೊಗರಿ ಕೇಂದ್ರದಲ್ಲಿ ತೊಗರಿ ಖರೀದಿಸುತ್ತಿಲ್ಲ. 

ಹೀಗಾಗಿ ತೊಗರಿ ಖರೀದಿ ಕೇಂದ್ರದ ಎದುರು ಲಾರಿ, ಚಕ್ಕಡಿ ಹಾಗೂ ಟ್ರ್ಯಾಕ್ಟರ್‌ ಗಳಲ್ಲಿ ನೂರಾರು ಕ್ವಿಂಟಲ್‌ ತೊಗರಿ ತಂದು ತೊಗರಿ ಖರೀದಿ ಕೇಂದ್ರದ ಎದುರು ರೈತರು ಕಾಯುತ್ತಿದ್ದಾರೆ. ಆದರೆ ಅತ್ತ ವ್ಯವಸಾಯ ಸೇವಾ ಸಹಕಾರ ಸಂಘದ ಯಾವೊಬ್ಬ ಸಿಬ್ಬಂದಿ ಸುಳಿಯುತ್ತಿಲ್ಲ ಎಂದು ರೈತರು ದೂರಿದ್ದಾರೆ.

ಬೆಂಡೆಬೆಂಬಳಿ ಗ್ರಾಮದಲ್ಲಿರುವ ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಇಲ್ಲಿಯವರೆಗೂ ಸುಮಾರು 661 ಜನ
ರೈತರು ತೊಗರಿ ಮಾರಾಟಕ್ಕಾಗಿ ಹೆಸರು ನೋಂದಾಯಿಸಿದ್ದಾರೆ. ಅದರಲ್ಲಿ ಈಗಾಗಲೇ ಸುಮಾರು 392 ರೈತರಿಂದ ಸುಮಾರು 5,444 ಕ್ವಿಂಟಲ್‌ ತೊಗರಿ ಖರೀದಿಸಲಾಗಿದೆ. ಇನ್ನೂಳಿದ 269 ಜನ ರೈತರಿಂದ ತೊಗರಿ ಖರೀದಿಸಬೇಕಾಗಿದೆ. 

ರೈತರ ಆರೋಪ: ಬೆಂಡೆಬೆಂಬಳಿ ವ್ಯವಸಾಯ ಸಹಕಾರ ಸಂಘದಲ್ಲಿ ಸ್ಥಾಪನೆ ಮಾಡಿರುವ ತೊಗರಿ ಕೇಂದ್ರದ ಕೆಲ ಸಿಬ್ಬಂದಿ ಶ್ರೀಮಂತ ರೈತರಿಂದ ತೊಗರಿ ಖರೀದಿಸುತ್ತಿದ್ದಾರೆ. ಆದರೆ ಬಡ ರೈತರ ತೊಗರಿ ಖರೀದಿಸಲು ಸಿಬ್ಬಂದಿ ಕುಂಟು ನೆಪ ಹೇಳುತ್ತಿದ್ದಾರೆ ಎಂದು ರೈತರ ಆರೋಪವಾಗಿದೆ.

ಆದಕಾರಣ ಜಿಲ್ಲಾಧಿಕಾರಿಗಳು ಇತ್ತ ಕಡೆ ಗಮನಹರಿಸಿ ಬೆಂಡೆಬೆಂಬಳಿ ಗ್ರಾಮದಲ್ಲಿರುವ ತೊಗರಿ ಖರೀದಿ ಕೇಂದ್ರದ
ಸಿಬ್ಬಂ ಗಳ ಮೇಲೆ ಸೂಕ್ತ ಕ್ರಮ ಕೈಗೊಂಡು ರೈತರ ಸಮಸ್ಯೆ ಬಗೆಹರಿಸಬೇಕು ಎಂದು ಈ ಭಾಗದ ಅನೇಕ ಗ್ರಾಮಗಳ ರೈತರು ಆಗ್ರಹಿಸಿದ್ದಾರೆ.

ತೊಗರಿ ತುಂಬಲು ಖಾಲಿ ಚೀಲ ಇರಲಿಲ್ಲ ತೊಗರಿ ತುಂಬಲು ಖಾಲಿ ಚೀಲ ಇರಲಿಲ್ಲ ಎಂಬ ಮಾಹಿತಿ ಬಂದಿದೆ. ಅದಕ್ಕಾಗಿ ಸಮಸ್ಯೆಆಗಿದ್ದು, ನೋಂದಣಿ ಮಾಡಿರುವ ಎಲ್ಲಾ ರೈತರಿಂದ ನಾಳೆಯಿಂದ ಬೆಂಡೆಬೆಂಬಳಿ ತೊಗರಿ ಕೇಂದ್ರದಲ್ಲಿ ತೊಗರಿ ಖರೀದಿಸಲಾಗುವುದು.
  ರಂಗನಾಥ, ಎಪಿಎಂಸಿ ಕಾರ್ಯದರ್ಶಿ ಶಹಾಪುರ

ರೈತರ ಸಮಸ್ಯೆ ಶೀಘ್ರ ನಿವಾರಿಸಿ ಕಳೆದ ಹಲವು ದಿನಗಳಿಂದ ಬೆಂಡೆಬೆಂಬಳಿ ತೊಗರಿ ಕೇಂದ್ರದಲ್ಲಿ ತೊಗರಿ ಖರೀದಿಸುತ್ತಿಲ್ಲ. ಇದರಿಂದ ರೈತರಿಗೆ ಸಾಕಷ್ಟು ಸಮಸ್ಯೆ ಆಗಿದೆ. ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಂಡು ರೈತರ ಸಮಸ್ಯೆ ನಿವಾರಿಸಬೇಕು.
 ನಿಂಗಣ್ಣ ಜಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ, ರೈತ ಸಂಘ ಹಸಿರು ಸೇನೆ

ನಾಮದೇವ ವಾಟ್ಕರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.