ಅಹಮದಾಬಾದನಿಂದ ಯಾದಗಿರಿ ಬಂದ ಕೋವಿಡ್-19 ಸೋಂಕು !
Team Udayavani, May 12, 2020, 1:02 PM IST
ಯಾದಗಿರಿ: ಜಿಲ್ಲೆಯ ಸುರಪುರ ನಗರಕ್ಕೆ ಕಳೆದೆರಡು ದಿನಗಳ ಹಿಂದೆ ಗುಜರಾತ್ ರಾಜ್ಯದ ಅಹಮದಾಬಾದನಿಂದ ಆಗಮಿಸಿದ ದಂಪತಿಗಳಲ್ಲಿ ಕೋವಿಡ್-19 ಸೋಂಕು ದೃಢ ಪಟ್ಟಿದೆ.
ಸೋಂಕಿತ 33 ವರ್ಷದ ಮಹಿಳೆ P- 867, 38 ವರ್ಷದ ಪುರುಷ P- 868 ಈಗಾಗಲೇ ಅಹಮದಾಬಾದನಿಂದ ಸುರಪುರನಲ್ಲಿ ಮದುವೆಯಲ್ಲಿ ಭಾಗವಹಿಸಲು ಬಂದಿದ್ದರು ಎನ್ನಲಾಗಿದೆ.
ಜಿಲ್ಲೆಯಿಂದ ಮಾರ್ಚ್ ನಲ್ಲಿ ಅಹಮದಾಬಾದ್ ಗೆ ತೆರಳಿದ್ದ 3 ಜನ ಮೇ. 9 ರಂದು ಲಾರಿಯ ಮೂಲಕ ಬಾಗಲಕೋಟೆಯ ಹುನಗುಂದ ಹೆದ್ದಾರಿಯಲ್ಲಿ ಇಳಿದು, ಅಲ್ಲಿಂದ ಖಾಸಗಿ ವಾಹನದ ಮೂಲಕ ಸುರಪುರಕ್ಕೆ ಆಗಮಿಸಿ ನೇರವಾಗಿ ಜ್ವರ ತಪಾಸಣೆ ಮಾಡಿ ಚಾಲಕ ಸೇರಿ 4 ಜನರನ್ನು ಕ್ವಾರಂಟೈನ್ ನಲ್ಲಿಟ್ಟು ಗಂಟಲು ದ್ರವ ಸಂಗ್ರಹಿಸಲಾಗಿತ್ತು, ಇವರಲ್ಲಿ ಇಬ್ಬರ ವರದಿ ನೆಗೆಟಿವ್ ಬಂದಿದ್ದು ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದೆ.
ಇದೀಗ ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ದಲ್ಲಿದ್ದವರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿದ್ದಾರೆ.
ಹಸಿರು ಪಟ್ಟಿಯಲ್ಲಿದ್ದ ಯಾದಗಿರಿ ಜಿಲ್ಲೆಗೆ ಮಹಾರಾಷ್ಟ್ರ, ಬೆಂಗಳೂರಿನಿಂದ ಕಾರ್ಮಿಕರು ಆಗಮಿಸಿದ್ದು ಜನರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಮಹಾರಾಷ್ಟ್ರದಲ್ಲಿ ಸೋಂಕು ಉಲ್ಭಣಗೊಂಡಿದ್ದು ಅಲ್ಲಿಂದ ಜಿಲ್ಲೆಗೆ ಮರಳುವವರ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸಲಾಗುತ್ತಿದ್ದು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಮಾಡಲಾಗುತ್ತಿದೆ.
ಸೋಮವಾರ ತಡರಾತ್ರಿ ಪ್ರಕರಣ ದೃಢವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ ಜಿಲ್ಲಾದ್ಯಾಂತ ಲಾಕ್ ಡೌನ್ ನಿಯಮವನ್ನು ಇನ್ನಷ್ಟು ಬಿಗಿಗೊಳಿಸಿದ್ದಾರೆ.
ಮಂಗಳವಾರ ಬೆಳಿಗ್ಗೆಯಿಂದಲೇ ಜಿಲ್ಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಹೆಚ್ಚಿಸಿ ಅನಗತ್ಯ ವಾಹನ ಒಡಾಟಕ್ಕೆ ಬ್ರೇಕ್ ಹಾಕಿ, ಎಲ್ಲಾ ಅಂಗಡಿ ಮುಂಗಟ್ಟು ಮುಚ್ಚಿಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು
Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು